ಕಡಲಬ್ಬರ: ದಡದತ್ತ ಮೀನುಗಾರಿಕೆ ದೋಣಿಗಳು
ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ
Team Udayavani, Sep 19, 2020, 10:27 PM IST
ದಡದಲ್ಲಿ ಲಂಗರು ಹಾಕಿರುವ ಬೋಟ್ಗಳು.
ಮಲ್ಪೆ: ಹವಾಮಾನ ವೈಪರೀತ್ಯ ದಿಂದಾಗಿ ಕರಾವಳಿಯ ಭಾಗದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮೀನುಗಾರಿಕೆಗೆ ತೆರಳಿದ ದೋಣಿಗಳು ಎಚ್ಚರಿಕೆಯ ಕ್ರಮ ವಹಿಸುವಂತೆ ಜಿಲ್ಲಾಡಳಿತ ಮೀನುಗಾರರಿಗೆ ಸೂಚನೆ ನೀಡಿದೆ.
ಸೆ. 20 ಮತ್ತು 23 ಆರೆಂಜ್ ಅಲರ್ಟ್
ಸೆ. 21 ಮತ್ತು 22 ರೆಡ್ ಆಲರ್ಟ್ ಘೋಷಿಸಲಾಗಿದ್ದು ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳಿದ ಬೋಟುಗಳು ವಾಪಸಾಗುತ್ತಿವೆ.
ದಡ ಸೇರುತ್ತಿರುವ ದೋಣಿಗಳು
ಆಳಸಮುದ್ರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗುತ್ತಿದ್ದು, ಇದರಿಂದ ಮೀನುಗಾರಿಕೆ ನಡೆಸಲಾಗದೆ ಬಹುತೇಕ ಬೋಟುಗಳು ಸಮೀಪದ ಬಂದರನ್ನು ಪ್ರವೇಶಿಸುತ್ತಿವೆ. ಮಲ್ಪೆಯ ಹಲವಾರು ಬೋಟುಗಳು ಕಾರವಾರ, ಗೋವಾ ಬಂದರಿಗೆ ತೆರಳಿವೆ. ಬಲವಾದ ಗಾಳಿ ಬೀಸುತ್ತಿದ್ದು ಬೃಹತ್ ಗಾತ್ರದ ಅಲೆಗಳಿಂದಾಗಿ ಮೀನಿಗೆ ಬಲೆ ಹಾಕಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
ಮೈಕ್ ಮೂಲಕ ಸೂಚನೆ
ಮೀನುಗಾರಿಕೆ ಇಲಾಖೆ ಈಗಾಗಲೇ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರರ ಸಂಘವು ಬಂದರಿನಲ್ಲಿ ಮೈಕ್ ಮೂಲಕ ಆಗಾಗ ಮುನ್ನೆಚ್ಚರಿಕೆಯನ್ನು ನೀಡುತ್ತಿದೆ ಎಂದು ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ ತಿಳಿಸಿದ್ದಾರೆ.
ಮೀನುಗಾರರಿಗೆ ಸೂಚನೆ
ಆರೆಂಜ್ ಮತ್ತು ರೆಡ್ ಆಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳವರೆಗೆ ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಲ್ಲ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಆಳಸಮುದ್ರದಲ್ಲಿರುವ ಬೋಟುಗಳನ್ನು ಸಮೀಪದ ಬಂದರಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.
-ಶಿವ ಕುಮಾರ್, ಸಹಾಯಕ ನಿರ್ದೇಶಕರು, ಮೀನುಗಾರಿಕೆ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ