ಹೆಬ್ರಿಯ ವಾಹನ ಮಾಲಕ ಜೈಪುರದಲ್ಲಿ ನಾಪತ್ತೆ
Team Udayavani, May 13, 2020, 6:48 AM IST
ಹೆಬ್ರಿ: ಮಣಿಪಾಲದಿಂದ ಶಿಕ್ಷಕರನ್ನು ಅವರ ಊರಾದ ಜೈಪುರಕ್ಕೆ ಬಿಡಲು ಹೋಗಿರುವ ಟಿ.ಟಿ. ವಾಹನದ ಮಾಲಕ ಪ್ರಕಾಶ ಅವರು ಮೇ 11ರಂದು ರಾತ್ರಿಯಿಂದ ಜೈಪುರದಿಂದ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿಕ್ಷಕರನ್ನು ಅವರವರ ಊರಿಗೆ ಬಿಟ್ಟು ವಾಪಸಾಗುತ್ತಿದ್ದಾಗ ಪ್ರಕಾಶ್ ಜತೆಗಿದ್ದ ಹೆಬ್ರಿಯ ಇನ್ನೋರ್ವ ಚಾಲಕ ವಾಹನದಲ್ಲಿಯೇ ನಿದ್ದೆಗೆ ಜಾರಿದ್ದರು. ಪ್ರಕಾಶ ಅವರು ರಾತ್ರಿ 2 ಗಂಟೆ ಸುಮಾರಿಗೆ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ವಾಹನದ ಕೀಯೊಂದಿಗೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಜತೆಗಿದ್ದ ಜನಾರ್ದನ ಅವರು ಜೈಪುರ ಬಾಂಕ್ರೋಟಾ ಠಾಣೆಗೆ ದೂರು ನೀಡಿದ್ದು, ಶೋಧ ಮುಂದುವರಿದಿದೆ.
ಈ ನಡುವೆ ಪ್ರಕಾಶರ ಪತ್ನಿ ಪ್ರಿಯಾಂಕಾ ಅವರು ಪತಿ ನಾಪತ್ತೆಯಾಗಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕಾಶ ಅವರು ಮೇ 11ರ ರಾತ್ರಿ 2 ಗಂಟೆ ತನಕ ದೂರವಾಣಿ ಸಂಪರ್ಕದಲ್ಲಿದ್ದರು. ಬಳಿಕ ಫೋನ್ ಮಾಡಿದಾಗ ಮೊಬೈಲನ್ನು ವಾಹನದಲ್ಲಿಯೇ ಬಿಟ್ಟು ಹೋಗಿರುವುದು ತಿಳಿದು ಬಂದಿದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು