ಭುಜಂಗ ಪಾರ್ಕ್‌ 2 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ

ಮಕ್ಕಳ ಉದ್ಯಾನವನಕ್ಕೆ ಹೈಟೆಕ್‌ ಸ್ಪರ್ಶ

Team Udayavani, Nov 5, 2019, 5:06 AM IST

zz-23

ಉಡುಪಿ: ನಗರಸಭೆ ನಗರದ ಹೃದಯ ಭಾಗದಲ್ಲಿರುವ ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪದ ಚಿಣ್ಣರ ಆಟದ ಉದ್ಯಾನವನಕ್ಕೆ ಹೈಟೆಕ್‌ ಸ್ಪರ್ಶ ನೀಡಿದ್ದು, ಇದೀಗ ಸಂಜೆಯಾದರೆ ಸಾಕು ಮಕ್ಕಳು ತಂಡೋಪತಂಡವಾಗಿ ಆಗಮಿಸಿ ಪಾರ್ಕ್‌ನಲ್ಲಿ ನಕ್ಕು ನಲಿಯುತ್ತಿದ್ದಾರೆ.

15 ಲ.ರೂ. ವೆಚ್ಚದಲ್ಲಿ ಜಿಮ್‌ ಪರಿಕರ
ಅಜ್ಜರಕಾಡು ಭುಜಂಗ ಪಾರ್ಕಿನ ಎಡ ಭಾಗದಲ್ಲಿ ಚಿಣ್ಣರ ಆಟದ ಉದ್ಯಾನವನ್ನು ನಗರಸಭೆ ಅಮೃತ್‌ ಯೋಜನೆಯಡಿ ಸುಮಾರು 15 ಲ.ರೂ. ವೆಚ್ಚದಲ್ಲಿ ಮಕ್ಕಳ ದೈಹಿಕ ವ್ಯಾಯಾಮ ಮಾಡಲು ಅನುಕೂಲವಾಗುವಂತೆ ಜಿಮ್‌ ಪರಿಕರ ಬಳಸಲಾಗಿದೆ.

ಜಿಮ್‌ ಪರಿಕರ
ಚಿಣ್ಣರ ಉದ್ಯಾನದಲ್ಲೀಗ ಬಯಲು ವ್ಯಾಯಾಮ ಕೇಂದ್ರವಾಗಿ ಪರಿವರ್ತನೆಯಾಗಿದೆ. ಮಕ್ಕಳಿಗಾಗಿ ಲೆಗ್‌ ಪ್ರಸ್‌, ಸೈಕ್ಲಿಂಗ್‌, ಶೋಲ್ಡರ್‌ ಪ್ರಸ್‌, ಸ್ವೆಪ್‌ ಟ್ರೈನರ್‌, ಚೆಸ್ಟ್‌ ಪ್ರಸ್‌ ಸೇರಿಂತೆ 10ಕ್ಕೂ ಅಧಿಕ ಪರಿಕರಗಳನ್ನು ವ್ಯವಸ್ಥಿತವಾಗಿ ಅಳವಡಿಸಲಾಗಿದೆ.

ಮೂಲಭೂತ ಸೌಲಭ್ಯ
ಹಿಂದಿನ ಮಕ್ಕಳ ಪಾರ್ಕ್‌ ಪರಿಕರಗಳು ಸಂಪೂರ್ಣವಾಗಿ ಶಿಥಿಲವಾಗಿದ್ದವು. ಯಾವುದೇ ರೀತಿ ಯಾದ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದೀಗ ಮಕ್ಕಳ ಪಾರ್ಕ್‌ ಜತೆಗೆ ಭುಜಂಗ ಪಾರ್ಕ್‌ಗೆ ವಿದ್ಯುತ್‌ ದೀಪಗಳು ಅಳವಡಿಸಿದ್ದು, ಇದರಿಂದಾಗಿ ಮಕ್ಕಳು ಹೆಚ್ಚಿನ ಸಮಯದ ವರೆಗೆ ಯಾವುದೇ ಭಯವಿಲ್ಲದೆ ಸಮಯ ಕಳೆಯುತ್ತಿದ್ದಾರೆ. ಮುಂದಿನ ದಿನದಲ್ಲಿ ಪಾರ್ಕ್‌ನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು ನಗರಸಭೆ ಚಿಂತನೆ ನಡೆಸುತ್ತಿದೆ.

2 ಕೋ.ರೂ. ವೆಚ್ಚದಲ್ಲಿ ಪಾರ್ಕ್‌ ಅಭಿವೃದ್ಧಿ
ಪ್ರವಾಸೋದ್ಯಮ ಇಲಾಖೆಯಿಂದ 1.50 ಕೋ.ರೂ ಹಾಗೂ ನಗರಸಭೆಯಿಂದ 50 ಲ.ರೂ ಸೇರಿದಂತೆ ಒಟ್ಟು 2 ಕೋ.ರೂ. ವೆಚ್ಚದಲ್ಲಿ ಅಜ್ಜರಕಾಡು ಭುಜಂಗ ಪಾರ್ಕ್‌ ಅಭಿವೃದ್ಧಿಯಾಗಲಿದೆ. ನವೆಂಬರ್‌ ತಿಂಗಳಲ್ಲಿ ಪಾರ್ಕ್‌ನಲ್ಲಿ ಸುಮಾರು 50 ಲ.ರೂ. ವೆಚ್ಚದಲ್ಲಿ ವಿಕಲಚೇತನರಿಗೆ ಅಗತ್ಯವಿರುವ ಪರಿಕರ ಅಳವಡಿಕೆ ಕಾಮಗಾರಿಗೆ ಚಾಲನೆ ದೊರೆಯಲಿದೆ.

70 ಲ.ರೂ. ಹೊರಾಂಗಣ ಜಿಮ್‌
ಭುಜಂಗ ಪಾರ್ಕ್‌ನಲ್ಲಿ ಹಿರಿಯ ನಾಗರಿಕರಿಗೆ ವ್ಯಾಯಾಮ ಹಾಗೂ ದೈಹಿಕ ಕಸರತ್ತು ಮಾಡಲು ಅನುಕೂಲವಾಗುವಂತೆ 70 ಲ.ರೂ. ವೆಚ್ಚದಲ್ಲಿ ಹೊರಾಂಗಣ ಜಿಮ್‌ ನಿರ್ಮಾಣವಾಗಲಿದೆ.

ಈಗ ಭಯವಿಲ್ಲ
ಹಿಂದೆ ಉದ್ಯಾನವನದಲ್ಲಿ ಮಕ್ಕಳನ್ನು ಆಡುವುದಕ್ಕೆ ಬಿಡಲು ಭಯವಾಗುತ್ತಿತ್ತು. ಇದೀಗ ಅಪಾಯಕಾರಿ ಆಟಗಳ ಪರಿಕರ ಬದಲಿಸಿ ದೈಹಿಕ ವ್ಯಾಯಾಮಕ್ಕೆ ಸಹಾಯಕವಾದ ಜಿಮ್‌ ಪರಿಕರ ಆಳವಡಿಸಿರುವುದು ಸಂತೋಷ ತಂದಿದೆ.
-ಪಲ್ಲವಿ ಸಂತೋಷ್‌, ಉಡುಪಿ ನಿವಾಸಿ

15 ಲ.ರೂ. ಅನುದಾನ
ಚಿಣ್ಣರ ಉದ್ಯಾನವನದಲ್ಲಿ ಮಕ್ಕಳ ಆಟಕ್ಕೆ ಹಾಗೂ ದೈಹಿಕ ವ್ಯಾಯಾಮಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದಕ್ಕೆ ಅಮೃತ್‌ ಯೋಜನೆಯಡಿ ಸುಮಾರು 15 ಲ.ರೂ. ಅನುದಾನ ಬಳಸಿಕೊಳ್ಳಲಾಗಿದೆ.
– ಆನಂದ ಸಿ. ಕೊಲ್ಲೋಳಿಕರ್‌, ಪೌರಾಯುಕ್ತ, ಉಡುಪಿ ನಗರಸಭೆ

ಇನ್ನಷ್ಟು ಅಭಿವೃದ್ಧಿ ಯೋಜನೆ
ಅಜ್ಜರಕಾಡು ಭುಜಂಗ ಪಾರ್ಕ್‌ ಇನ್ನಷ್ಟು ಅಭಿವೃದ್ಧಿಪಡಿಸುವ ಯೋಜನೆಯಿದೆ. ಆದರೆ ನಗರಸಭೆಯಲ್ಲಿ ಜನಪ್ರತಿನಿಧಿಗಳು ಆಡಳಿತ ವಹಿಸಿಕೊಳ್ಳದ ಕಾರಣ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ.
-ರಶ್ಮಿ ಭಟ್‌, ನಗರಸಭೆ ಸದಸ್ಯೆ, ಅಜ್ಜರಕಾಡು ವಾರ್ಡ್‌

ಚಿಟ್ಟೆ ಪಾರ್ಕ್‌: ಚರ್ಚೆ
ಉಡುಪಿ ಭುಜಂಗ ಪಾರ್ಕಿನಲ್ಲಿ ಚಿಟ್ಟೆ ಪಾರ್ಕ್‌ ನಿರ್ಮಿಸುವ ಕುರಿತು ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.
-ಕೆ. ರಘುಪತಿ ಭಟ್‌, ಶಾಸಕ ಉಡುಪಿ

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.