ರಾಜೇಂದ್ರರಿಂದ ರಾಮನಾಥರ ವರೆಗೆ ಪೇಜಾವರರ ಪಯಣ


Team Udayavani, Dec 26, 2018, 11:49 AM IST

swamiji.jpg

ಉಡುಪಿ: ದೇಶದ ಪ್ರಥಮ ರಾಷ್ಟ್ರಪತಿ ಬಾಬು ರಾಜೇಂದ್ರಪ್ರಸಾದ್‌ ಅವರಿಂದ ಹಿಡಿದು ಉಡುಪಿಗೆ ಗುರುವಾರ ಆಗಮಿಸುವ ಈಗಿನ 14ನೇ ರಾಷ್ಟ್ರಪತಿ ರಾಮನಾಥ ಕೋವಿಂದರವರೆಗೆ ಸಂಪರ್ಕ ಹೊಂದಿದ ಸಮಕಾಲೀನ ಅಪರೂಪದ ಸ್ವಾಮಿಗಳು ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು.

ಗ್ಯಾನಿ ಜೈಲ್‌ ಸಿಂಗ್‌ ರಾಷ್ಟ್ರಪತಿಗಳಾಗಿದ್ದ ಸಂದರ್ಭ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದಾಗ  ಪೇಜಾವರ ಶ್ರೀಗಳ ವಿದ್ಯಾಗುರು ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಮಾನ್ಯತೀರ್ಥರು ಪರ್ಯಾಯ ಪೀಠಾರೂಢರಾಗಿದ್ದರು (1986-87). ಈಗ ರಾಮನಾಥ ಕೋವಿಂದರು ಬರುವಾಗ ಶ್ರೀ ವಿದ್ಯಾ ಮಾನ್ಯರ ಪಟ್ಟಶಿಷ್ಯ ಶ್ರೀ ವಿದ್ಯಾಧೀಶ ತೀರ್ಥರು ಪರ್ಯಾಯ ಸ್ವಾಮಿಗಳು. ಹಿಂದಿನ ವಿವಿಧ ರಾಷ್ಟ್ರಪತಿಗಳು ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದರೂ, ಆ ಸಂದರ್ಭ ಪೇಜಾವರ ಶ್ರೀಗಳು ಉಪಸ್ಥಿತರಿದ್ದರೂ ಪೇಜಾವರ  ಪರ್ಯಾಯದ ಅವಧಿಯಲ್ಲಿ ರಾಷ್ಟ್ರಪತಿಗಳಾಗಿ ಶ್ರೀಕೃಷ್ಣಮಠಕ್ಕೆ ಬಂದದ್ದು ಪ್ರಣವ್‌ ಮುಖರ್ಜಿ ಮಾತ್ರ. ಇದು 2017ರ ಜೂನ್‌ 18ರಂದು. ಮುಖರ್ಜಿಯವರು ಪೇಜಾವರ ಶ್ರೀಗಳ ಐದನೆಯ ಐತಿಹಾಸಿಕ ಪರ್ಯಾಯದ ಉತ್ತರಾರ್ಧ ಅವಧಿಯಲ್ಲಿ ಆಗಮಿಸಿದ್ದರು. 
ಪೇಜಾವರ ಶ್ರೀಗಳ ವಿದ್ಯಾಗುರು ಶ್ರೀ ವಿದ್ಯಾಮಾನ್ಯತೀರ್ಥರು 1960ರ ದಶಕದಲ್ಲಿ ದಿಲ್ಲಿಯಲ್ಲಿ ನಡೆಸಿದ ಯಾಗದಲ್ಲಿ ಅಂದಿನ ರಾಷ್ಟ್ರಪತಿ ಬಾಬು ರಾಜೇಂದ್ರಪ್ರಸಾದ್‌ ಪಾಲ್ಗೊಂಡಿದ್ದರು. ರಾಜೇಂದ್ರ ಪ್ರಸಾದ್‌ ಅವರು ರಾಷ್ಟ್ರಪತಿಯಾದಾಗ ಪೇಜಾವರ ಶ್ರೀಗಳು ಹೈದರಾಬಾದ್‌ನಲ್ಲಿ ಆಯೋಜಿಸಿದ ತಣ್ತೀಜ್ಞಾನ ಸಮ್ಮೇಳನವನ್ನು ಉದ್ಘಾಟಿಸಿದ್ದರು. 

ಇಂದಿರಾಗಾಂಧಿ, ಪಿ.ವಿ.ನರಸಿಂಹ ರಾವ್‌, ವಿ.ಪಿ.ಸಿಂಗ್‌, ಎಚ್‌.ಡಿ.ದೇವೇಗೌಡ, ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿರುವಾಗ ಮತ್ತು ಈಗಿನ ಪ್ರಧಾನಿ ನರೇಂದ್ರ ಮೋದಿಯವರನ್ನು ಪೇಜಾವರ ಶ್ರೀಗಳು ಭೇಟಿ ಮಾಡಿದ್ದರು. ಇವರಲ್ಲಿ ಬಹುತೇಕರು ಉಡುಪಿಗೆ ಆಗಮಿಸಿದ್ದರು. ಪೇಜಾವರ ಶ್ರೀಗಳ ಪರ್ಯಾಯ ಅವಧಿಯಲ್ಲಿ (2000-01) ಪ್ರಧಾನಿಯಾಗಿದ್ದ ವಾಜಪೇಯಿಯವರು ರಾಜಾಂಗಣ ಉದ್ಘಾಟಿಸಿದ್ದರು.ಈಗ ರಾಮನಾಥ ಕೋವಿಂದ್‌ ಆಗಮಿಸುತ್ತಿರುವುದು ವಿಶೇಷವಾಗಿ ಕೇಂದ್ರ ಸಚಿವೆ ಉಮಾಶ್ರೀ ಭಾರತಿಯವರ ಪ್ರಯತ್ನದಿಂದ. ಪೇಜಾವರ ಶ್ರೀಗಳಿಂದ ಸನ್ಯಾಸ ಸ್ವೀಕರಿಸಿದ ಉಮಾಶ್ರೀ ಭಾರತಿಯವರು ಗುರುಭಕ್ತಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ರಾಷ್ಟ್ರಪತಿಗಳಾಗಿದ್ದ ಆರ್‌. ವೆಂಕಟ್ರಾಮನ್‌ ಉಪರಾಷ್ಟ್ರಪತಿಗಳಾಗಿದ್ದಾಗ ಪೇಜಾವರ ಶ್ರೀಗಳ ಮೂರನೆಯ ಪರ್ಯಾಯದಲ್ಲಿ (1984-85 ಅವಧಿ, 7-12- 1985ರಂದು) ಶ್ರೀಕೃಷ್ಣಧಾಮ ಛತ್ರ ಉದ್ಘಾಟಿಸಿದ್ದರು. ರಾಷ್ಟ್ರಪತಿ ಹುದ್ದೆಯಿಂದ ನಿರ್ಗಮಿಸುವಾಗ ದಿಲ್ಲಿಯಲ್ಲಿ ಶ್ರೀಗಳನ್ನು ಭೇಟಿ ಮಾಡಿದ್ದರು. ಡಾ| ಶಂಕರದಯಾಳ್‌ ಶರ್ಮ ಅವರು ಪುತ್ತಿಗೆ ಮಠದ ಪರ್ಯಾಯದಲ್ಲಿ (1992-93) ಗೀತಾ ಮಂದಿರಕ್ಕೆ ಶಿಲಾನ್ಯಾಸ ನಡೆಸಿದ್ದರು. ಅದಕ್ಕೂ ಹಿಂದೆ ಉಪರಾಷ್ಟ್ರಪತಿಗಳಾಗಿದ್ದ ಬಿ.ಡಿ.ಜತ್ತಿ, ಕೃಷ್ಣಕಾಂತ್‌, ರಾಷ್ಟ್ರಪತಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ಡಾ|ಅಬ್ದುಲ್‌ ಕಲಾಂ (ಕಾಣಿಯೂರು ಮಠದ ಪರ್ಯಾಯ 2014-15) ಉಡುಪಿಗೆ ಆಗಮಿಸಿದ್ದರು. ಪೇಜಾವರ ಶ್ರೀಗಳವರನ್ನು ಡಾ| ಶಂಕರದಯಾಳ್‌ ಶರ್ಮ ದಿಲ್ಲಿಯಲ್ಲಿ, ಡಾ|ಕಲಾಂ ಬೆಂಗಳೂರಿನ ವಿದ್ಯಾಪೀಠದಲ್ಲಿ, ವಿ.ವಿ.ಗಿರಿಯವರು ಹೈದರಾಬಾದ್‌ನಲ್ಲಿ ರಾಷ್ಟ್ರಪತಿಯಾಗಿರುವಾಗ ಭೇಟಿ ಮಾಡಿದ್ದರು.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.