ಉಡುಪಿ: ಉಸ್ತುವಾರಿ ಸಚಿವ ಬೊಮ್ಮಾಯಿ ವಿಡಿಯೋ ಕಾನ್ಫೆರನ್ಸ್ ಸಭೆ
Team Udayavani, Aug 20, 2020, 11:15 PM IST
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರು ಜಿಲ್ಲೆಯಲ್ಲಿನ ನೆರೆ ಮತ್ತು ಪ್ರವಾಹ ಸ್ಥಿತಿಗತಿಗಳ ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ, ಬೈಂದೂರು ಕಿರಿಮಂಜೇಶ್ವರದಲ್ಲಿ ದೋಣಿ ದುರಂತದಿಂದ ಮೃತರಾದ ಕುಟುಂಬಗಳಿಗೆ ಮುಖ್ಯಮಂತ್ರಿಗಳ ವಿಶೇಷ ಹೆಚ್ಚುವರಿ ಪರಿಹಾರ ಕೊಡಿಸುವ ಸಲುವಾಗಿ ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ಬೊಮ್ಮಾಯಿ ಅವರು ಸೂಚಿಸಿದರು.
ಮನೆಯಿಂದ ಹಾನಿಗೊಳಗಾದ ಮನೆಗಳ ಕೂಲಂಕಷ ಸರ್ವೆ ಹಾಗೂ ‘ಎ’, ‘ಬಿ’, ‘ಸಿ’ ವರ್ಗೀಕರಣದ ವೇಳೆ ಗರಿಷ್ಠ ಪರಿಹಾರ ನೀಡಲು ಕ್ರಮ ವಹಿಸುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಬೆಳೆ ಹಾನಿ ಸಮೀಕ್ಷೆಗೆ ವಿಶೇಷ ಗಮನ ಹರಿಸುವಂತೆಯೂ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ಸೂಚಿಸಿದರು.
ಕೊವಿಡ್ 19 ಸೋಂಕು ನಿರ್ವಹಣೆಯಲ್ಲಿ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಿಕೊಂಡು ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇನ್ನು, ಪ್ರಾಕೃತಿಕ ವಿಕೋಪ, ಕೃಷಿ ಚಟುವಟಿಕೆ, ಕೋವಿಡ್ ನಿರ್ವಹಣೆ ಮತ್ತಿತರ ವಿಷಯಗಳ ಬಗ್ಗೆ ಸಚಿವರು ಈ ವಿಡಿಯೀ ಕಾನ್ಫೆರೆನ್ಸ್ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿದರು.
ಸಭೆಯಲ್ಲಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಶ್ರೀ ಕಿರಣ್ ಫಡ್ನೇಕರ್, ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಶ್ರೀ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿಗಳಾದ ಶ್ರೀ ರಾಜು ಕೆ., ಜಿಲ್ಲಾ ಆರೋಗ್ಯ ಅಧಿಕಾರಿ ಶ್ರೀ ಸುಧೀರ್ ಸೂಡ, ಕೃಷಿ ಉಪ ನಿರ್ದೇಶಕರಾದ ಶ್ರೀ ಕೆಂಪೇಗೌಡ, ಹಿರಿಯ ತೋಟಗಾರಿಕಾ ಅಧಿಕಾರಿಗಳಾದ ಶ್ರೀಮತಿ ಭುವನೇಶ್ವರಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ; ಜೂನ್ನಿಂದಲೇ ಸ್ಪೋಕನ್ ಇಂಗ್ಲಿಷ್ ತರಬೇತಿ
ಉಡುಪಿ: ರೈಲಿನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಹೊಸ ಸರಕಾರಿ ಹಾಸ್ಟೆಲ್ಗೆ 6.5 ಕೋ.ರೂ. ಬಿಡುಗಡೆ
ಕಾಪು : ಪತ್ನಿಗೆ ಕಿರುಕುಳ ನೀಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶಕ್ಕೆ
ಮಣಿಪಾಲ: ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಬೈಕ್ ; ವಿದ್ಯಾರ್ಥಿ ಸಾವು
MUST WATCH
ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ
IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್
Wheel Chair Romeo actor exclusive interview | RELEASING ON MAY 27TH
ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ
ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?
ಹೊಸ ಸೇರ್ಪಡೆ
ಮಂಗಳಕ್ಕೆ ವಿಜ್ಞಾನಿಗಳ 30 ದಿನಗಳ ಟ್ರಿಪ್! ಅಮೆರಿಕ ಬಾಹ್ಯಾಕಾಶ ಸಂಸ್ಥೆಯ ವಿಶಿಷ್ಟ ಸಾಹಸ
ಈತ ಒಬ್ಬ ವಿಶಿಷ್ಟ ಕಳ್ಳ..ಕದ್ದ ಮೇಲೆ “ಐ ಲವ್ ಯೂ’ ಎಂದ!
ಏಷ್ಯನ್ ಕಪ್ ಹಾಕಿ: ಇಂಡೋನೇಶ್ಯ ಎದುರಾಳಿ: ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
ಭಾರತೀಯ ರೈಲ್ವೆಯಿಂದ ಜೂ. 21ರಿಂದ “ಶ್ರೀ ರಾಮಾಯಣ ಯಾತ್ರೆ’
ಕಬ್ಬಿಣದ ಅದಿರು ರಫ್ತು ನಿಷೇಧ ತೆರವು ಆದೇಶ: ಬಂದರಿಗೆ ಅದಿರು ಹರಿದು ಬರುವ ನಿರೀಕ್ಷೆ