ನಗರದಲ್ಲಿ ಜಲಪ್ರಳಯ: ಪ್ರಕೃತಿ ವಿಕೋಪ ಎದುರಿಸಲು ಉಡುಪಿ ಜಿಲ್ಲಾಡಳಿತ ಎಷ್ಟು ಸನ್ನದ್ಧ?

ಒಂದು ದಿನದ ಮಳೆಗೆ ಜಲಪ್ರಳಯ? ಕೃತಕ ನೆರೆಗೆ ಯಾರು ಕಾರಣ?

Team Udayavani, Sep 20, 2020, 2:05 PM IST

ನಗರದಲ್ಲಿ ಜಲಪ್ರಳಯ

ಉಡುಪಿ: ರವಿವಾರ ವರುಣನ ಅರ್ಭಟಕ್ಕೆ ಉಡುಪಿ ಜಿಲ್ಲೆ ತತ್ತರಿಸಿ ಹೋಗಿದೆ. ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಸಿದ್ಧತೆ ಕೊರತೆಯಿಂದಾಗಿ ಜನರು ಸರಿಯಾದ ಸಮಯಕ್ಕೆ ಸಹಾಯ ದೊರಕದೆ ಜನರು ಪರದಾಡಿದರು.

ನಗರದಲ್ಲಿ ಜಲಪ್ರಳಯ

ಉಡುಪಿಯಲ್ಲಿ 1982ರ ಬಳಿಕ ಇದೇ ಮೊದಲ ಬಾರಿ ಮಹಾಮಳೆಯಾಗಿದೆ. ಸುಮಾರು 50ರಿಂದ 70 ಅಸುಪಾಸಿನ ವರ್ಷದವರಿಗೆ ಇದರ ನೆನಪಿದೆ. ಆದರೆ ಆ ಸಂದರ್ಭದಲ್ಲಿ ಮಹಾಮಳೆಯಾದರೂ ಈ ಪ್ರಮಾಣದಲ್ಲಿ ಮಳೆಯ ನೀರು ಜಲಪ್ರಳಯದ ರೂಪವನ್ನು ಪಡೆದುಕೊಂಡಿರಲಿಲ್ಲ ಎಂದು ಹಿರಿಯರು ಅಭಿಪ್ರಾಯಪಟ್ಟಿದ್ದಾರೆ.

ವಿಕೋಪ ಎದುರಿಸಲು ಸನ್ನದ್ಧಗೊಂಡಿಯೇ?
ಪ್ರಸ್ತುತ ಸಾಲಿನ ಮಳೆಗಾಲದಲ್ಲಿ ಸಂಭಾವ್ಯ ತುರ್ತು ಪರಿಸ್ಥಿತಿ ಎದುರಿಸಲು ಉಡುಪಿ ಜಿಲ್ಲೆ ಸನ್ನದ್ಧಗೊಂಡಿಯೇ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ. ಇದಕ್ಕೆ ಕಾರಣ ನಗರ ಹಾಗೂ ತಾಲೂಕಿನಲ್ಲಿ ಸೂಕ್ತ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯದ ಹಿನ್ನಲೆಯಲ್ಲಿ ಜನರು ಭಯದಲ್ಲಿ ಸಮಯ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ. ಸಾರ್ವಜನಿಕರು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದರೆ, ಜಿಲ್ಲಾಡಳಿತ ಪ್ರಕೃತಿ ವಿಕೋಪ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿತ್ತು.

ಇದನ್ನೂ ಓದಿ: ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ವಿಕೋಪ ಎದುರಿಸಲು ಸನ್ನದ್ಧಗೊಂಡಿಯೇ?

ಇದನ್ನೂ ಓದಿ:ದಶಕದ ಮಳೆಗೆ ಬೆಚ್ಚಿದ ಕೃಷ್ಣನಗರಿ: ಕ್ರೇನ್, ದೋಣಿ ಬಳಸಿ ಜನರ ರಕ್ಷಣೆ, ಲಕ್ಷಾಂತರ ರೂ. ನಷ್ಟ

ಸಹಾಯವಾಣಿ ವ್ಯರ್ಥ

ನಗರಸಭೆ ಹಾಗೂ ಉಡುಪಿ ತಾಲೂಕಿನ ವಿವಿಧ ಪ್ರದೇಶದಲ್ಲಿ ರಾತ್ರಿ 11ರ ಬಳಿಕ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಮುಂಜಾನೆ 2.45 ವೇಳೆಗೆ ನೀರು ಸಾರ್ವಜನಿಕರ ಮನೆ ನುಗ್ಗಿ, ಪರಿಸ್ಥಿತಿಯನ್ನು ಕಂಗೆಡೆಸಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಕರೆ ಮಾಡಿದರೆ ‘ವಾಹನ ಹೊರಟಿದೆ ಶೀಘ್ರದಲ್ಲಿ ಬಂದು ನಿಮ್ಮನ್ನು ರಕ್ಷಿಸಲಿದೆ’ ಎಂದು ಸಹಾಯವಾಣಿಯ ಸಿಬಂದಿ ಉತ್ತರಿಸುತ್ತಿದ್ದರು. ಆದರೆ ಗಂಟೆಗಳು ಕಳೆದರೂ, ಸಹಾಯವಾಣಿ ನೆರವು ಮಾತ್ರ ಸಿಕ್ಕಿಲ್ಲ ಎಂದು ಉಪ್ಪೂರಿನ ನಿವಾಸಿ ರಂಜನ್ ಉದಯವಾಣಿಗೆ ತಿಳಿಸಿದ್ದಾಾರೆ.

ಜಲಪ್ರಳಯ

ಇದನ್ನೂ ಓದಿ:ಉಡುಪಿಗೆ 250 ಜನರ ಎಸ್ ಡಿಆರ್ ಎಫ್ ತಂಡ, ಒಂದು ರಕ್ಷಣಾ ಹೆಲಿಕಾಪ್ಟರ್: ಬಸವರಾಜ ಬೊಮ್ಮಾಯಿ

ಸಿದ್ಧತೆ ಕೇವಲ ಬುರುಡೆಯೇ?

ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಗಮನಿಸಿದರೆ, ಮಾನ್ಸೂನ್ ಸಿದ್ಧತೆ ಎನ್ನುವುದು ಪತ್ರಿಕೆ ಪ್ರಕಟನೆ ಸೀಮಿತವೇ ಎನ್ನುವ ಅನುಮಾನ ಉಂಟಾಗುತ್ತಿದೆ. ಜಿಲ್ಲೆಯ 7 ತಹಶೀಲ್ದಾರ್ ನೇತೃತ್ವದಲ್ಲಿ ಮುಂಗಾರು ಪ್ರಾಕೃತಿಕ ವಿಕೋಪ ಎದುರಿಸಲು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಅಗತ್ಯವಿರುವ ಕ್ರಮ ಕೈಗೊಳ್ಳಲು ಸೂಚಿಸಲಾಗುತ್ತದೆ. ಗ್ರಾಮಸ್ಥರು ಹಾಗೂ ಪಿಡಿಒಗಳ ಜಂಟಿ ಸಭೆ ನಡೆಸಿ, ತುರ್ತು ಸ್ಪಂದನೆಗಾಗಿ ಗ್ರಾ.ಪಂ. ಮಟ್ಟದಲ್ಲಿ ಈಜುಗಾರರು, ದೋಣಿ, ಜೆಸಿಬಿ ಮಾಲಕರು, ಟಿಪ್ಪರ್, ಕ್ರೇನ್, ಸರಕು ಸಾಗಾಟದ ವಾಹನ, ಮರ ಕತ್ತರಿಸುವವರು ಸೇರಿ ಎಲ್ಲರ ನೇತೃತ್ವದಲ್ಲಿ ಸಮಿತಿ ರಚಿಸಿ ಸಿದ್ಧಗೊಂಡಿರಬೇಕು. ಆದರೆ ಈ ಬಾರಿ ಜಿಲ್ಲಾಡಳಿತ ಈ ಎಲ್ಲ ಸಿದ್ಧತೆ ಸಂಪೂರ್ಣವಾಗಿ ಮಾಡಿಕೊಂಡಿದ್ದರೆ, ಜನರು ಏಕೆ ಇಷ್ಟು ಪರದಾಡಬೇಕಾಯಿತು ಎಂಬ ಪ್ರಶ್ನೆ ಮೂಡುತ್ತಿದೆ.

ಉಪ್ಪೂರಿನಲ್ಲಿ ಮುಂಜಾನೆ 6ರ ಬಳಿಕ ನೀರಿನ ಪ್ರಮಾಣ ಭಾರೀ ಏರಿಕೆಯಾಗಿದೆ. ಈ ಬಗ್ಗೆ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಿದರೂ 10ಗಂಟೆಯ ವರೆಗೂ ಯಾವುದೇ ರಕ್ಷಣಾ ಕಾರ್ಯ ನಡೆದಿಲ್ಲ. ಈ ಪ್ರದೇಶದಲ್ಲಿ ನೂರಾರು ಮನೆಗಳು ಜಲಾವೃತವಾಗಿತ್ತು ಎನ್ನುತ್ತಾರೆ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಉಪ್ಪೂೂರು ನಿವಾಸಿ ರಂಜನ್.

ಚಿತ್ರಗಳು: ಆಸ್ಟ್ರೋ ಮೋಹನ್

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.