ಅಕ್ರಮ ಗೋ ಸಾಗಾಟ: ತುರ್ತು ಕ್ರಮಕ್ಕೆ ಆಗ್ರಹ
Team Udayavani, May 13, 2020, 11:28 AM IST
ಸಾಂದರ್ಭಿಕ ಚಿತ್ರ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಅವ್ಯಾಹತವಾಗಿ ಅಕ್ರಮ ಗೋಸಾಗಾಟ ಹಾಗೂ ಗೋಹತ್ಯೆ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದ್ದು, ಸರಕಾರ, ಜಿಲ್ಲಾಡಳಿತಗಳು, ಜನಪ್ರತಿನಿಧಿಗಳು ಗೋಕಳ್ಳರು, ಗೋ ಹಂತಕರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಗ್ರಹಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿರುವ ಗೋಶಾಲೆಗಳಿಂದ ಗೋವುಗಳನ್ನು ಹೊತ್ತೂಯ್ಯುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ. ಈ ಬಗ್ಗೆ ಹಿಂದೂ ಸಂಘಟನೆಗಳು ಹಾಗೂ ಅನೇಕ ರೈತರು ತಮ್ಮಲ್ಲಿ ನೋವು ದುಃಖ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪೇಜಾವರ ಶ್ರೀಗಳ ಆಗ್ರಹಕ್ಕೆ ಸಂಪೂರ್ಣ ಬೆಂಬಲ ಪೇಜಾವರ ಶ್ರೀಗಳ ಆಗ್ರಹಕ್ಕೆ ಮೂಡುಬಿದಿರೆ ಜೈನ ಕಾಶಿ ಶ್ರೀ ದಿಗಂಬರ ಜೈನ ಮಠದ ಜಗದ್ಗುರು ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೋವಿಡ್ ದಿಂದ ದೇಶ ಲಾಕ್ ಡೌನ್ಗೆ ಒಳಗಾಗಿರುವುದನ್ನು ಗಮನಿಸಿ ಕೆಲವರು ಮಾಡುತ್ತಿರುವ ಗೋ ಅಪಹರಣ ಹಾಗೂ ಹತ್ಯೆ, ನದಿಗೆ ಸ್ಫೋಟಕ ಬಳಸಿ ಮೀನಿನ ಸಾಮೂಹಿಕ ಹತ್ಯೆಯನ್ನು ಕೊಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡಲಿ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್