ಅವೈಜ್ಞಾನಿಕ ಕಾಮಗಾರಿಯಿಂದ ಸಂಚಾರಕ್ಕೆ ತೊಡಕು


Team Udayavani, Mar 27, 2022, 12:23 PM IST

traffic

ಉಡುಪಿ: ಸುಗಮ ಸಂಚಾರಕ್ಕೆ ನಗರದಲ್ಲಿ ರೂಪಿತ ವಾಗಿರುವ ಅವೈಜ್ಞಾನಿಕ ಕಾಮಗಾರಿಗಳೇ ತೊಡಕಾಗಿ ಪರಿಣಮಿಸಿದೆ.

ಹೊಸ ಕಟ್ಟಡ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪಾರ್ಕಿಂಗ್‌ಗೆ ಜಾಗ ನಿಗದಿಪಡಿಸಬೇಕು. ಆದರೆ ಅನುಮತಿ ನೀಡುವ ಸಂದರ್ಭ ಪಾರ್ಕಿಂಗ್‌ಗೆಂದು ಜಾಗ ತೋರ್ಪಡಿಸಿ ಕ್ರಮೇಣ ಅದನ್ನು ಒತ್ತುವರಿ ಮಾಡುವ ಕೆಲಸ ನಡೆಯುತ್ತಿರುವುದು ಇಷ್ಟೆಲ್ಲ ಟ್ರಾಫಿಕ್‌ ದಟ್ಟಣೆಗೆ ಕಾರಣವಾಗುತ್ತಿದೆ. ನಗರದ ಅಂಗಡಿ ಮುಂಗಟ್ಟುಗಳ ಎದುರು ಕೂಡ ಅವರ ಸ್ವಂತ ಜಾಗವಾಗಿದ್ದರೆ ಮಾತ್ರ ಸೂಚನಾ ಫ‌ಲಕ ಅಳವಡಿಕೆ ಮಾಡಬೇಕು. ವಿನಾ ಕಾರಣ ನೋ ಪಾರ್ಕಿಂಗ್‌ ಫ‌ಲಕ ಅಳವಡಿಕೆ ಮಾಡುವಂತಿಲ್ಲ. ಪ್ರಸ್ತುತ ನಗರದೆಲ್ಲೆಡೆ ರಸ್ತೆ ಬದಿಯಲ್ಲಿರುವ ಬಿಳಿ ಮಾರ್ಕಿಂಗ್‌ನ ಎಡಬದಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ.

ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಪ್ರಸ್ತಾವನೆ ಪ್ರಸ್ತುತ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಸಿಬ್ಬಂದಿಗಳ ಕೊರತೆಯೂ ಇದೆ. ಇಬ್ಬರು ಪಿಎಸ್‌ಐ, 4 ಮಂದಿ ಎಎಸ್‌ಐ, 11 ಹೆಡ್‌ ಕಾನ್‌ಸ್ಟೆಬಲ್‌ಗ‌ಳು, 23 ಮಂದಿ ಕಾನ್‌ಸ್ಟೆಬಲ್‌ಗ‌ಳಿದ್ದಾರೆ. ಹೆಚ್ಚುವರಿಯಾಗಿ ಇಬ್ಬರು ಎಎಸ್‌ಐ, ಇಬ್ಬರು ಹೆಡ್‌ಕಾನ್‌ಸ್ಟೆಬಲ್‌, 5 ಮಂದಿ ಕಾನ್‌ಸ್ಟೆಬಲ್‌ಗ‌ಳನ್ನು ನೇಮಕ ಮಾಡುವಂತೆ ಸಂಚಾರ ಪೊಲೀಸ್‌ ಠಾಣೆಯಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸ್ಮಾರ್ಟ್‌ ಸಿಟಿ  ಯೋಜನೆ- ಪರಿಹಾರ

ನಗರದ ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಸ್ಮಾರ್ಟ್‌ ಸಿಟಿ ಯೋಜನೆ ಮೂಲಕ ಪರಿಹಾರ ಕಂಡುಕೊಳ್ಳಲಾಗುವುದು. ಈಗಾಗಲೇ ಮಣಿಪಾಲದಲ್ಲಿ ಸಿಗ್ನಲ್‌ ಅಳವಡಿಕೆ ಮಾಡಲಾಗಿದ್ದು, ಯಶಸ್ವಿಯಾಗಿದೆ. ಇದೇ ಮಾದರಿಯಲ್ಲಿ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಸಿಗ್ನಲ್‌ ಅಳವಡಿಕೆ ಮಾಡಲಾಗುವುದು. ಸಂಬಂಧಪಟ್ಟ ಗುತ್ತಿಗೆ ಸಂಸ್ಥೆ ವಿಳಂಬ ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ವಿವರಣೆ ಕೇಳಿದ್ದೇವೆ. ಇನ್ನೂ ವಿಳಂಬ ಮಾಡಿದರೆ ಗುತ್ತಿಗೆ ಸಂಸ್ಥೆ ಬದಲಾಯಿಸಿ ಇನ್ನೊಂದು ಸಂಸ್ಥೆಗೆ ನೀಡಲಾಗುವುದು. ಕೆ.ರಘುಪತಿ ಭಟ್‌, ಶಾಸಕರು

ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ

ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ನಗರದ ರಸ್ತೆಗಳಲ್ಲಿ ಮಾರ್ಕಿಂಗ್‌ ಮಾಡಲಾಗಿದೆ. ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಿದರೂ ಅಡ್ಡಾದಿಡ್ಡಿ ವಾಹನ ನಿಲುಗಡೆಯಾಗುತ್ತಿದೆ. ವಿಶ್ವೇಶ್ವರಯ್ಯ ಮಾರ್ಗದ ಬಳಿ ಮಲ್ಟಿಲೆವೆಲ್‌ ಪಾರ್ಕಿಂಗ್‌ ಮಾಡುವ ಯೋಚನೆ ಇದೆ. ಸ್ಮಾರ್ಟ್‌ ಸಿಟಿ ಯೋಜನೆಯ ಮೂಲಕ ನಗರದ ವಿವಿಧೆಡೆ ಸಿಸಿಕೆಮರಾ ಹಾಗೂ ಸಿಗ್ನಲ್‌ಲೈಟ್‌ಗಳನ್ನು ಅಳವಡಿಕೆ ಮಾಡಲಾಗುವುದು. ಸಿಗ್ನಲ್‌ಗ‌ಳನ್ನು ವಿಸ್ತರಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಸುಮಿತ್ರಾ ನಾಯಕ್‌, ಅಧ್ಯಕ್ಷರು, ಉಡುಪಿ ನಗರಸಭೆ

ನಗರಸಭೆ ಸಹಕಾರ ಅಗತ್ಯ ನಗರದ ಸುಗಮ ಸಂಚಾರ ವ್ಯವಸ್ಥೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನಗರಸಭೆಯ ಸಹಕಾರವೂ ಮುಖ್ಯವಾಗಿದೆ. ಫ‌ುಟ್‌ಪಾತ್‌ ತೆರವು, ಸೂಚನಾ ಫ‌ಲಕಗಳ ಅಳವಡಿಕೆ, ಮಾರ್ಕಿಂಗ್‌ ಮಾಡುವ ಬಗ್ಗೆ 2 ಬಾರಿ ನಗರಸಭೆಗೆ ಮನವಿ ಮಾಡಲಾಗಿದೆ. ಟ್ರಾಫಿಕ್‌ ಠಾಣೆಗೆ ಹೆಚ್ಚುವರಿ ಸಿಬಂದಿ ನೇಮಕದ ಬಗ್ಗೆಯೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಸುಗಮ ಸಂಚಾರದ ಬಗ್ಗೆ ಸಾರ್ವಜನಿಕರಲ್ಲಿಯೂ ಹೆಚ್ಚು ಜಾಗೃತಿಯಾಗುವ ಅಗತ್ಯವಿದೆ. ಅಬ್ದುಲ್‌ ಖಾದರ್‌, ಉಪ ನಿರೀಕ್ಷಕರು, ನಗರ ಸಂಚಾರ ಠಾಣೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.