ಜಿಲ್ಲೆಯಲ್ಲಿ ಒಂದು ದಶಕದಲ್ಲಿ ಜನಸಂಖ್ಯೆ ಕೇವಲ ಶೇ. 5.9 ಬೆಳವಣಿಗೆ!

ನಗರ ಪ್ರದೇಶದ ಜನಸಂಖ್ಯೆ ಶೇ. 10ಕ್ಕೆ ಏರಿಕೆ

Team Udayavani, Aug 15, 2020, 4:05 AM IST

ಜಿಲ್ಲೆಯಲ್ಲಿ ಒಂದು ದಶಕದಲ್ಲಿ ಜನಸಂಖ್ಯೆ ಕೇವಲ ಶೇ. 5.9 ಬೆಳವಣಿಗೆ!

ಉಡುಪಿ: ಜಿಲ್ಲೆಯಲ್ಲಿ ಜನಸಂಖ್ಯೆಯಲ್ಲಿ ಶೇ.5.9 ಮಾತ್ರ ಬೆಳವಣಿಗೆ ದಾಖಲಿಸಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಜಿಲ್ಲೆಯ ಜನಸಂಖ್ಯೆಯು ಶೇ. 1.93ರಷ್ಟಿದ್ದು, ಬೆಳವಣಿಗೆ ಪ್ರಮಾಣ ತೀವ್ರ ಇಳಿಕೆ ಕಂಡುಬಂದಿದೆ. 2011ರ ಜನಗಣತಿ ಪ್ರಕಾರ ಜಿಲ್ಲೆಯ ಜನಸಂಖ್ಯೆ 11.77 ಲಕ್ಷ ಜನಸಂಖ್ಯೆ ಇದ್ದು, ಅವರಲ್ಲಿ ಪುರುಷರ ಸಂಖ್ಯೆ 5.26 ಲಕ್ಷ ಹಾಗೂ ಮಹಿಳೆಯರ ಸಂಖ್ಯೆ 6.15 ಲಕ್ಷ ಇದೆ. ಜಿಲ್ಲೆಯಲ್ಲಿ ಲಿಂಗಾನುಪಾತ 1000ಕ್ಕೆ 1094 ಇದ್ದು ರಾಜ್ಯದಲ್ಲೇ ಗರಿಷ್ಠ ಲಿಂಗಾನುಪಾತ ಹೊಂದಿದೆ. ರಾಜ್ಯದಲ್ಲಿ ಇದರ ಪ್ರಮಾಣವು 1000ಕ್ಕೆ 968 ಆಗಿದೆ. ಇದಕ್ಕೆ 0ರಿಂದ 6 ವರ್ಷಗಳ ಮಕ್ಕಳಲ್ಲಿ ಲಿಂಗಾನುಪಾತ ಪ್ರಮಾಣವು ಜಿಲ್ಲೆಯಲ್ಲಿ 968 ಆಗಿದೆ.

ಜಿಲ್ಲೆಯ ಒಟ್ಟು 11.77 ಲಕ್ಷ ಜನಸಂಖ್ಯೆ ಯಲ್ಲಿ 8.43 ಲಕ್ಷ ಜನಸಂಖ್ಯೆ ಗ್ರಾಮಾಂತರ ಪ್ರದೇಶದಲ್ಲೂ, 3.34 ಲಕ್ಷ ಜನಸಂಖ್ಯೆ ನಗರ ಪ್ರದೇಶದಲ್ಲಿದೆ. 1981ರಿಂದ 1991ರ ಅವಧಿಯಲ್ಲಿ ಜನಸಂಖ್ಯೆಯ ಬೆಳವಣಿ ಗೆಯ ಪ್ರಮಾಣ ಶೇ. 9.42ರಷ್ಟು ಹಾಗೂ 1991 ರಿಂದ 2001ರ ಅವಧಿಯಲ್ಲಿ ಶೇ. 7.14 ಬೆಳವಣಿಗೆ ದಾಖಲಾಗಿತ್ತು. ತಾಲೂಕುವಾರು ಜನಸಂಖ್ಯೆಗೆ ಹೋಲಿಸಿ ದಾಗ ಕುಂದಾಪುರ ಅತಿ ಹೆಚ್ಚಿನ ಜನಸಂಖ್ಯೆಯನ್ನು (2.62 ಲಕ್ಷ) ಹೊಂದಿದ್ದು ಹೆಬ್ರಿ ಅತಿ ಕಡಿಮೆ (47,000) ಜನಸಂಖ್ಯೆ ಹೊಂದಿದೆ.

ಗ್ರಾಮದಿಂದ ನಗರಕ್ಕೆ ವಲಸೆ
2001 ಮತ್ತು 2011 ರ ದಶಕದ ಅವಧಿಯಲ್ಲಿ ನಗರ ಪ್ರದೇಶದ ಜನಸಂಖ್ಯೆಶೇ. 10ಕ್ಕೆ ಏರಿಕೆಯಾಗಿದೆ. ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ವಲಸೆ ಬರುತ್ತಿರು ವುದು ಕಂಡು ಬರುತ್ತಿದೆ. ಜಿಲ್ಲೆಯಲ್ಲಿ 2.22 ಲಕ್ಷ ಪುರುಷರು ಹಾಗೂ 4.3 ಲಕ್ಷ ಮಹಿಳೆಯರು ಗ್ರಾಮೀಣ ಭಾಗದಲ್ಲಿ ಇದ್ದಾರೆ. 2001ರಲ್ಲಿ ಜಿಲ್ಲೆಯಲ್ಲಿ 7 ಜನಗಣತಿ ಪಟ್ಟಣಗಳಿದ್ದು 2011ರಲ್ಲಿ 24 ಜನಗಣತಿ ಪಟ್ಟಣಗಳಿಗೆ ಏರಿದ್ದು ಸಹ ಈ ಜನಸಂಖ್ಯೆ ವ್ಯತ್ಯಾಸಕ್ಕೆ ಕಾರಣವಾಗಿದೆ.

ಕಡಿಮೆ ಬೆಳವಣಿಗೆ
ರಾಜ್ಯದಲ್ಲಿ ಅತ್ಯಂತ ಕಡಿಮೆ ಪ್ರಮಾಣ ದಲ್ಲಿ ಜನಸಂಖ್ಯೆ ಬೆಳವಣಿಗೆಯಲ್ಲಿ ಚಿಕ್ಕಮಗಳೂರಿನಲ್ಲಿ ಶೇ. 0.26 ಪ್ರಥಮ, ಕೊಡಗು ಶೇ. 1.09 ದ್ವಿತೀಯ, ಹಾಸನ ಶೇ. 3.18 ತೃತೀಯ, ರಾಮನಗರದಲ್ಲಿ ಶೇ. 5.5 ನಾಲ್ಕನೇ, ಚಾಮರಾಜ ನಗರ ದಲ್ಲಿ ಶೇ. 5.73 ಐದು, ಉಡುಪಿ ಶೇ. 5.85ರಷ್ಟು ಏರಿಕೆಯಾಗುವ ಮೂಲಕ ಆರನೇ ಸ್ಥಾನ, ದ.ಕ. ಜಿಲ್ಲೆ ಶೇ. 10, ಬೆಂಗಳೂರು ಜಿಲ್ಲೆಯಲ್ಲಿ ಜನಸಂಖ್ಯೆ ಶೇ.47ರಷ್ಟು ಬೆಳವಣಿಗೆ ಯಾಗಿದೆ.

ಜನಸಂಖ್ಯೆ ಬೆಳವಣಿಗೆ ಕುಂಠಿತ ಕಾರಣ
ಜಿಲ್ಲೆಯಲ್ಲಿ ಜನಸಂಖ್ಯೆ ಬೆಳವಣಿ ಪ್ರಮಾಣ ಕುಂಠಿತವಾಗಲು ವಲಸೆ ಹೋಗುವುದು, ಪೋಷಕರು ಒಂದು ಮಗುವಿಗೆ ಸಾಕು ಎನ್ನುವ ಮನೋಭಾವನೆ, ಉದ್ಯೋಗಕ್ಕೆ ಮೊದಲ ಪ್ರಾಮುಖ್ಯ ನೀಡುತ್ತಿರುವುದು ಜನಸಂಖ್ಯೆ ಪ್ರಮಾಣ ಕಡಿಮೆಯಾಗಲು ಮುಖ್ಯ ಕಾರಣ.
-ಡಾ| ರಾಮರಾವ್‌, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಉಡುಪಿ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.