ಕೋವಿಡ್ ಕಾಲಘಟ್ಟದಲ್ಲಿ ಹೆಚ್ಚಿದ ಪ್ಲಾಸ್ಟಿಕ್‌ ತ್ಯಾಜ್ಯ

ನಿವಾರಣೆಗೆ ನಗರಸಭೆಯಿಂದ ಶತಪ್ರಯತ್ನ , ಗಾಂಧೀ ಜಯಂತಿಯಂದು ಜನಜಾಗೃತಿ

Team Udayavani, Oct 2, 2020, 5:45 AM IST

Udupi-2ಕೋವಿಡ್ ಕಾಲಘಟ್ಟದಲ್ಲಿ ಹೆಚ್ಚಿದ ಪ್ಲಾಸ್ಟಿಕ್‌ ತ್ಯಾಜ್ಯ

ಉಡುಪಿ: ನಿಷೇಧದ ಬಳಿಕ ಪ್ಲಾಸ್ಟಿಕ್‌ ತ್ಯಾಜ್ಯ ಸಮಸ್ಯೆ ಹಿಡಿತಕ್ಕೆ ಬಂದಿದ್ದರೂ, ಇದೀಗ ಕೊರೊನಾದಿಂದಾಗಿ ಗಣನೀಯವಾಗಿ ಏರಿಕೆಯಾಗಿದೆ. ಇದನ್ನು ಹತೋಟಿಗೆ ತರಲು ಅ. 2 ಗಾಂಧೀ ಜಯಂತಿಯಂದು ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ನಗರಸಭೆ ಆಯೋಜಿಸಿದೆ.

ನಗರಸಭೆ ವ್ಯಾಪ್ತಿಯಲ್ಲಿ ಈ ಹಿಂದೆ ಪ್ಲಾಸ್ಟಿಕ್‌ ಬಳಕೆ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿತ್ತು. ಆದರೆ ಲಾಕ್‌ಡೌನ್‌ ಬಳಿಕ ನಗರದಲ್ಲಿ ಏಕಾಏಕಿಯಾಗಿ ಪ್ಲಾಸ್ಟಿಕ್‌ ತ್ಯಾಜ್ಯ ಹೆಚ್ಚಾಗಿದೆ. ಕೋವಿಡ್ ಸಂದರ್ಭ “ಯೂಸ್‌ ಆ್ಯಂಡ್‌ ತ್ರೋ’ ಸಾಮಗ್ರಿ ಬಳಕೆ ಮಾಡುವಂತೆ ಸಲಹೆ ನೀಡಲಾಗಿತ್ತು. ಆದರೆ ಹೋಟೆಲ್‌ಗ‌ಳಲ್ಲಿ ಪ್ಲಾಸ್ಟಿಕ್‌ ವಸ್ತುಗಳಲ್ಲೇ ಆಹಾರ ನೀಡುತ್ತಿರುವುದರಿಂದ ಪ್ಲಾಸ್ಟಿಕ್‌ ತ್ಯಾಜ್ಯ ಏರಿಕೆಯಾಗಿದೆ ಎನ್ನಲಾಗಿದೆ.

ಏತನ್ಮಧ್ಯೆ ಅಲ್ಲಲ್ಲಿ ಪ್ಲಾಸ್ಟಿಕ್‌ ಚೀಲಗಳಲ್ಲಿ
ಇತರ ತ್ಯಾಜ್ಯಗಳನ್ನು ತುಂಬಿ ರಸ್ತೆ ಬದಿ ಎಸೆಯುವವರಿದ್ದು ಇವರ ಮೇಲೂ ಕಣ್ಗಾವಲು ಇರಿಸಲಾಗಿದೆ. ತಿಂಗಳಿಗೆ 28.35 ಮೆ. ಟನ್‌ ಪ್ಲಾಸ್ಟಿಕ್‌ ನಗರಸಭೆ ವ್ಯಾಪ್ತಿಯಲ್ಲಿ ಆಗಸ್ಟ್‌ನಲ್ಲಿ ಸುಮಾರು 68.98 ಮೆಟ್ರಿಕ್‌ ಟನ್‌ ಒಣ ತ್ಯಾಜ್ಯ, 130 ಮೆಟ್ರಿಕ್‌ ಟನ್‌ ಹಸಿ ತ್ಯಾಜ್ಯ, 3 ಮೆಟ್ರಿಕ್‌ ಟನ್‌ ಸ್ಯಾನಿಟರಿ ತ್ಯಾಜ್ಯ, 120 ಮೆಟ್ರಿಕ್‌ ಟನ್‌ ಮಿಶ್ರ ಕಸ , 4.2 ಮೆಟ್ರಿಕ್‌ ಟನ್‌ ಗ್ಲಾಸ್‌ ಹಾಗೂ ಇ ವೇಸ್ಟ್‌ ಸೇರಿದಂತೆ ಇತರ ಒಟ್ಟು 370 ಮೆಟ್ರಿಕ್‌ ಟನ್‌ ಕಸ ಕೇವಲ 17 ವಾರ್ಡ್‌ಗಳಲ್ಲಿ ಉತ್ಪತ್ತಿಯಾಗಿದೆ. ಅದರಲ್ಲಿ 28.35 ಮೆಟ್ರಿಕ್‌ ಟನ್‌ನಷ್ಟು ಪ್ಲಾಸ್ಟಿಕ್‌ ತ್ಯಾಜ್ಯವಿದೆ.

1.76 ಲ.ರೂ. ದಂಡ !
2019ರ ಎಪ್ರಿಲ್‌ನಿಂದ 2020ರ ಮಾರ್ಚ್‌ ಅಂತ್ಯದ ವರೆಗೆ ಮರುಬಳಕೆಯಾಗದ 39.9 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಸಿಮೆಂಟ್‌ ಕಾರ್ಖಾನೆಗೆ ರವಾನಿಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್‌ ಬಳಕೆ ತಡೆಗೆ ರಾಷ್ಟ್ರೀಯ ಹಸುರು ಪೀಠವು 2019ರ ಆ.27ರಂದು ಆದೇಶ ಹೊರಡಿಸಿತ್ತು. ಇದರ ವಸ್ತುಗಳ ಮಾರಾಟ ಕಂಡುಬಂದರೆ ಮೊದಲ ಬಾರಿಗೆ 1,000 ರೂ., ಎರಡನೇ ಬಾರಿಗೆ 2,000 ರೂ. ದಂಡ ವಿಧಿಸಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿ ಉದ್ದಿಮೆ ಪರವಾನಿಗೆ ರದ್ದುಗೊಳಿಸುವ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ. ನಗರಸಭೆ ಅಧಿಕಾರಿಗಳು ಇಲ್ಲಿಯವರೆಗೆ ವಿವಿಧ ಅಂಗಡಿ ಮುಂಗಟ್ಟುಗಳಿಗೆ ದಾಳಿ ನಡೆಸಿ, ಪ್ಲಾಸ್ಟಿಕ್‌ ಬಳಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ, 1.76 ಲ.ರೂ. ದಂಡ ಸಂಗ್ರಹಿಸಿದ್ದಾರೆ.

ವಿವಿಧ ಜಾಗೃತಿ ಕಾರ್ಯಕ್ರಮ
ನಗರಸಭೆ ಪ್ಲಾಸ್ಟಿಕ್‌ ಬಳಕೆ ಯಿಂದಾಗುವ ತೊಂದರೆಗಳ ಕುರಿತು ಜನರಿಗೆ ವಿವಿಧ ರೀತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ. ಇದರೊಂದಿಗೆ ಚಿಟಾ³ಡಿಯಲ್ಲಿ 855, ವಂಡಭಾಂಡೇಶ್ವರದಲ್ಲಿ 824 ಬಟ್ಟೆ ಚೀಲಗಳನ್ನು ವಿತರಿಸಲಾಗಿದೆ. ಅಧಿಕಾರಿಗಳು 244 ಅಂಗಡಿಗಳಿಗೆ ಭೇಟಿ ಅವರಲ್ಲಿ ಪ್ಲಾಸ್ಟಿಕ್‌ ಬಳಸದಂತೆ ಮನವಿ ಮಾಡಿದ್ದಾರೆ.

ದಿಢೀರ್‌ ಕಾರ್ಯಾಚರಣೆ ನಡೆಸಿ ದಂಡ
ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಎಚ್ಚರ ವಹಿಸಲಾಗುತ್ತಿದೆ. ಕಾಲಕಾಲಕ್ಕೆ ಅಂಗಡಿಗಳ ಮೇಲೆ ದಿಢೀರ್‌ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಗಿದೆ. ಅದರ ಹೊರತಾಗಿಯೂ ಮನೆಗಳಿಂದ ಬರುವ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಪ್ರತ್ಯೇಕಿಸಿ ಅದನ್ನು ಸಿಮೆಂಟ್‌ ಫ್ಯಾಕ್ಟರಿಗೆ ಕಳಹಿಸಲಾಗುತ್ತಿದೆ.
-ಸ್ನೇಹ, ಪರಿಸರ ಎಂಜಿನಿಯರ್‌,  ಉಡುಪಿ ನಗರಸಭೆ

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.