ಬೀದಿ ನಾಯಿಗಳಿಂದ ಹೆಚ್ಚುತ್ತಿರುವ ಅಪಘಾತ !


Team Udayavani, Aug 22, 2022, 12:33 PM IST

8

ಉಡುಪಿ: ಮಣಿಪಾಲ, ಉಡುಪಿ ನಗರದ ಸುತ್ತಮುತ್ತ ಬೀದಿ ನಾಯಿ ಗಳಿಂದಾಗಿ ಅಪಘಾತ ಸಂಖ್ಯೆ ಹೆಚ್ಚುತ್ತಿದ್ದು ಇತ್ತೀಚೆಗೆ ಖಾಸಗಿ ಆಸ್ಪತ್ರೆ ಮೂಲಗಳ ಪ್ರಕಾರ ಬೈಕ್‌, ಸ್ಕೂಟರ್‌ಗೆ ನಾಯಿಗಳು ಅಡ್ಡ ಬಂದು ನಿಯಂತ್ರಣ ತಪ್ಪಿ ಬೀಳುತ್ತಿದ್ದಾರೆ. ಇದರಿಂದ ಕೈ, ಕಾಲು ಮುರಿದುಕೊಂಡು ಆಸ್ಪತ್ರೆ ಸೇರುವರ ಸಂಖ್ಯೆ ಹೆಚ್ಚುತ್ತಿದೆ.

ಮಣಿಪಾಲ ಆರ್‌ಎಸ್‌ಬಿ ಭವನ, ಅಂಚೆ ಕಚೇರಿ, ಕೆನರಾ ಬ್ಯಾಂಕ್‌ ವೃತ್ತ ಕಚೇರಿ, ಪೊಲೀಸ್‌ ಠಾಣೆ, ಪರ್ಕಳ ಪೇಟೆ, ಉಡುಪಿ ಸಿಟಿ ಬಸ್‌ ನಿಲ್ದಾಣ, ಬನ್ನಂಜೆ, ಅಜ್ಜರಕಾಡು ಪಾರ್ಕ್‌, ಚಿಟಾ³ಡಿ ಜಂಕ್ಷನ್‌, ಮಲ್ಪೆ ಜಂಕ್ಷನ್‌, ಬೀಚ್‌ ಸಮೀಪ, ಬಂದರು ಬಳಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಬೀದಿ ನಾಯಿಗಳ ಸಂಖ್ಯೆ ಹೆಚ್ಚಳ

ನಗರ ಭಾಗದಲ್ಲಿ ಬೀದಿ ನಾಯಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಪ್ರತೀವರ್ಷ ಸಂತಾನಹರಣ ಚಿಕಿತ್ಸೆ ಹೆಸರಲ್ಲಿ ನಗರಸಭೆ ಲಕ್ಷಾಂತರ ರೂ., ವ್ಯಯಿಸಲಾಗುತ್ತಿದ್ದರೂ ಬೀದಿನಾಯಿಗಳ ವಿಷಯದಲ್ಲಿ ಫ‌ಲಿತಾಂಶ ಉತ್ತಮವಾಗಿಲ್ಲ. ನಗರ ಭಾಗದಲ್ಲಿ ಹೊಟೇಲ್‌, ಸಭಾಂಗಣಗಳ ಬಳಿ ಸಿಗುವ ಆಹಾರ ತ್ಯಾಜ್ಯವು ಬೀದಿನಾಯಿಗಳು ಗ್ರಾಮಾಂತರ ಭಾಗದಿಂದ ವಲಸೆ ಬರಲು ಕಾರಣ ಎನ್ನಲಾಗುತ್ತಿದೆ.

ಒಮ್ಮೆಲೆ ಎಗರುವ ನಾಯಿಗಳು

ಬೈಕ್‌, ಸ್ಕೂಟರ್‌ ಚಾಲನೆ ಸಂದರ್ಭ ನಿಧಾನಗತಿಯ ವೇಗದಲ್ಲಿದ್ದರೂ ತಿರುವು, ನೇರ ರಸ್ತೆಗಳಲ್ಲಿ ಒಮ್ಮೆಲೆ ಎರಗುವ ಬೀದಿ ನಾಯಿಗಳಿಂದ ತಬ್ಬಿಬ್ಟಾಗುವ ಸವಾರರು ಸ್ಕಿಡ್‌ ಆಗಿ ಬೀಳುತ್ತಾರೆ. ಬಹುತೇಕರಿಗೆ ಕೈ, ಕಾಲು, ಬೆನ್ನು, ಭುಜಕ್ಕೆ ಹೆಚ್ಚಿನ ಪೆಟ್ಟುಗಳು ಸಂಭವಿಸುತ್ತಿವೆ. ಇತ್ತೀಚೆಗೆ ಖಾಸಗಿ ಆಸ್ಪತ್ರೆ ಗಳಲ್ಲಿ 35ರಿಂದ 50 ವರ್ಷದವರೆಗಿನ ವಯೋಮಾನದವರು ಇದರಿಂದ ಗಾಯಗೊಂಡು ಚಿಕಿತ್ಸೆ ಪಡೆದುಕೊಂಡವರ ಸಂಖ್ಯೆ ಹೆಚ್ಚಿದೆ ಎಂದು ಕೆಲವು ಆಸ್ಪತ್ರೆ ಮೂಲಗಳು ತಿಳಿಸಿವೆ. ಹೆಲ್ಮೆಟ್‌ ಧರಿಸದಿದ್ದಲ್ಲಿ ಗಂಭೀರ ಪರಿಣಾಮದ ಗಾಯಗಳೂ ಉಂಟಾಗಿವೆ.

ಮರು ಟೆಂಡರ್‌ ಕರೆಯಲಾಗಿದೆ: ಬೀದಿನಾಯಿಗಳು ಹೆಚ್ಚಿದ್ದು, ಇದರಿಂದ ನಾಗರಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ನಗರದಲ್ಲಿ ಬೀದಿನಾಯಿಗಳ ನಿಯಂತ್ರಣಕ್ಕೆ ಸಂತಾನ ಹರಣ ಚಿಕಿತ್ಸೆ ವ್ಯವಸ್ಥಿತವಾಗಿ ನಡೆಸಲು ಕ್ರಮ ತೆಗೆದುಕೊಂಡಿದ್ದೆವು. ಕೆಲವು ದಿನಗಳ ಹಿಂದೆ ಟೆಂಡರ್‌ ಪಡೆದವರು ಅರ್ಧಕ್ಕೆ ನಿಲ್ಲಿಸಿ ಹೋಗಿದ್ದಾರೆ. ಈಗ ಮತ್ತೂಮ್ಮೆ ಹೊಸ ಟೆಂಡರ್‌ ಕರೆಯಲಾಗಿದೆ. –ಸುಮಿತ್ರಾ ನಾಯಕ್‌, ಅಧ್ಯಕ್ಷರು, ಉಡುಪಿ ನಗರ ಸಭೆ

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.