ಇಂದ್ರಾಣಿ ನದಿ: ಕುಸಿದ ತಡೆಗೋಡೆ ತೆರವು


Team Udayavani, Apr 13, 2022, 11:36 AM IST

barrier

ಉಡುಪಿ: ನಗರದ ಮಧ್ಯಭಾಗದಲ್ಲಿ ಹರಿಯುವ ಇಂದ್ರಾಣಿ ನದಿಯ ಕುಸಿದ ತಡೆಗೋಡೆಗಳ ತೆರವು ಕಾರ್ಯಚರಣೆಯನ್ನು ಶುರುವಾಗಿದೆ.

ಇಂದ್ರಾಣಿ ನದಿ: ತಡೆಗೋಡೆಗಿಲ್ಲ ಕಾಯಕಲ್ಪ ಶೀರ್ಷಿಕೆಯಡಿ ಉದಯವಾಣಿ ಸುದಿನ ಎ.9ರಂದು ವಿಸ್ತೃತ ವರದಿ ಪ್ರಕಟಿಸಿತ್ತು.ವರದಿಗೆ ಸ್ಪಂದಿಸಿದ ಸಣ್ಣ ನೀರಾವರಿ ಇಲಾಖೆ ಮತ್ತು ನಗರಸಭೆ ಆಡಳಿತ, ಕುಸಿದಿರುವ ತಡೆಗೋಡೆ ಕಲ್ಲು ತೆರವು ಕೆಲಸವನ್ನು ಆರಂಭಿಸಿದೆ.

ತಡೆಗೋಡೆ ಕುಸಿದ ಕಡೆಗಳಲ್ಲಿ ನೀರು ಹರಿಯಲಾರದಷ್ಟು ಬ್ಲಾಕ್‌ ಆಗಿದೆ. ಮಳೆಗಾಲ ಆರಂಭವಾಗುವ ಮೊದಲೇ ತೆರವು ಕಾರ್ಯ ಪೂರ್ಣಗೊಂಡು, ಹೊಸ ಗೋಡೆ ನಿರ್ಮಾಣ ಮಾಡಿದರಷ್ಟೇ ಮುಂದಿನ ಅವಾಂತರ ತಡೆಯಬಹುದಾ ಗಿದೆ. ಇಲ್ಲವಾದರೆ ಮಳೆಗಾಲದಲ್ಲಿ ಪುನಃ ನಗರದ ಜತೆಗೆ ನರಕ ಯಾತನೆ ಅನುಭವಿಸಬೇಕಾಗುತ್ತದೆ.

ಸಣ್ಣ ಮಳೆಗೂ ಇಂದ್ರಾಣಿ ನದಿ ಉಕ್ಕಿ ಹರಿಯುತ್ತದೆ. ಕಳೆದ ವರ್ಷದ ಮಳೆಗಾಲ ದಲ್ಲಿ ತಡೆಗೋಡೆ ಕುಸಿದ ಜಾಗದಲ್ಲಿ ನೀರು ಸರಾಗವಾಗಿ ಹರಿಯದೆ ನದಿಪಾತ್ರದಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು.

ಈ ಹಿಂದೆ ಕಲ್ಲಿನಲ್ಲಿ ಕಟ್ಟಿದ ತಡೆಗೋಡೆ ಕಲ್ಲುಗಳು ಒಂದೊಂದಾಗಿ ಕೆಳಗೆ ಬೀಳು ತ್ತಿದ್ದು, ಕೆಲವು ಕಡೆಗಳಲ್ಲಿ ಸಾಕಷ್ಟು ಉದ್ದದ ಕಾಂಕ್ರೀಟ್‌ನ ತಡೆಗೋಡೆ ಕುಸಿದು ಬಿದ್ದಿವೆ. ಕಲ್ಸಂಕ ವೃತ್ತ ಬಳಿ ಕೃಷ್ಣಮಠಕ್ಕೆ ಸಾಗುವ ರಸ್ತೆ, ಗುಂಡಿಬೈಲು, ಮಠದಬೆಟ್ಟು ಮೊದಲಾದ ಕಡೆಗಳಲ್ಲಿ ಹಲವು ವರ್ಷಗಳ ಹಿಂದೆ ಕಲ್ಲಿನಿಂದ ಕಟ್ಟಲಾಗಿದ್ದ ಬೃಹತ್‌ ತಡೆಗೋಡೆ ಕುಸಿದಿದ್ದು, ಈ ಭಾಗದಲ್ಲಿ ಪ್ರಸ್ತುತ ಕೆಲಸ ನಡೆಯುತ್ತಿದೆ.

ಕುಸಿದ ಕಲ್ಲು ತೆರವುಗೊಳಿಸಲಾಗುತ್ತಿದೆ

ಇಂದ್ರಾಣಿ ನದಿಗೆ ತಡೆಗೋಡೆ ಕಟ್ಟಲು ದೊಡ್ಡ ಮೊತ್ತದ ಅನುದಾನ ಅಗತ್ಯವಿದೆ. ಸಣ್ಣ ನೀರಾವರಿ ಇಲಾಖೆ ಮೂಲಕ ಈ ಕಾಮಗಾರಿ ನಡೆಸಲು ಮತ್ತು ಅನುದಾನ ಅಗತ್ಯದ ಬಗ್ಗೆ ಶಾಸಕರೊಂದಿಗೆ ಮನವಿ ಮಾಡಿಕೊಂಡಿದ್ದೇವೆ. ಈಗಾಗಲೆ ನೀರು ಬ್ಲಾಕ್‌ ಆಗದಂತೆ ಇಂದ್ರಾಣಿ ಸ್ವತ್ಛಗೊಳಿಸುವ ಕೆಲಸ ನಡೆಯುತ್ತಿದೆ. ತಡೆಗೋಡೆ ಕುಸಿದುಬಿದ್ದು ಅಲ್ಲಲ್ಲಿ ಬ್ಲಾಕ್‌ ಆಗಿರುವ ಬಗ್ಗೆ ತಿಳಿದುಬಂದಿದೆ. ಕುಸಿದ ಕಲ್ಲುಗಳನ್ನು ತೆರವುಗೊಳಿಸಿ, ಹೂಳು ತೆಗೆಯುವ ಕಾಮಗಾರಿ ನಡೆಯುತ್ತಿದೆ. –ಸುಮಿತ್ರಾ ಎಸ್‌. ನಾಯಕ್‌, ಅಧ್ಯಕ್ಷೆ, ಉಡುಪಿ ನಗರಸಭೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.