ಉಡುಪಿ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿ ಸಭೆ; ಫ‌ರ್ನಿಚರ್‌ ಕ್ಲಸ್ಟರ್‌ಗೆ ಜಾಗ: ಶೆಟ್ಟರ್‌


Team Udayavani, Nov 7, 2020, 5:58 AM IST

UDUPI

ಉಡುಪಿ: ಕೈಗಾರಿಕಾಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಜಗದೀಶ್‌ ಶೆಟ್ಟರ್‌ ಮಾತನಾಡಿದರು.

ಉಡುಪಿ: ವ್ಯವಹಾರಕ್ಕೆ ಉತ್ತೇಜನ, ಸ್ಥಳೀಯರಿಗೆ ಉದ್ಯೋಗಾವಕಾಶ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಮರದ ಸಾಮಗ್ರಿಗಳನ್ನು ತಯಾರಿಸುವ “ಫ‌ರ್ನಿಚರ್‌ ಕ್ಲಸ್ಟರ್‌’ ಆರಂಭಿಸಲು ಸೂಕ್ತ ಜಾಗವನ್ನು ಗುರುತಿಸುವಂತೆ ರಾಜ್ಯದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು. ಅವರು ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೈಗಾರಿಕಾಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಈಗಾಗಲೇ ಕೈಗಾರಿಕೆ ಅಭಿವೃದ್ಧಿಗಾಗಿ ವಿವಿಧ ಕ್ಲಸ್ಟರ್‌ಗಳನ್ನು ಆರಂಭಿಸಲು ಸೂಚಿಸಲಾಗಿದೆ. ಕೊಪ್ಪಳದಲ್ಲಿ ಆಟಿಕೆ ತಯರಿಕಾ ಕ್ಲಸ್ಟರ್‌ ಮತ್ತು ಯಾದಗಿರಿ-ರಾಯಚೂರಿನಲ್ಲಿ ಫಾರ್ಮಾ ಕ್ಲಸ್ಟರ್‌ ಆರಂಭ ಕುರಿತಂತೆ ಪ್ರಕ್ರಿಯೆಗಳು ನಡೆಯುತ್ತಿವೆ. ಇದರಿಂದ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶಗಳು ದೊರೆಯಲಿವೆ. ಕ್ಲಸ್ಟರ್‌ ಆರಂಭಕ್ಕೆ ಸರಕಾರದಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡಲಾಗುವುದು ಎಂದರು.

ತಜ್ಞರಿಂದ ಪರಿಶೀಲನೆ
ಜಿಲ್ಲೆಯ ನಂದಿಕೂರು ಸೇರಿದಂತೆ ವಿವಿಧ ಕೈಗಾರಿ ಕಾ ಪ್ರದೇಶಗಳಲ್ಲಿ ಉದ್ದಿಮೆ ಆರಂಭಿಸಲು ಕೈಗಾ ರಿಕೆ ಗಳು ಪಡೆದಿರುವ ಭೂಮಿಯು ಸಂಪೂರ್ಣ ಬಳಕೆಯಾಗಿರುವ ಬಗ್ಗೆ ತಜ್ಞರ ತಂಡ ದಿಂದ ಪರಿಶೀಲಿಸಿ, ವರದಿ ಪಡೆಯ ಲಾಗು ವುದು. ಕೈಗಾರಿಕೆ ಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶ ನೀಡುವಂತೆ ಹಾಗೂ ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನು ಷ್ಠಾನ ಮಾಡುವಂತೆ ಕೈಗಾರಿಕೋದ್ಯಮಿಗಳಿಗೆ ಸೂಚಿಸಿದರು.

ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕ ವಾತಾವರಣ
ರಾಜ್ಯದಲ್ಲಿ ಕೈಗಾರಿಕೆಗಳು ಒಂದೇ ಕಡೆ ಕೇಂದ್ರೀಕೃತವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಹೊರತುಪಡಿಸಿ ಇತರ ಟೈರ್‌ 1 ಮತ್ತು 2 ನಗರಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಅವಕಾಶ ನೀಡಿದ್ದು, ಅಂತಹ ನಗರಗಳಲ್ಲಿಯೂ ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ. ಕಾರವಾರದ ಬೇಲೆಕೇರಿ ಬಂದರನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲಾಗುವುದು. ಕೈಗಾರಿಕಾ ನೀತಿಯಲ್ಲಿ ಹಲವು ಬದಲಾವಣೆ ಮಾಡಿ ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಲಾಗುತ್ತಿದೆ ಎಂದರು.

ಸಚಿವರಿಗೆ ಮನವಿ
ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅಗತ್ಯವಾಗಿರುವ ಕಾಮಗಾರಿಗಳ ಕುರಿತು, ಗೋಡಂಬಿ ಉದ್ಯಮದ ಬೆಳವಣಿಗೆಗೆ ಅಗತ್ಯ ಬೆಂಬಲ ನೀಡುವಂತೆ ಹಾಗೂ ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕೈಗಾರಿಕೋ ದ್ಯಮಿಗಳು ಸಚಿವರಿಗೆ ಮನವಿ ಸಲ್ಲಿಸಿದರು.

ಮೀನುಗಾರಿಕೆ, ಬಂದರು ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್‌, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಶಾಸಕ ಕೆ. ರಘುಪತಿ ಭಟ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್‌, ಕೆಐಎಡಿಬಿ ಸಿಇಒ ಶಿವಶಂಕರ್‌ ಹಾಗೂ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿ
ಸುಜ್ಲಾನ್‌ ಸಂಸ್ಥೆಯು ಸ್ಥಳೀಯರಿಂದ ಕಡಿಮೆ ದರಕ್ಕೆ ಜಾಗ ಖರೀದಿಸಿ ಈಗ ರಿಯಲ್‌ ಎಸ್ಟೇಟ್‌ನಂತೆ ಇತರರಿಗೆ ವ್ಯವಹಾರಕ್ಕೆ ಅವಕಾಶ ಮಾಡಿಕೊಡುತ್ತಿದೆ. ಸುಜ್ಲಾನ್‌, ಯುಪಿಸಿಎಲ್‌ ಕಂಪೆನಿಗಳು ಸ್ಥಳೀಯರಿಗೆ ಉದ್ಯೋಗಾವಕಾಶ ನೀಡುತ್ತೇವೆ ಎಂದು ತಿಳಿಸಿ ಈಗ ಎಲ್ಲರನ್ನೂ ಕೆಲಸದಿಂದ ತೆಗೆಯುತ್ತಿದ್ದಾರೆ. ಭೂಮಿ ಕಳೆದುಕೊಂಡ ಕುಟುಂಬದವರಿಗೂ ಉದ್ಯೋಗಾವಕಾಶ ನೀಡುತ್ತಿಲ್ಲ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಶಾಸಕ ಕೆ. ರಘುಪತಿ ಭಟ್‌ ಅವರು ಸಚಿವರ ಗಮನಕ್ಕೆ ತಂದರು. ಸಂಸ್ಥೆಯ ಅಧಿಕಾರಿಗಳಿಂದ ಈ ಬಗ್ಗೆ ವಿವರಣೆ ಕೇಳಿದ ಸಚಿವರು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಸೂಚಿಸಿದರು. ಅಧಿಕಾರಿಗಳು ಈ ಬಗ್ಗೆ ಕಣ್ಣಿಡುವಂತೆಯೂ ಸೂಚಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.