ಉಡುಪಿ ಜಿ.ಪಂ. ಸಿಬಂದಿಗೆ ಸೋಂಕು ದೃಢ


Team Udayavani, May 26, 2020, 8:22 AM IST

ಉಡುಪಿ ಜಿ.ಪಂ. ಸಿಬಂದಿಗೆ ಸೋಂಕು ದೃಢ

ಕಟಪಾಡಿ ಸರಕಾರಿ ಗುಡ್ಡೆಯ ರಸ್ತೆ ಸೀಲ್‌ಡೌನ್‌

ಉಡುಪಿ: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್‌ ಯೋಜನೆಯ ಓರ್ವ ಸಿಬಂದಿಗೆ ಸೋಮವಾರ ಕೊರೊನಾ ಸೋಂಕು ತಗುಲಿದೆ. ಇವರು ಮೇ 19ರ ಬಳಿಕ ಕಚೇರಿಗೆ ಬಂದಿರಲಿಲ್ಲ. ಜ್ವರ ಬಂದ ತತ್‌ಕ್ಷಣ ಇವರನ್ನು ವಾಪಸು ಕಳುಹಿಸಿ ಗಂಟಲು ದ್ರವವನ್ನು ಸಂಗ್ರಹಿಸಲಾಯಿತು. ಮೇ 19ರಂದು ಇವರು ಇದ್ದ ಸ್ಥಳವನ್ನು ಸ್ಯಾನಿಟೈಸ್‌ ಮಾಡಲಾಗಿತ್ತು. ಇವರಿಗೆ ನಾಲ್ವರು ಪ್ರಾಥಮಿಕ ಸಂಪರ್ಕದವರಿದ್ದು ಇತರ ಸಂಪರ್ಕವಿದ್ದವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

ಇಂದು ಸ್ಯಾನಿಟೈಸ್‌
ವರದಿ ಸೋಮವಾರ ಬಂದ ಕಾರಣ ಇಡೀ ಕಚೇರಿಯನ್ನು ಸ್ಯಾನಿಟೈಸ್‌ ಅಥವಾ ಸೀಲ್‌ ಡೌನ್‌ ಮಾಡಿಲ್ಲ. ಮಂಗಳವಾರ ಜಿಲ್ಲಾ ಪಂಚಾಯತ್‌ನ ಕಚೇರಿ ಬಂದ್‌ ಮಾಡಿ ಸ್ಯಾನಿಟೈಸ್‌ ಮಾಡಲಾಗುತ್ತದೆ ಎಂದು ಜಿ.ಪಂ. ಸಿಇಒ ಪ್ರೀತಿ ಗೆಹಲೋಟ್ ತ್‌ ಅವರು ತಿಳಿಸಿದ್ದಾರೆ. ಸಿಬಂದಿಯ ಮನೆ ಇರುವುದು ಕಟಪಾಡಿಯ ಸರಕಾರಿಗುಡ್ಡೆಯಲ್ಲಿ. ಈ ಪ್ರದೇಶದ 1ರಿಂದ 5ನೆಯ ಕ್ರಾಸ್‌ ತನಕ 15 ದಿನದವರೆಗೆ ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ. ಈ ವೇಳೆ ಅಗತ್ಯ ಸಾಮಗ್ರಿ ತರಲು 8 ಗಂಟೆಯ ತನಕ ಅನುಮತಿ ನೀಡಲಾಗಿದೆ. ಜಿ.ಪಂ. ಸಿಬಂದಿ ಮತ್ತು ಡಿಎಆರ್‌ ಸಿಬಂದಿಯ ಸಂಪರ್ಕದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.

ಒಬ್ಬರಿಗೆ ಜ್ವರ ಲಕ್ಷಣ ಕಂಡುಬಂದು ಇವರನ್ನು ಪರೀಕ್ಷಿಸಿದಾಗ ಕೋವಿಡ್ ಸೋಂಕು ಇರುವುದು ಪತ್ತೆಯಾಗಿರುವುದರಿಂದ ಇನ್ನೊಂದು ರೀತಿಯ ಭೀತಿಯನ್ನು ಹುಟ್ಟು ಹಾಕಿದೆ. ರವಿವಾರದಂತೆ ಇನ್ನೊಬ್ಬ ಪೊಲೀಸ್‌ ಸಿಬಂದಿಗೂ ಸೋಂಕು ತಗಲಿರುವುದೂ ಕಳವಳ ಉಂಟು ಮಾಡಿದೆ. ಸೋಮವಾರದ ಪ್ರಕರಣ ವಿವರ ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 38 ಪ್ರಕರಣಗಳು ಪತ್ತೆಯಾಗಿದೆ.

4,540 ವರದಿ ಬಾಕಿ, ಕಳವಳ
ಸೋಮವಾರದ ಅಂಕಿ ಅಂಶ ಪ್ರಕಾರ 4,540 ವರದಿಗಳು ಬರಲು ಬಾಕಿ ಇವೆ. ಸೋಮವಾರ 1,202 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇವರಲ್ಲಿ ನಾಲ್ವರು ಉಸಿರಾಟದ ಸಮಸ್ಯೆಯವರು, 41 ಕೋವಿಡ್ ಸಂಪರ್ಕಿತರು, ಮೂವರು ಜ್ವರ ಬಾಧೆಯವರು, 1,154 ಹಾಟ್‌ಸ್ಪಾಟ್‌ ಸಂಪರ್ಕದವರಾಗಿದ್ದಾರೆ. ಶನಿವಾರ 392 ನೆಗೆಟಿವ್‌ ಪ್ರಕರಣ, 32 ಪಾಸಿಟಿವ್‌ ಪ್ರಕರಣಗಳಾಗಿವೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.