ಕಾಪು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಪ್ಲಾಸ್ಟಿಕ್‌ ಸಂಸ್ಕರಣೆ ಘಟಕ ಸ್ಥಾಪನೆ

ಖಾಸಗಿ ಸಹಭಾಗಿತ್ವದಲ್ಲಿ ಹೊಸ ಯೋಜನೆ ; ಡಾಮರಿನ ಜತೆಗೆ ಬೆರೆಸಿ ಗಟ್ಟಿಮುಟ್ಟಾದ ರಸ್ತೆ ನಿರ್ಮಾಣದ ಉದ್ದೇಶ

Team Udayavani, Oct 2, 2020, 1:42 AM IST

ಕಾಪು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಪ್ಲಾಸ್ಟಿಕ್‌ ಸಂಸ್ಕರಣೆ ಘಟಕ ಸ್ಥಾಪನೆ

ಉಪಯುಕ್ತವಲ್ಲದ ಪ್ಲಾಸ್ಟಿಕ್‌ ತ್ಯಾಜ್ಯಗಳ ಸಂಸ್ಕರಣೆಗಾಗಿ ಅನುಷ್ಟಾನಿಸಲಾಗಿರುವ ಯಂತ್ರೋಪಕರಣಗಳು.

ಕಾಪು: ಪುರಸಭೆ ವ್ಯಾಪ್ತಿಯಿಂದ ಸಂಗ್ರಹಿಸಿದ 2 ಸಾವಿರ ಟನ್‌ಗಳಷ್ಟು ತ್ಯಾಜ್ಯ ವಿಲೇವಾರಿಗೆ ಖಾಸಗಿ ಸಹಭಾಗಿತ್ವದಲ್ಲಿ ವಿನೂತನ ಯೋಜನೆ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಇಲ್ಲಿರುವ ತ್ಯಾಜ್ಯವನ್ನು ಶ್ರೆಡ್ಡರ್‌ ಯಂತ್ರದ ಮೂಲಕ ಸಂಸ್ಕರಿಸಿ, ಬಳಿಕ ಅದನ್ನು ಡಾಮರಿನ ಜತೆಗೆ ನಿಗದಿತ ಪ್ರಮಾಣದಲ್ಲಿ ಬೆರೆಸಿ ಗಟ್ಟಿ ಮುಟ್ಟಾದ ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡರೆ, ಇಲ್ಲಿನ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಸಂಗ್ರಹವಾಗಿರುವ 1 ಸಾವಿರ ಟನ್‌ ತ್ಯಾಜ್ಯ ಶೀಘ್ರ ವಿಲೇವಾರಿಯಾಗಲಿದೆ.

ತ್ಯಾಜ್ಯ ವಿಲೇವಾರಿ ಸಮಸ್ಯೆ
ಪುರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯದಲ್ಲಿ ಪ್ರತೀ ದಿನ 3.5 ಟನ್‌ ತ್ಯಾಜ್ಯ ವಿಲೇವಾರಿಯಾಗದೇ ಉಳಿಯುತ್ತದೆ. 2-3 ವರ್ಷಗಳಿಂದ 2 ಸಾವಿರ ಟನ್‌ ಮರು ಬಳಕೆಗೆ ಪ್ರಯೋಜನವಿಲ್ಲದ ತ್ಯಾಜ್ಯ ಸಂಗ್ರಹಿಸಿಡಲಾಗುತ್ತಿದೆ. ಇದರ ವಿಲೇವಾರಿ ಕಷ್ಟವಾಗಿದ್ದು, ಇದು ಆರ್ಥಿಕ ಹೊರೆಯೂ ಆಗಿತ್ತು. ಇವುಗಳನ್ನು ಸಿಮೆಂಟ್‌ ಕಾರ್ಖಾನೆಗೆ ಉರುವಲಾಗಿ ಕಳುಹಿಸಿ ಕೊಡಲಾಗುತ್ತಿದ್ದರೂ, ಅವುಗಳು ದೂರದಲ್ಲಿರುವುದ ರಿಂದ ರವಾನೆ ವೆಚ್ಚದಾಯಕವಾಗಿತ್ತು.

7 ಲಕ್ಷ ರೂ. ಖರ್ಚು
ತಮಿಳುನಾಡು ಮತ್ತು ರಾಜ್ಯದಲ್ಲಿ ಸುಮಾರು 400 ಕಿ. ಮೀ. ಉದ್ದದ ಪ್ಲಾಸ್ಟಿಕ್‌ ತ್ಯಾಜ್ಯ ಮಿಶ್ರಿತ ಡಾಮರು ರಸ್ತೆ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಬೆಂಗಳೂರಿನ ಉದ್ಯಮಿ ರಾಮನಾಥ್‌ ಲಕ್ಷ್ಮಣ್‌ ಅವರು ಕಾಪು ಪುರಸಭೆಯೊಂದಿಗೆ ಕೈಜೋಡಿಸಿದ್ದಾರೆ. ಸದ್ಯ ವಿವಿಧ ಯಂತ್ರ
ಗಳನ್ನು ಅಳವಡಿಸಲಾಗಿದೆ. ಇದಕ್ಕೆ 7 ಲಕ್ಷ ವಿನಿಯೋಗಿಸಲಾಗಿದೆ. ಘಟಕ ನಿರ್ವಹಣೆಗೆ ಮಾಸಿಕ 50-60 ಸಾವಿರ ರೂ. ಖರ್ಚಾಗಲಿದೆ.

ಆರ್ಥಿಕವಾಗಿಯೂ ಲಾಭದಾಯಕ
ಖಾಸಗೀ ಸಹಭಾಗಿತ್ವದೊಂದಿಗೆ ಸರಕಾರದ ಅನುದಾನ ಬಳಕೆ ಮಾಡದೇ ಕಾಪು ಪುರಸಭೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸುತ್ತಿರುವ ಪ್ರಯತ್ನ ರಾಜ್ಯದಲ್ಲೇ ಮೊದಲಿನದ್ದು. ಮೊದಲ ಹಂತದಲ್ಲಿ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಶೇಖರಣೆಯಾದ ತ್ಯಾಜ್ಯವನ್ನು ಮಾತ್ರ ಡಾಮರಿಗೆ ವಿನಿಯೋಗಿಸಲಾಗುತ್ತದೆ. ಇದರ ಯಶಸ್ಸು ಆಧರಿಸಿ ಮುಂದಿನ ಹಂತದಲ್ಲಿ ಉಳಿದ ಕಸಗಳನ್ನು ಬಳಸಿಕೊಳ್ಳಲು ಚಿಂತನೆ ನಡೆಸಲಾಗುವುದು. ಈ ಯೋಜನೆ ಪುರಸಭೆಗೆ ಆರ್ಥಿಕವಾಗಿಯೂ ಲಾಭದಾಯಕವಾಗಲಿದೆ.
-ವೆಂಕಟೇಶ್‌ ನಾವುಡ ಬಿ., ಮುಖ್ಯಾಧಿಕಾರಿ, ಕಾಪು ಪುರಸಭೆ

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.