ಕಾಪು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಪ್ಲಾಸ್ಟಿಕ್‌ ಸಂಸ್ಕರಣೆ ಘಟಕ ಸ್ಥಾಪನೆ

ಖಾಸಗಿ ಸಹಭಾಗಿತ್ವದಲ್ಲಿ ಹೊಸ ಯೋಜನೆ ; ಡಾಮರಿನ ಜತೆಗೆ ಬೆರೆಸಿ ಗಟ್ಟಿಮುಟ್ಟಾದ ರಸ್ತೆ ನಿರ್ಮಾಣದ ಉದ್ದೇಶ

Team Udayavani, Oct 2, 2020, 1:42 AM IST

ಕಾಪು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಪ್ಲಾಸ್ಟಿಕ್‌ ಸಂಸ್ಕರಣೆ ಘಟಕ ಸ್ಥಾಪನೆ

ಉಪಯುಕ್ತವಲ್ಲದ ಪ್ಲಾಸ್ಟಿಕ್‌ ತ್ಯಾಜ್ಯಗಳ ಸಂಸ್ಕರಣೆಗಾಗಿ ಅನುಷ್ಟಾನಿಸಲಾಗಿರುವ ಯಂತ್ರೋಪಕರಣಗಳು.

ಕಾಪು: ಪುರಸಭೆ ವ್ಯಾಪ್ತಿಯಿಂದ ಸಂಗ್ರಹಿಸಿದ 2 ಸಾವಿರ ಟನ್‌ಗಳಷ್ಟು ತ್ಯಾಜ್ಯ ವಿಲೇವಾರಿಗೆ ಖಾಸಗಿ ಸಹಭಾಗಿತ್ವದಲ್ಲಿ ವಿನೂತನ ಯೋಜನೆ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಇಲ್ಲಿರುವ ತ್ಯಾಜ್ಯವನ್ನು ಶ್ರೆಡ್ಡರ್‌ ಯಂತ್ರದ ಮೂಲಕ ಸಂಸ್ಕರಿಸಿ, ಬಳಿಕ ಅದನ್ನು ಡಾಮರಿನ ಜತೆಗೆ ನಿಗದಿತ ಪ್ರಮಾಣದಲ್ಲಿ ಬೆರೆಸಿ ಗಟ್ಟಿ ಮುಟ್ಟಾದ ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡರೆ, ಇಲ್ಲಿನ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಸಂಗ್ರಹವಾಗಿರುವ 1 ಸಾವಿರ ಟನ್‌ ತ್ಯಾಜ್ಯ ಶೀಘ್ರ ವಿಲೇವಾರಿಯಾಗಲಿದೆ.

ತ್ಯಾಜ್ಯ ವಿಲೇವಾರಿ ಸಮಸ್ಯೆ
ಪುರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯದಲ್ಲಿ ಪ್ರತೀ ದಿನ 3.5 ಟನ್‌ ತ್ಯಾಜ್ಯ ವಿಲೇವಾರಿಯಾಗದೇ ಉಳಿಯುತ್ತದೆ. 2-3 ವರ್ಷಗಳಿಂದ 2 ಸಾವಿರ ಟನ್‌ ಮರು ಬಳಕೆಗೆ ಪ್ರಯೋಜನವಿಲ್ಲದ ತ್ಯಾಜ್ಯ ಸಂಗ್ರಹಿಸಿಡಲಾಗುತ್ತಿದೆ. ಇದರ ವಿಲೇವಾರಿ ಕಷ್ಟವಾಗಿದ್ದು, ಇದು ಆರ್ಥಿಕ ಹೊರೆಯೂ ಆಗಿತ್ತು. ಇವುಗಳನ್ನು ಸಿಮೆಂಟ್‌ ಕಾರ್ಖಾನೆಗೆ ಉರುವಲಾಗಿ ಕಳುಹಿಸಿ ಕೊಡಲಾಗುತ್ತಿದ್ದರೂ, ಅವುಗಳು ದೂರದಲ್ಲಿರುವುದ ರಿಂದ ರವಾನೆ ವೆಚ್ಚದಾಯಕವಾಗಿತ್ತು.

7 ಲಕ್ಷ ರೂ. ಖರ್ಚು
ತಮಿಳುನಾಡು ಮತ್ತು ರಾಜ್ಯದಲ್ಲಿ ಸುಮಾರು 400 ಕಿ. ಮೀ. ಉದ್ದದ ಪ್ಲಾಸ್ಟಿಕ್‌ ತ್ಯಾಜ್ಯ ಮಿಶ್ರಿತ ಡಾಮರು ರಸ್ತೆ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಬೆಂಗಳೂರಿನ ಉದ್ಯಮಿ ರಾಮನಾಥ್‌ ಲಕ್ಷ್ಮಣ್‌ ಅವರು ಕಾಪು ಪುರಸಭೆಯೊಂದಿಗೆ ಕೈಜೋಡಿಸಿದ್ದಾರೆ. ಸದ್ಯ ವಿವಿಧ ಯಂತ್ರ
ಗಳನ್ನು ಅಳವಡಿಸಲಾಗಿದೆ. ಇದಕ್ಕೆ 7 ಲಕ್ಷ ವಿನಿಯೋಗಿಸಲಾಗಿದೆ. ಘಟಕ ನಿರ್ವಹಣೆಗೆ ಮಾಸಿಕ 50-60 ಸಾವಿರ ರೂ. ಖರ್ಚಾಗಲಿದೆ.

ಆರ್ಥಿಕವಾಗಿಯೂ ಲಾಭದಾಯಕ
ಖಾಸಗೀ ಸಹಭಾಗಿತ್ವದೊಂದಿಗೆ ಸರಕಾರದ ಅನುದಾನ ಬಳಕೆ ಮಾಡದೇ ಕಾಪು ಪುರಸಭೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪಿಸುತ್ತಿರುವ ಪ್ರಯತ್ನ ರಾಜ್ಯದಲ್ಲೇ ಮೊದಲಿನದ್ದು. ಮೊದಲ ಹಂತದಲ್ಲಿ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಶೇಖರಣೆಯಾದ ತ್ಯಾಜ್ಯವನ್ನು ಮಾತ್ರ ಡಾಮರಿಗೆ ವಿನಿಯೋಗಿಸಲಾಗುತ್ತದೆ. ಇದರ ಯಶಸ್ಸು ಆಧರಿಸಿ ಮುಂದಿನ ಹಂತದಲ್ಲಿ ಉಳಿದ ಕಸಗಳನ್ನು ಬಳಸಿಕೊಳ್ಳಲು ಚಿಂತನೆ ನಡೆಸಲಾಗುವುದು. ಈ ಯೋಜನೆ ಪುರಸಭೆಗೆ ಆರ್ಥಿಕವಾಗಿಯೂ ಲಾಭದಾಯಕವಾಗಲಿದೆ.
-ವೆಂಕಟೇಶ್‌ ನಾವುಡ ಬಿ., ಮುಖ್ಯಾಧಿಕಾರಿ, ಕಾಪು ಪುರಸಭೆ

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

Screenshot (3) copy

Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.