ಉಡುಪಿ, ಕಾರ್ಕಳ, ಕುಂದಾಪುರದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ
Team Udayavani, May 2, 2020, 5:42 AM IST
134ನೇ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಧ್ವಜಾರೋಹಣಗೈಯಲಾಯಿತು.
ಉಡುಪಿ: ಸಿಐಟಿಯು ಉಡುಪಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಡುಪಿ, ಸಾಲಿಗ್ರಾಮ, ಕಾರ್ಕಳ ಕಚೇರಿಯ ಎದುರು 134ನೇ ಅಂ.ರಾ. ಕಾರ್ಮಿಕ ದಿನವನ್ನು ಆಚರಿಸಲಾಯಿತು.
ಉಡುಪಿಯಲ್ಲಿ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಧ್ವಜಾರೋಹಣ ಮಾಡಿ ಮಾತನಾಡಿದರು.ಸಿಐಟಿಯು ಜಿಲ್ಲಾ ಮುಖಂಡರಾದ ಶಶಿಧರ್ ಗೊಲ್ಲ, ವೆಂಕಟೇಶ ಕೋಣಿ, ಬೀಡಿ ಸಂಘದ ಮುಖಂಡರಾದ ಉಮೇಶ್ ಕುಂದರ್, ಬಿಸಿಯೂಟ ನೌಕರರ ಸಂಘದ ಮುಖಂಡರಾದ ಕಮಲ, ಉಡುಪಿ ಕಟ್ಟಡ ಸಂಘದ ಮುಖಂಡರಾದ ಶೇಖರ್ ಬಂಗೇರ, ಸುಭಾಶ್ ನಾಯಕ್ ಸಂಜೀವ, ಸರೋಜಾ, ಶಾರದಾ, ಸಿಟಿ ಬಸ್ ನೌಕರರ ಸಂಘದ ಮುಖಂಡ ಸಂತೋಷ್, ಉಡುಪಿ ತಾಲೂಕು ಸಿಐಟಿಯು ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಉಪಸ್ಥಿತರಿದ್ದರು.
ಸಾಲಿಗ್ರಾಮದಲ್ಲಿ ಸಿಐಟಿಯು ಉಡುಪಿ ತಾಲೂಕು ಅಧ್ಯಕ್ಷ ರಾಮ ಕಾರ್ಕಡ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಕಳದಲ್ಲಿ ಬೀಡಿ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ ಹಾಗೂ ಕಾರ್ಕಳ ಕಟ್ಟಡ ಸಂಘದ ಮುಖಂಡರಾದ ಶೇಖರ್ ಕುಲಾಲ್ ಕಾರ್ಯಕ್ರಮ ನಡೆಸಿಕೊಟ್ಟರು.
“ಕೆಲಸದ ಅವಧಿ ಹೆಚ್ಚಳ ಸಹಿಸಲು ಅಸಾಧ್ಯ’
ಕುಂದಾಪುರ: ಮೇ ದಿನ ಆರಂಭವಾಗಿರುವುದೇ ಬಂಡವಾಳಗಾರರು ಕಾರ್ಮಿಕರನ್ನು ಪ್ರಾಣಿಗಳಂತೆ ದುಡಿಸಿ ಕೊಳ್ಳುತ್ತಿರುವುದರ ವಿರುದ್ಧ ನಡೆದ ದೀರ್ಘ ಹೋರಾಟದ ಪ್ರತಿಫಲದಿಂದ. ಆದರೆ ಇಂದು ನಮ್ಮನ್ನಾಳುತ್ತಿರುವವರು ಕಾರ್ಮಿಕರನ್ನು ಗುಲಾಮರಾಗಿಸುವಂತೆ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಹೆಚ್ಚಳಕ್ಕೆ ಮಂದಾಗಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ. ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.
ಅವರು ಶುಕ್ರವಾರ ಇಲ್ಲಿ ನಡೆದ 134ನೇ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು.ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ಜನಸಾಮಾನ್ಯರನ್ನು ರಕ್ಷಿಸಲು ಯಾವುದೇ ಹೊಸ ಪ್ಯಾಕೇಜ್ಗಳನ್ನು ಘೋಷಿಸದೇ ಅನ್ಯಾಯ ಮಾಡಲಾಗಿದೆ ಎಂದು ಅವರು ದೂರಿದರು.
ಸಿಐಟಿಯು ಸಂಚಲನ ಸಮಿತಿ ಸಂಚಾಲಕ ಎಚ್. ನರಸಿಂಹ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿದರು. ವಿ. ನರಸಿಂಹ, ಮಹಾಬಲ ವಡೇರಹೋಬಳಿ, ಲಕ್ಷ್ಮಣ ಬರೆಕಟ್ಟು, ರಾಜು ದೇವಾಡಿಗ, ಸಂತೋಷ ಕಲ್ಲಾಗರ, ನಾಗ ಮೆಂಡನ್, ರವಿ ವಿ.ಎಂ., ಗಣಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು