ಬಾಯಲ್ಲಿ ನೀರೂರಿಸುವ ನೇರಳೆ ಹಣ್ಣು


Team Udayavani, Jun 15, 2022, 3:44 PM IST

14

ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ನಗರದಲ್ಲಿ ನೇರಳೆ ಹಣ್ಣು ಲಗ್ಗೆ ಇಟ್ಟಿದೆ. ಕೆಲವು ದಿನಗಳಿಂದ ನಗರದ ಹೃದಯ ಭಾಗದಲ್ಲಿ ಎಸ್‌ವಿಸಿ ಬ್ಯಾಂಕ್‌ ಮತ್ತು ಯೂನಿಯನ್‌ ಬ್ಯಾಂಕ್‌ ಸಮೀಪ ತಳ್ಳು ಗಾಡಿಯಲ್ಲಿ ವ್ಯಾಪಾರಿಗಳು ನೇರಳೆ ಹಣ್ಣನ್ನು ಮಾರಾಟ ಮಾಡುತ್ತಿದ್ದಾರೆ. ದುಂಡನೆ ರುಚಿಕರವಾಗಿರುವ ಹಣ್ಣು ಬಾಯಲ್ಲಿ ನಿರೂರಿಸುವಂತಿದೆ.

ಮೇ, ಜೂನ್‌ನಲ್ಲಿ ಹೆಚ್ಚಾಗಿ ಮಾರು ಕಟ್ಟೆಯಲ್ಲಿ ದೊರೆಯುವ ಈ ಹಣ್ಣಿಗೆ ಗ್ರಾಹಕರು ಮುಗಿಬೀಳುತ್ತಾರೆ. ಆದರೆ ಈ ಬಾರಿ ವ್ಯಾಪಾರ ಕಡಿಮೆ ಇದೆ ಎನ್ನುತ್ತಾರೆ ವ್ಯಾಪಾರಿಗಳು. ನೇರಳೆ ಹಣ್ಣು ಒಂದೆಡೆ ಕೆ.ಜಿ.ಗೆ 200ರಿಂದ 250 ರೂ. ವರೆಗೆ ಮಾರಾಟವಾಗುತ್ತಿದೆ. ನಗರದ ತರಕಾರಿ, ಹಣ್ಣು ಮಾರಾಟದ ಕೆಲವು ಮಳಿಗೆಗಳಲ್ಲೂ ನೇರಳೆ ಹಣ್ಣು ಮಾರಾಟವಾಗುತ್ತಿದೆ.

ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರಿಗೆ, ಶರೀರದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ನೇರಳೆ ಹಣ್ಣಿನ ಸೇವನೆ ಉಪಯುಕ್ತ. ರಕ್ತದ ಶುದ್ಧೀಕರಣಕ್ಕೂ ಇದು ಸಹಕಾರಿ. ಔಷಧ ಗುಣ ಎಂದ ಮಾತ್ರಕ್ಕೆ ಒಮ್ಮೆಲೇ ಹೆಚ್ಚು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತಾರೆ ಆಯುರ್ವೇದ ವೈದ್ಯರು.

ಬೆಳಗಾವಿಯಲ್ಲಿ ಬೆಳೆದ ನೇರಳೆ ಹಣ್ಣು ಇದಾಗಿದೆ. ನಾವು ಬೆಳೆಗಾರರಿಂದ ಖರೀದಿಸಿ ಕಳೆದ ಹದಿನೈದು ದಿನಗಳಿಂದ ಇಲ್ಲಿ ಮಾರಾಟ ಮಾಡುತ್ತಿದ್ದೇವೆ. ಉಡುಪಿ ಜನರು ನೇರಳೆ ಹಣ್ಣು ಪ್ರಿಯರಾಗಿದ್ದಾರೆ. ಕಳೆದ ವರ್ಷ ವ್ಯಾಪಾರ ಉತ್ತಮವಾಗಿತ್ತು, ನೇರಳೆ ಹಣ್ಣು ಇಳುವರಿ ಕಡಿಮೆ ಮತ್ತು ಬೇಡಿಕೆಯೂ ಹೆಚ್ಚಿದ್ದರಿಂದ ಬೆಲೆ ಹೆಚ್ಚಳವಾಗಿತ್ತು. ಈ ವರ್ಷ ಹೇಳುವಷ್ಟು ದರ ಹೆಚ್ಚಳಗೊಂಡಿಲ್ಲ. -ಬಸವರಾಜ್‌, ಹಣ್ಣು ವ್ಯಾಪಾರಿ, ಉಡುಪಿ

ನೇರಳೆಯಲ್ಲಿ ಕಷಾಯದ ಒಗರು ರಸ ಇರುತ್ತದೆ, ಮಧುಮೇಹಕ್ಕೆ ಒಳ್ಳೆಯದು ಎಂದು ಪ್ರಸಿದ್ದಿ ಪಡೆದಿದೆ. ಮಧುಮೇಹಕ್ಕೆ ಹೊರತಾಗಿಯೂ ನೇರಳೆ ಹಲವು ಔಷಧ ಗುಣಗಳನ್ನು ಹೊಂದಿದೆ. ಶುದ್ಧ ಭಾರತೀಯ ಫ‌ಲವಾಗಿರುವ ನೇರಳೆಯನ್ನು ಭಾರತದ ಕರ್ಜೂರ ಎಂದು ಕರೆಯುತ್ತಾರೆ. ಕರ್ಜೂರಕ್ಕೆ ಸಮನಾಗಿರುವ ಎಲ್ಲ ಅಂಶಗಳನ್ನು ನೇರಳೆ ಹೊಂದಿರುವುದೇ ಇದಕ್ಕೆ ಕಾರ ಣ. ಇದರ ಬೀಜವನ್ನು ಒಣಗಿಸಿ ಪುಡಿ ಮಾಡಿ ಬಿಸಿ ನೀರಿನಲ್ಲಿ ಸೇವಿಸಿದರೆ ಜಂತು ಹುಳ ನಿಯಂತ್ರಣಕ್ಕೆ ಒಳ್ಳೆಯದು. ಯಾವುದೇ ಫ‌ಲವಾದರೂ ಮಿತ ಸೇವನೆ ಒಳ್ಳೆಯದು. – ಡಾ| ಕೆ. ಜಯರಾಮ ಭಟ್‌, ಆಯುರ್ವೇದ ವೈದ್ಯರು, ಉಡುಪಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.