ಜಾಯಿಂಟ್‌ ವೀಲ್‌ ಅಳವಡಿಕೆ: ಜಾತ್ರೆಗೆ ಬಂದು ಸಿಲುಕಿದ ವಲಸೆ ಕಾರ್ಮಿಕರು


Team Udayavani, May 28, 2020, 6:48 AM IST

ಜಾಯಿಂಟ್‌ ವೀಲ್‌ ಅಳವಡಿಕೆ: ಜಾತ್ರೆಗೆ ಬಂದು ಸಿಲುಕಿದ ವಲಸೆ ಕಾರ್ಮಿಕರು

ಹೆಬ್ರಿ: ಇತಿಹಾಸ ಪ್ರಸಿದ್ಧ ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜಾತ್ರೆಯಲ್ಲಿ ಮನೋರಂಜನೆ ಆಟಕ್ಕಾಗಿ ಜಾಯಿಂಟ್‌ ವೀಲ್‌ ಅಳವಡಿಸಲು ಬಂದಿದ್ದ ಸುಮಾರು 20 ಮಂದಿ ವಲಸೆ ಕಾರ್ಮಿಕರು ಲಾಕ್‌ಡೌನ್‌ನಲ್ಲಿ ಸಿಲುಕಿ 2 ತಿಂಗಳುಗಳು ಕಳೆದಿವೆ. ಮೈಸೂರು, ಹುಣಸೂರಿನ ಮಹಿಳೆಯರು, ಮಕ್ಕಳು ಸಹಿತ 15 ಮಂದಿ ಹಾಗೂ ಮಹಾರಾಷ್ಟ್ರದ 5ಮಂದಿ ಸಂಕಷ್ಟಕ್ಕೆ ಸಿಲುಕಿದವರು. ಸದ್ಯ ಇವರು ದೇವಸ್ಥಾನದ ಎದುರಿನ ಗದ್ದೆಯಲ್ಲಿ ಟೆಂಟ್‌ ನಿರ್ಮಿಸಿ ವಾಸವಾಗಿದ್ದಾರೆ. ಊರಿಗೆ ತೆರಳಲು ಜಿಲ್ಲಾಡಳಿತ ಬಸ್ಸಿನ ವ್ಯವಸ್ಥೆ ಮಾಡಿದರೂ 6 ಲಾರಿಗಳಲ್ಲಿ ಸಾಗಿಸುವಷ್ಟು ಸಾಮಗ್ರಿಗಳು ಇರುವುದರಿಂದ ಸಮಸ್ಯೆಯಾಗಿದೆ. ಹುಣಸೂರಿಗೆ ಲಾರಿಯೊಂದಕ್ಕೆ 13 ಸಾ.ರೂ., ಮುಂಬಯಿಗೆ 22 ಸಾವಿರ ರೂ. ಬಾಡಿಗೆ ಕೇಳುತ್ತಿದ್ದು, ಒಟ್ಟು 90 ಸಾವಿರಕ್ಕೂ ಮಿಕ್ಕಿ ಹಣದ ಆವಶ್ಯಕತೆ ಇದೆ.

ಮಕ್ಕಳು, ಹೆಂಗಸರು ಸಹಿತ 20 ಮಂದಿ ಆಹಾರದ ಸಮಸ್ಯೆ ಎದುರಿಸುತ್ತಿದ್ದ ಸಂದರ್ಭ ದೇವಸ್ಥಾನದಿಂದ ಊಟ ಒದಗಿಸಲಾಗಿದೆ. ಜತೆಗೆ ಸ್ಥಳೀಯ ದಾನಿಗಳು ಹಾಗೂ ವಿ ಲವ್‌ ಹ್ಯುಮ್ಯಾನಿಟಿ ಸಂಸ್ಥೆ ಅಗತ್ಯ ವಸ್ತುಗಳನ್ನು ಪೂರೈಸಿದೆ. ಗುಂಪಾಗಿ ರಸ್ತೆ ಬದಿಯ ಡೇರೆಯಲ್ಲಿ ವಾಸಿಸುವ ಇವರಿಗೆ ಕೈ ತೊಳೆಯಲು ಸಾಬೂನು ಹಾಗೂ ಪ್ರತಿಯೊಬ್ಬರಿಗೂ ಮಾಸ್ಕ್ಗಳನ್ನು ಮಾನವೀಯ ನೆಲೆಯಲ್ಲಿ ಹಿರಿಯಡಕ ಠಾಣಾ ಪೊಲೀಸ್‌ ಸಿಬಂದಿ ಸಂತೋಷ ಕಾರ್ಕಳ ನೀಡಿದ್ದಾರೆ.

ಕೂಲಿ ಕೆಲಸ
ಎರಡು ತಿಂಗಳುಗಳಿಂದ ಕೆಲಸವಿಲ್ಲದೆ ಇದ್ದ ಕಾರ್ಮಿಕರು ಬದುಕು ಕಟ್ಟಿಕೊಳ್ಳಲು ಪರಿಹಾರ ಕಂಡುಕೊಂಡಿದ್ದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು. ಮಹಿಳೆಯರು ಮೀನಿನ ಬಲೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡರೆ ಪುರುಷರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೃಷಿ ಕೂಲಿ ಕೆಲಸದಲ್ಲಿ ತೊಡಗಿಸಿಕೊಂಡು ನಿತ್ಯದ ಖರ್ಚನ್ನು ನಿಭಾಯಿಸಿದರು.

ಊರಿಗೆ ತೆರಳಲು ಸೂಚನೆ
ಮಳೆಗಾಲ ಶುರುವಾದರೆ ಸಂಭಾವ್ಯ ಸಾಂಕ್ರಾಮಿಕ ರೋಗ, ಅನಾರೋಗ್ಯದಿಂದ ಕಷ್ಟವಾಗಲಿದೆ. ಆದ್ದರಿಂದ ಅಧಿಕಾರಿಗಳು ಶನಿವಾರದೊಳಗೆ ಊರಿಗೆ ತೆರಳಲು ಸೂಚನೆ ನೀಡಿದ್ದು, ಸಂಕಷ್ಟದಲ್ಲಿದ್ದಾರೆ.

ಸರಕಾರದ ಸಹಾಯವಿಲ್ಲ
“ಚಿಕ್ಕ ಮಕ್ಕಳೊಂದಿಗೆ ಕಷ್ಟದಲ್ಲಿ ಜೀವನ ಸಾಗಿಸುವ ನಮಗೆ ಪೆರ್ಡೂರಿನ ಜನತೆಯ ಸಹಕಾರದಿಂದ ಜೀವ ಉಳಿದುಕೊಂಡಿದೆ. ಸ್ಥಳೀಯರಾದ ತುಕಾರಾಮ್‌ ಅವರ ಸಹಾಯ ಹಾಗೂ ದೇವಸ್ಥಾನದ ಊಟ ಹೊರತುಪಡಿಸಿದರೆ ಸರಕಾರದಿಂದ ಬೇರೆ ಯಾವ ಸಹಾಯವೂ ನಮಗೆ ಸಿಗಲಿಲ್ಲ’ ಎಂದು ಕಾರ್ಮಿಕರಲ್ಲೊಬ್ಬರಾದ ಸಾವಿತ್ರಿ ಬಾಯಿ ತಿಳಿಸಿದ್ದಾರೆ.

ಸ್ಪಂದಿಸುವುದು ಅಗತ್ಯ
ಎರಡು ತಿಂಗಳುಗಳಿಂದ ಸಂಕಷ್ಟಕ್ಕೆ ಸಿಲುಕಿದ ವಲಸೆ ಕಾರ್ಮಿಕರಿಗೆ ನಮ್ಮ ಸಂಸ್ಥೆಯ ವತಿಯಿಂದ ಸುಮಾರು 75 ಸಾವಿರಕ್ಕೂ ಅಧಿಕ ಆಹಾರ ಸಾಮಗ್ರಿಗಳನ್ನು ನೀಡಲಾಗಿದೆ. ಮುಂದೆ ಮಳೆಗಾಲ ಬರುವುದರಿಂದ ಆದಷ್ಟು ಶೀಘ್ರ ಇವರನ್ನು ಊರಿಗೆ ಕಳುಹಿಸುವುದು ಉತ್ತಮ. ಈ ಬಗ್ಗೆ ತಹಶೀಲ್ದಾರ್‌ ಅವರಲ್ಲಿ ಮತನಾಡಿದ್ದೇವೆ. ಸರಕು ಸಾಗಿಸಲು ಹಣದ ಆವಶ್ಯಕತೆ ಇರುವುದರಿಂದ ಜಿಲ್ಲಾಡಳಿತ ದಾನಿಗಳ ನೆರವಿನೊಂದಿಗೆ ಸ್ಪಂದಿಸಬೇಕಾಗಿದೆ.
-ತುಕಾರಾಮ್‌ ನಾಯಕ್‌, ಸಂಸ್ಥಾಪಕರು, ವಿ ಲವ್‌ ಹ್ಯುಮ್ಯಾನಿಟಿ ಸಂಸ್ಥೆ, ಪೆರ್ಡೂರು

ಸಹಾಯದ ನಿರೀಕ್ಷೆಯಲ್ಲಿದ್ದೇವೆ
ಊರು ಊರು ಜಾತ್ರೆ ಸುತ್ತಿ ಜೀವನ ಸಾಗಿಸುವ ನಮಗೆ ಲಾಕ್‌ಡೌನ್‌ನಿಂದ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕಾರಿಗಳು ಬರುವ ಶನಿವಾರದೊಳಗೆ ಜಾಗ ಖಾಲಿ ಮಾಡಲು ಹೇಳಿದ್ದಾರೆ. ಊರಿಗೆ ನಮ್ಮ ಸರಕುಗಳೊಂದಿಗೆ ಸಾಗಲು ಹಣವಿಲ್ಲ. ನಮ್ಮ ಊರಿನವರಿಂದ ಸಾಲ ಕೇಳಿದ್ದೇವೆ. ಕೆಲಸವಿಲ್ಲದೆ ಬದುಕು ಸಾಗಿಸುವುದು ಕಷ್ಟವಾದ್ದ‌ರಿಂದ ಸರಕಾರದ ಸಹಾಯದ ನಿರೀಕ್ಷೆಯಲ್ಲಿ ಇದ್ದೇವೆ.
-ರವಿ ಹುಣಸೂರು, ಸಂತ್ರಸ್ತ ಕಾರ್ಮಿಕ

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.