ಮತದಾನಕ್ಕೆ ಕೆಲವೇ ದಿನ: ಇವಿಎಂ, ವಿವಿಪ್ಯಾಟ್ ಬಗ್ಗೆ ತಿಳಿಯಬೇಕೆ?
Team Udayavani, Apr 29, 2023, 4:03 PM IST
ಉಡುಪಿ: ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಜಿಲ್ಲಾಡಳಿತ ಹಾಗೂ ಚುನಾವಣ ಆಯೋಗದ ಮೂಲಕ ಹಲವಾರು ರೀತಿಯ ಪೂರಕ ಕ್ರಮಗಳನ್ನು ನಡೆಸಲಾಗುತ್ತಿದೆ.
ಸಿಬಂದಿಗೆ ತರಬೇತಿ, ಸಭೆಗಳನ್ನು ಆಯೋಜಿಸಿ ವಿವಿಧ ಮಾಹಿತಿ ನೀಡಲಾಗುತ್ತಿದೆ. ಮತದಾನದಂದು ಕಾಣಸಿಗುವ ಇವಿಎಂ (ಇಲೆಕ್ಟ್ರಾನಿಕ್ ವೋಟಿಂಗ್ ಮೆಶಿನ್) ಯಂತ್ರ, ಬ್ಯಾಲೆಟ್ ಪೇಪರ್ ಬಗ್ಗೆ ಮತದಾರರಿಗೆ ಒಂದು ಕಿರು ಮಾಹಿತಿ ಇಲ್ಲಿದೆ.
ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಮತದಾನ ಮಾಡಲು ಕಲ್ಪಿಸುವ ಸಾಧನವೇ ಇವಿಎಂ. ಮತದಾನ ಮಾಡುವ ಹಾಗೂ ಮತ ಎಣಿಕೆ ಮಾಡುವ ಸಾಧನ. ಇವಿಎಂನಲ್ಲಿ ಕಂಟ್ರೋಲ್ ಯುನಿಟ್ ಹಾಗೂ ಬಾಲೆಟಿಂಗ್ ಯುನಿಟ್ ಎನ್ನುವ ಎರಡು ಸಾಧನಗಳ ಮೂಲಕ ಇವಿಎಂ ಮಷಿನ್ ಅನ್ನು ವಿನ್ಯಾಸ ಮಾಡಲಾಗಿದೆ.
ತಾನು ಉದ್ದೇಶಿಸಿದ ಅಭ್ಯರ್ಥಿಗೆ ಮತ ಬಿದ್ದಿದೆಯೇ ಇಲ್ಲವೇ ಎಂದು ಮತದಾರ ಖಾತರಿಪಡಿಸಿಕೊಳ್ಳಲು ಇರುವ ಯಂತ್ರವೇ ವಿವಿಪ್ಯಾಟ್ (ವೋಟರ್ ವೆರಿಫೈಯೆಬಲ್ ಪೇಪರ್ ಟ್ರಾಯಲ್) ಮೆಷಿನ್. ಇವಿಎಂನಲ್ಲಿ ಮತದಾನ ಮಾಡಿದ ಕೂಡಲೇ ವಿವಿಪ್ಯಾಟ್ನಲ್ಲಿ ಮತದಾರ ಗುಂಡಿ ಒತ್ತಿದ ಕೂಡಲೇ ಮತ ಚಲಾಯಿಸಿದ ಅಭ್ಯರ್ಥಿಯ ಹೆಸರು, ಚಿಹ್ನೆ, ಕ್ರಮ ಸಂಖ್ಯೆ ಮುಂತಾದ ಮಾಹಿತಿಗಳು ಕಾಣಿಸಿಕೊಳ್ಳುತ್ತವೆ. ಅದು ಮುದ್ರಣ ಕೂಡ ಆಗುತ್ತದೆ. ಈ ಚೀಟಿ 7 ಸೆಕೆಂಡುಗಳ ಕಾಲ ಮತದಾರರಿಗೆ ಕಾಣಿಸಿಕೊಂಡು ಬಳಿಕ ಬಾಕ್ಸ್ನೊಳಗೆ ಬೀಳುತ್ತದೆ. ಚುನಾವಣೆ ಮೋಸ ತಡೆಯಲು ಈ ಯಂತ್ರವನ್ನು ವಿನ್ಯಾಸಗೊಳಿಸಲಾಗಿದೆ. ಇವಿಎಂ ಹಾಗೂ ವಿವಿಪ್ಯಾಟ್ ತಾಳೆಯಾಗದಿದ್ದರೆ, ವಿವಿಪ್ಯಾಟ್ನಲ್ಲಿ ಮುದ್ರಣವಾಗಿರುವ ಚೀಟಿಗಳನ್ನು ಎಣಿಕೆ ಮಾಡಲಾಗುತ್ತದೆ.
ಇವಿಎಂನಲ್ಲಿ ಕೇವಲ ಕಂಟ್ರೋಲ್ ಯುನಿಟ್ ಮತ್ತು ಬ್ಯಾಲೆಟ್ ಯುನಿಟ್ ಇರುತ್ತದೆ. ಬ್ಯಾಲೆಟ್ ಯುನಿಟ್ ಅಂದರೆ ಮತ ಚಲಾಯಿಸುವ ಯಂತ್ರ. ಕಂಟ್ರೋಲ್ ಯುನಿಟ್ ಅಂದರೆ ಈ ಮತಗಳು ಹೋಗಿ ಸಂಗ್ರಹವಾಗುವ ಯಂತ್ರ. ವಿವಿ ಪ್ಯಾಟ್ನಲ್ಲಿ ಇವುಗಳ ಜತೆಗೆ ವಿವಿ ಪ್ಯಾಟ್ ಯಂತ್ರ ಇರುತ್ತದೆ. ಇದು ಬ್ಯಾಲೆಟ್ ಯುನಿಟ್ ಪಕ್ಕದಲ್ಲಿರುತ್ತದೆ.
ಜಿಲ್ಲೆಗೆ ಈಗಾಗಲೇ ಇವಿಎಂ ಯಂತ್ರಗಳು ಆಗಮಿಸಿದ್ದು, ಆಯಾ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆಯಾಗಿದೆ. 1,111 ಮತಗಟ್ಟೆಗಳಿಗೆ ಶೇ.120 ಇವಿಎಂ ಮತಯಂತ್ರಗಳನ್ನು ಹಂಚಿಕೆ ಮಾಡಲಾಗಿದೆ. ಎಲ್ಲ ಕ್ಷೇತ್ರಗಳಿಗೆ ತಲಾ ಶೇ. 20 ಹೆಚ್ಚುವರಿ ಯಂತ್ರಗಳನ್ನು ನೀಡಲಾಗಿದೆ. ಶೇ. 30 ಹೆಚ್ಚುವರಿ ವಿವಿ ಪ್ಯಾಟ್ಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ