ಕಡಿಯಾಳಿ: ಮನೆಮನೆ ಭಜನೆ-ಗ್ರಾಮ ಭಜನೆ ಉದ್ಘಾಟನೆ


Team Udayavani, Apr 4, 2022, 12:14 PM IST

bhajan

ಉಡುಪಿ: ದೇವಸ್ಥಾನವೊಂದು ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳುವಾಗ ಜಾತಿಮತ ಭೇದವಿಲ್ಲದೆ ಆ ಗ್ರಾಮದ ಎಲ್ಲ ಭಕ್ತರ ಮನೆಗಳಲ್ಲಿ ಭಜನೆ ಮಾಡುವುದು ವಿಶಿಷ್ಟ ಕಲ್ಪನೆಯ ಕ್ರಾಂತಿಯಾಗಿದೆ. ನಾವು ಬೇರೆ ಬೇರೆ ರೀತಿಯ ಭಜನೆಗಳನ್ನು ಕಂಡಿದ್ದೇವೆ. ಇದು ಮಾತ್ರ ವಿಶಿಷ್ಟವಾ ದುದು. ಇದರಿಂದ ದೇವಸ್ಥಾನದ ಜತೆ ಮನೆಗಳಲ್ಲಿಯೂ ಸಾನ್ನಿಧ್ಯ ವೃದ್ಧಿಯಾಗುತ್ತದೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಹೇಳಿದರು.

ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿ ರುವ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ‘ಮನೆಮನೆ ಭಜನೆ -ಗ್ರಾಮ ಭಜನೆ’ಯನ್ನು ಶನಿವಾರ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಬ್ರಹ್ಮಕಲಶೋತ್ಸವ ಪ್ರಚಾರದ ಸ್ಟಿಕ್ಕರ್‌ ಬಿಡುಗಡೆಗೊಳಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು, ಈ ವಿನೂತನ ಕಲ್ಪನೆಯನ್ನು ಬೇರೆ ದೇವಸ್ಥಾನಗಳಲ್ಲಿಯೂ ಅಳವಡಿಸಿಕೊಳ್ಳಬಹುದು. ದೇವಸ್ಥಾನದಲ್ಲಿ ಹಬ್ಬದ ವಾತಾವರಣವಿರುವಂತೆ ಭಕ್ತರ ಮನೆಗಳಲ್ಲಿಯೂ ಹಬ್ಬದ ವಾತಾವರಣ ಮೂಡಲು ಮನೆ ಮನೆ ಭಜನೆ ಸಹಕಾರಿಯಾಗುತ್ತದೆ ಎಂದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಾಗೇಶ್‌ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಸದಸ್ಯರಾದ ರಾಕೇಶ್‌ ಜೋಗಿ ಸ್ವಾಗತಿಸಿ ಸಂದೀಪ್‌ ಸನಿಲ್‌ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರ್ವಹಿಸಿದರು. ಶಾಸಕ ಕೆ.ರಘುಪತಿ ಭಟ್‌, ವ್ಯವಸ್ಥಾಪನ ಮಂಡಳಿ ಸದಸ್ಯ ಕೆ.ನಾಗರಾಜ ಶೆಟ್ಟಿ, ಗ್ರಾಮ ಭಜನೆ ಸಂಚಾಲಕ ಜೀವರತ್ನ ದೇವಾಡಿಗ, ಅರ್ಚಕ ರಾಧಾಕೃಷ್ಣ ಉಪಾಧ್ಯಾಯ, ಪವಿತ್ರ ಪಾಣಿ ಪ್ರೊ| ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯಾಯ ಉಪಸ್ಥಿತರಿದ್ದರು.

‌ಸ್ವರ್ಣ ಕಲಶಕ್ಕೆ ಚಿನ್ನ ಸಮರ್ಪಣೆ

ಅರ್ಚಕ ದುರ್ಗಾಪ್ರಸಾದ್‌ ಉಪಾ ಧ್ಯಾಯ ಮತ್ತು ಶಾಂತಿ ಸುಧೀಂದ್ರ ತುಮಕೂರು ಅವರು ಸುಬ್ರಹ್ಮಣ್ಯ ದೇವರ ಗುಡಿಗೆ ಸ್ವರ್ಣಕಲಶದ ಬಾಬ್ತು 60 ಗ್ರಾಂ ಚಿನ್ನವನ್ನು ಸಮರ್ಪಿಸಿದರು.

ನಿತ್ಯ 60 ಮನೆಗಳಲ್ಲಿ ಭಜನೆ

ಮೊದಲ ದಿನ ಸುಮಾರು 65 ಮನೆಗಳಲ್ಲಿ ಭಜನೆ ನಡೆಯಿತು. ಪ್ರತೀ ಭಜನೆ ತಂಡದಲ್ಲಿ ತಲಾ 30 ರಿಂದ 40ರ ತನಕ ಮಹಿಳೆಯರು, ಮಕ್ಕಳು, ಯುವಕರು, ಹಿರಿಯರು ವಿಶೇಷ ಆಸಕ್ತಿಯಿಂದ ಪಾಲ್ಗೊಂಡರು. ಇಂತಹ ಐದು ತಂಡ ನಿತ್ಯ 60 ಮನೆಗಳನ್ನು ಭಜನೆ ಮೂಲಕ ಸಂಪರ್ಕಿಸಲಿದೆ. ಒಂದು ತಿಂಗಳ ಕಾಲ ಇದು ನಡೆಯಲಿದೆ. ಪ್ರತಿಯೊಂದು ಮನೆಯಲ್ಲಿ ದೀಪ ಹಚ್ಚಿ, ರಂಗವಲ್ಲಿ ಬಿಡಿಸಿ ಊದುಬತ್ತಿ ಹಚ್ಚಿ ಹೃದಯಾಂತರಾಳದಿಂದ ಸ್ವಾಗತಿಸಲಾಯಿತು. ಕೆಲವು ಮನೆಯಲ್ಲಿ ಹಣ್ಣು-ಹಂಪಲುಗಳೊಂದಿಗೆ ಪಾನಕದ ವ್ಯವಸ್ಥೆ ಮಾಡಿದ್ದರು. ಭಜನೆ ತಂಡದವರು ಮನೆಮನೆಗೆ ಶ್ರೀದೇವರ ಕುಂಕುಮ ಪ್ರಸಾದ ಪಂಚಕಜ್ಜಾಯ ಕಟ್ಟು, ಭಜನ ಪುಸ್ತಕವನ್ನು ಮತ್ತು ಬ್ರಹ್ಮಕಲಶೋತ್ಸವದ ಸ್ಟಿಕ್ಕರ್‌ ನೀಡುತ್ತಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಂಡದ ಮುಖ್ಯಸ್ಥರಾದ ಜೀವರತ್ನ ದೇವಾಡಿಗ, ಗೀತಾ ನಾಯಕ್‌, ಸುಮಾ ಉದಯ, ಅಶ್ವಿ‌ನಿ ಪೈ, ಶಕುಂತಳಾ ಶೆಟ್ಟಿಯವರಿಗೆ ಪ್ರಸಾದದ ಪರಿಕರಗಳನ್ನು ಹಸ್ತಾಂತರಿಸಿದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.