Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು
Team Udayavani, May 5, 2024, 12:47 AM IST
ಕಾಪು: ಮುಂಬಯಿಯಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ಉದ್ಯಾವರ ಗ್ರಾಮದ ಉದಯ ವಿ. ಆಚಾರ್ಯ (49) ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದು ದೇಹಸ್ಥಿತಿ ವಿಷಮಿಸಿ ಉಡುಪಿಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯವಾಗ ಮೇ 3ರಂದು ಸಾವನ್ನಪ್ಪಿದ್ದಾರೆ.
ಮೇ 1ರಂದು ಮುಂಬಯಿಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಆ್ಯಂಬುಲೆನ್ಸ್ ಮೂಲಕ ಊರಿಗೆ ಕರೆತಂದಿದ್ದು, ಮೇ 3ರಂದು ರಾತ್ರಿ ದೇಹಸ್ಥಿತಿ ಉಲ್ಬಣಿಸಿದಾಗ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಆ ವೇಳೆಗಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್
ನಾಳೆ ದೊಡ್ಡಣ್ಣಗುಡ್ಡೆ ಕ್ಷೇತ್ರದಲ್ಲಿ ಶತಬ್ರಹ್ಮಕುಂಭಾಭಿಷೇಕ,ಕಲಶಸೇವೆ ಸಹಿತ ಹಲವು ಕಾರ್ಯಕ್ರಮ
Udupi ರಘುಪತಿ ಭಟ್ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು
LS Polls: ಉಡುಪಿ; ಜೂ. 4: ಮತ ಎಣಿಕೆ, ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ
Karkala ಬಸ್ ಪ್ರಯಾಣಿಕರಿಂದ ಟಿಪ್ಪರ್ ಚಾಲಕನಿಗೆ ಹಲ್ಲೆ: ದೂರು