ರಾ.ಹೆ. 66ರ ಸುಗಮ ಸಂಚಾರಕ್ಕೆ ಕಿರಿಕಿರಿ ಮಾಡುತ್ತಿದೆ ಸಂತೆ

ಸರ್ವಿಸ್‌ ರಸ್ತೆಯಲ್ಲೇ ನಡೆಯುತ್ತಿದೆ ಕಾಪು ಶುಕ್ರವಾರದ ಸಂತೆ ಅಂಗಡಿ

Team Udayavani, Dec 11, 2019, 4:59 AM IST

ds-33

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಮಂಗಳೂರು ಸರ್ವಿಸ್‌ ರಸ್ತೆಗೆ ತಾಗಿಕೊಂಡೇ ನಡೆಯುತ್ತಿರುವ ಕಾಪುವಿನ ವಾರದ ಸಂತೆಯು ಹೆದ್ದಾರಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ಗೆ ಕಾರಣವಾಗುತ್ತಿದೆ. ಶುಕ್ರವಾರ ನಡೆಯುವ ವಾರದ ಸಂತೆಯಂದು ಸರ್ವಿಸ್‌ ರಸ್ತೆಯಲ್ಲಿ ಪದೇ ಪದೇ ಎದುರಾಗುವ ಟ್ರಾಫಿಕ್‌ ಜಾಮ್‌ನಿಂದಾಗಿ ಮಾರುಕಟ್ಟೆ ವ್ಯಾಪಾರಸ್ಥರು, ಸಂತೆ ವ್ಯಾಪಾರಸ್ಥರು, ಸಂತೆಗೆ ಬರುವ ಗ್ರಾಹಕರು ಮತ್ತು ಹೆದ್ದಾರಿ ಸಂಚಾರಿಗಳಿಗೆ ನಿರಂತರ ಕಿರಿಕಿರಿಯನ್ನುಂಟು ಮಾಡುತ್ತಿದೆ.

ಕಾಪುವಿನ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ – ಮಂಗಳೂರು ರಸ್ತೆಯ ಬದಿಯಲ್ಲಿ ಶತಮಾನಗಳ ಕಾಲದಿಂದಲೂ ನಡೆದುಕೊಂಡು ಬಂದಿರುವ ವಾರದ ಸಂತೆಯು ಹಿಂದೆ ಹೆದ್ದಾರಿಗೆ ತಾಗಿಕೊಂಡಂತೆಯೇ ನಡೆಯುತ್ತಿದ್ದರೆ, ಈಗ ಅದು ಸರ್ವಿಸ್‌ ರಸ್ತೆಗೆ ತಾಗಿಕೊಂಡೇ ನಡೆಯುತ್ತಿರುವುದು ಟ್ರಾಫಿಕ್‌ ಜಾಮ್‌ಗೆ ಮುಖ್ಯ ಕಾರಣವಾಗಿದೆ. ಅದರೊಂದಿಗೆ ಸಂತೆಯೊಳಗೆ ಬರುವ ಗ್ರಾಹಕರು ಮತ್ತು ಸಂತೆ ವ್ಯಾಪಾರಸ್ಥರು ತಮ್ಮ ವಾಹನಗಳನ್ನು ಇದೇ ರಸ್ತೆಯಲ್ಲೇ ನಿಲ್ಲಿಸಿ ಸಂತೆಯೊಳಗೆ ಬರುತ್ತಾರೆ. ಉಡುಪಿ – ಮಂಗಳೂರು ಸರ್ವೀಸ್‌ ರಸ್ತೆಯ ಹೊಸ ಮಾರಿಗುಡಿ ಜಂಕ್ಷನ್‌ನಿಂದ ಹಿಡಿದು ಮಯೂರಾ ಹೊಟೇಲ್‌ವರೆಗಿನ ರಸ್ತೆಯುದ್ದಕ್ಕೂ ವಾಹನಗಳನ್ನು ಪಾರ್ಕ್‌ ಮಾಡುವುದರಿಂದಲೂ ಟ್ರಾಫಿಕ್‌ ಜಾಮ್‌ ಹೆಚ್ಚಾಗುತ್ತದೆ.

ಹಿಮ್ಮುಖ ಚಲನೆ, ಕರ್ಕಶ ಹಾರ್ನ್, ಬೈಗುಳದ ಕಿರಿಕಿರಿ
ವೇಗವಾಗಿ ಚಲಿಸುವ ಬಸ್‌ಗಳಿಗೆ ಎದುರಾಗಿ ಬರುವ ರಿಕ್ಷಾ, ಕಾರು ಸಹಿತ ಇತರ ವಾಹನ ಸವಾರರು ತಮ್ಮ ವಾಹನಗಳನ್ನು ಹಿಮ್ಮುಖವಾಗಿ ಚಲಾಯಿಸಿ ಕೊಂಡು ಹೋಗುವುದು ಅನಿವಾರ್ಯವಾಗಿ ಬಿಡುತ್ತದೆ. ಹಿಮ್ಮುಖ ಚಲನೆಯ ವೇಳೆ ಬೇರೆ ವಾಹನಗಳಿಗೆ ಸ್ವಲ್ಪ ತಾಗಿದರೆ ಅದುವೇ ದೊಡ್ಡ ಕಿರಿಕಿರಿಯಾಗಿ ಬಿಡುತ್ತದೆ. ಅದೇ ಜಾಗದಲ್ಲಿ ಪೊಲೀಸರೇನಾದರೂ ಇದ್ದರೆ ಅವರಿಂದಲೂ ಬೈಗಳುದ ಸುರಿಮಳೆಯನ್ನು ಕೇಳಬೇಕಾದ ಅನಿವಾರ್ಯತೆ ವಾಹನ ಸವಾರರದ್ದಾಗಿರುತ್ತದೆ.

ಕಾಪುವಿನ ವಾರದ ಸಂತೆಗೆ ಬರುವ ವಾಹನಗಳ ನಿಲುಗಡೆಗೆ ಪ್ರತ್ಯೇಕ ಸ್ಥಳ ನಿಗದಿಪಡಿಸುವುದು, ಸರ್ವಿಸ್‌ ರಸ್ತೆಗೆ ತಾಗಿಕೊಂಡಂತೆ ಹಾಕುವ ಅಂಗಡಿಗಳನ್ನು ತೆರವುಗೊಳಿಸುವುದು, ವಾರದ ಸಂತೆಯಂದು ಸರ್ವೀಸ್‌ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡುವುದು, ವಾರದ ಸಂತೆ ನಡೆಯುವ ಬದಿಯ ಸರ್ವಿಸ್‌ ರಸ್ತೆಯಲ್ಲಿ ಎಕ್ಸ್‌ಪ್ರೆಸ್‌ ಬಸ್‌ಗಳು ಪ್ರವೇಶಿಸದಂತೆ ನಿರ್ಬಂಧಿಸ‌ುವುದು, ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಹೋಗುವವರಿಗೆ ದಂಡ ಹಾಕುವುದು ಮೊದಲಾದ ಪರಿಹಾರ ಕ್ರಮಗಳನ್ನು ಅನುಸರಿಸಿದರೆ ವಾರದ ಸಂತೆಯಿಂದ ಜನರಿಗೆ ಆಗುವ ತೊಂದರೆಯನ್ನು ತಪ್ಪಿಸಬಹುದು ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.

ಯಾರಿಗೆ ಕಷ್ಟ – ನಷ್ಟ
ವಾರದ ಸಂತೆಯವರು ಸರ್ವಿಸ್‌ ರಸ್ತೆಗೆ ತಾಗಿಕೊಂಡೇ ಅಂಗಡಿಯ ಟೆಂಟ್‌ ಹಾಕುವುದರಿಂದ ಹಾಗೂ ತಮ್ಮ ದ್ವಿಚಕ್ರ ಸಹಿತವಾಗಿ ಇತರ ವಾಹನಗಳನ್ನು ಕೂಡಾ ಅಲ್ಲೇ ಪಾರ್ಕ್‌ ಮಾಡಿ ಬರುವುದರಿಂದ ಉಡುಪಿ – ಮಂಗಳೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್‌ ಬಸ್‌ಗಳು, ಕಾಪು ಪೇಟೆಯೊಳಗೆ ಬರುವ ಮತ್ತು ಪೇಟೆಯಿಂದ ಹೊರ ಬಂದು ಸರ್ವಿಸ್‌ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ, ರಿಕ್ಷಾ ಮತ್ತು ಕಾರು ಸವಾರರಿಗೆ, ಕಾಪು ಅಂಡರ್‌ ಪಾಸ್‌ನಿಂದ ಪೇಟೆಗೆ ಬರುವ ವಾಹನಗಳ ಸವಾರರಿಗೆ ಇದರಿಂದ ಹೆಚ್ಚಿನ ತೊಂದರೆ ಉಂಟಾಗುತ್ತಿದೆ.

ಪರ್ಯಾಯ ವ್ಯವಸ್ಥೆಗೆ ಪ್ರಯತ್ನ
ಕಾಪುವಿನ ವಾರದ ಸಂತೆಯಂದು ರಾ.ಹೆ. 66ರ ಸರ್ವಿಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗದಂತೆ ನೋಡಿಕೊಳ್ಳಲು ಪ್ರತೀ ಶುಕ್ರವಾರ ಸಿಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಆ ಮೂಲಕ ಟ್ರಾಫಿಕ್‌ ಜಾಮ್‌ ತಪ್ಪಿಸಲು ನಮ್ಮ ಕಡೆಯಿಂದ ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಓವರ್‌ ಬ್ರಿಡ್ಜ್ ಪಕ್ಕದ ಪ್ರದೇಶದಲ್ಲಿ ಬೈಕ್‌ ಇಡಲು ವ್ಯವಸ್ಥೆ ಮಾಡಿ ಕೊಡುವ ಅಗತ್ಯವಿದೆ. ನಮ್ಮೊಂದಿಗೆ ವರ್ತಕರು ಮತ್ತು ಗ್ರಾಹಕರು ಕೂಡಾ ಪೂರಕವಾಗಿ ಸ್ಪಂದಿಸುವ ಅಗತ್ಯವಿದೆ. ಈ ಬಗ್ಗೆ ಪುರಸಭೆಗೂ ಪತ್ರ ಬರೆದು, ಟ್ರಾಫಿಕ್‌ ಜಾಮ್‌ ತಪ್ಪಿಸಲು ಮತ್ತು ವಾರದ ಸಂತೆಗೆ ಪರ್ಯಾಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತದೋ ಎನ್ನುವುದನ್ನು ಪರಿಶೀಲಿಸುವಂತೆ ಒತ್ತಾಯಿಸಲಾಗಿದೆ.
– ರಾಜಶೇಖರ್‌ ಬಿ.ಸಾಗನೂರು, ಎಸ್‌. ಐ. ಕಾಪು ಪೊಲೀಸ್‌ ಠಾಣೆ

ಸಮರ್ಪಕ ವ್ಯವಸ್ಥೆ ಇಲ್ಲ
ಕಾಪುವಿನ ವಾರದ ಸಂತೆಯು ಕಳೆದ ಹಲವು ವರ್ಷಗಳಿಂದ ಅತ್ಯಂತ ಇಕ್ಕಟ್ಟಾದ ಪ್ರದೇಶದಲ್ಲಿ ನಡೆಯುತ್ತಿದ್ದು ಇಲ್ಲಿ ಸಮರ್ಪಕ ಸ್ಥಳಾವಕಾಶದ ಕೊರತೆಯಿದೆ. ಸಂತೆ ಮಾರ್ಕೆಟ್‌ ಬಳಿಯ ಖಾಸಗಿ ಜಾಗದಲ್ಲಿ ಸಂತೆ ನಡೆಯುತ್ತಿತ್ತು. ಈಗ ಅಲ್ಲಿ ಸಂತೆ ನಡೆಯಲು ಅವಕಾಶ ಸಿಗುತ್ತಿಲ್ಲ. ಪರ್ಯಾಯ ಸ್ಥಳಕ್ಕೆ ಸಂತೆಯನ್ನು ವರ್ಗಾಯಿಸಲು,ಅದಕ್ಕೆ ಪೂರಕವಾಗುವಂತೆ ವಾಹನ ನಿಲುಗಡೆಗೆ ಪರ್ಯಾಯ ವ್ಯವಸ್ಥೆಯನ್ನು ಜೋಡಿಸಿಕೊಡಲು ಪ್ರಯತ್ನಿಸಲಾಗುವುದು.
– ವೆಂಕಟೇಶ ನಾವಡ ಮುಖ್ಯಾಧಿಕಾರಿ, ಕಾಪು ಪುರಸಭೆ

ಶೀಘ್ರ ಪರಿಹಾರದ ಭರವಸೆ
ವಾರದ ಸಂತೆಗೆ ಬರುವ ಗ್ರಾಹಕರು ತಮ್ಮ ಬೈಕ್‌ಗಳನ್ನು ಸರ್ವಿಸ್‌ ರಸ್ತೆಯಲ್ಲೇ ನಿಲ್ಲಿಸುವುದರಿಂದ ಮತ್ತು ಸಂತೆಯ ಅಂಗಡಿಗಳನ್ನು ಮಾರುಕಟ್ಟೆಯ ಪ್ರವೇಶ ದ್ವಾರದ ಬಳಿಯೇ ಇಡುವುದರಿಂದ ಮಾರುಕಟ್ಟೆಯ ಒಳಗೆ ಬರುವ ಗ್ರಾಹಕರಿಗೆ ಮತ್ತು ಅಂಗಡಿ ಮಾಲಕರಿಗೆ ತೊಂದರೆ ಉಂಟಾಗುತ್ತಿದೆ. ಇಲ್ಲಿನ ಸಮಸ್ಯೆಯ ಬಗ್ಗೆ ಈಗಾಗಲೇ ಪುರಸಭೆಗೂ ಮನವಿ ಮಾಡಿದ್ದೇವೆ. ಶೀಘ್ರ ಸಮಸ್ಯೆ ಬಗೆ ಹರಿಸುವ ಭರವಸೆ ದೊರಕಿದೆ.
– ಹರೀಶ್‌ ಶೆಟ್ಟಿ, ವ್ಯಾಪಾರಸ್ಥರು, ಕಾಪು ಮಾರುಕಟ್ಟೆ

- ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.