ಸೇವೆಗೆ ತೆರೆದುಕೊಳ್ಳದ ಕಾಪು ಮಿನಿ ವಿಧಾನ ಸೌಧ

ಉದ್ಘಾಟನೆಗೊಂಡು ಎರಡು ತಿಂಗಳು ಕಳೆಯಿತು

Team Udayavani, May 28, 2023, 4:23 PM IST

ಸೇವೆಗೆ ತೆರೆದುಕೊಳ್ಳದ ಕಾಪು ಮಿನಿ ವಿಧಾನ ಸೌಧ

ಕಾಪು: ನೂತನವಾಗಿ ನಿರ್ಮಾಣಗೊಂಡ ಕಾಪು ಮಿನಿ ವಿಧಾನಸೌಧ (ತಾಲೂಕು ಆಡಳಿತ ಸೌಧ) ಉದ್ಘಾಟನೆಗೊಂಡು ಎರಡು ತಿಂಗಳು ಕಳೆದರೂ ನೂತನ ಕಟ್ಟಡ ಇನ್ನೂ ಸಾರ್ವಜನಿಕ ಸೇವೆಗೆ ತೆರೆದುಕೊಂಡಿಲ್ಲ. ಉದ್ಘಾಟನೆಗೊಂಡ ಬಳಿಕ ಒಂದೂವರೆ ತಿಂಗಳು ಚುನಾವಣ ಕೆಲಸಕ್ಕೆ ಬಳಕೆಯಾದ ತಾಲೂಕು ಆಡಳಿತ ಸೌಧ ಮತ್ತೆ ಎಂದಿನಂತೆ ಪರಿಸ್ಥಿತಿ ಇದೆ. ಕೂಡಲೇ ಸಂಬಂಧಪಟ್ಟ ಕಚೇರಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಒಂದೇ ಸೂರಿನಡಿ ಸರಕಾರಿ ಸೇವೆ ಒದಗಿಸಬೇಕೆನ್ನುವ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

2018ರಲ್ಲಿ ಕಾಪು ತಾಲೂಕು ಉದ್ಘಾಟನೆಗೊಂಡಿದ್ದು, ಅಂದೇ ತಾಲೂಕು ಕಚೇರಿ ಕಟ್ಟಡಕ್ಕೂ ಶಿಲಾನ್ಯಾಸ ನೆರವೇರಿತ್ತಾದರೂ ಕಾಮಗಾರಿ ಮಾತ್ರ ಆರಂಭಗೊಂಡಿರಲಿಲ್ಲ. 2019-20ರಲ್ಲಿ 10 ಕೋ. ರೂ. ಅನುದಾನ ಸಹಿತವಾಗಿ ಮಿನಿ ವಿಧಾನಸೌಧ ಮಂಜೂರಾಗಿದ್ದು 2021ರಲ್ಲಿ ಶಿಲಾನ್ಯಾಸ ನೆರವೇರಿ, ಕಾಮಗಾರಿ ಆರಂಭಗೊಂಡಿತ್ತು. 2023 ಮಾ. 17ರಂದು ಕಾಪು ಮಿನಿ ವಿಧಾನಸೌಧ (ತಾಲೂಕು ಆಡಳಿತ ಸೌಧ) ಉದ್ಘಾಟನೆಗೊಂಡಿತು.

ತಪ್ಪದ ಅಲೆದಾಟ
ಒಂದೇ ಸೂರಿನಡಿಯಲ್ಲಿ ಎಲ್ಲ ಇಲಾಖೆಗಳ ಸೇವೆ ನೀಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ 2018ರಲ್ಲೇ ಕಾಪು ತಾಲೂಕು ಘೋಷಣೆಯಾಗಿತ್ತಾದರೂ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಕಚೇರಿಗಳು ಒಂದೇ ಸೂರಿನಡಿ ಬಾರದೇ ಇದ್ದುದರಿಂದ ಜನರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲ್ಲಿಂದ ಇಲ್ಲಿಗೆ – ಇಲ್ಲಿಂದ ಅಲ್ಲಿಗೆ ಅಲೆದಾಡಬೇಕಾದ ಅನಿವಾರ್ಯತೆಯಿತ್ತು. ರಾ.ಹೆ. 66ರ ಬಳಿಯ ಪುರಸಭೆ ಹಳೆ ಕಟ್ಟಡದಲ್ಲಿ ತಾಲೂಕು ಆಡಳಿತ ಕಚೇರಿ, ತಹಶೀಲ್ದಾರ್‌ ಕಚೇರಿ ತೆರೆದಿದ್ದರೂ ಕಂದಾಯ ನಿರೀಕ್ಷಕರ ಕಚೇರಿ ಮಾತ್ರ ಪುರಸಭೆ ಆಡಳಿತ ಸೌಧ, ಸರ್ವೇ ಶಾಖೆ ಕಾಪು ಬಂಗ್ಲೆ ಮೈದಾನಲ್ಲಿ ಕಾರ್ಯಾಚರಿಸುತ್ತಿತ್ತು. ದಾಖಲೆಗಳ ಕೊಠಡಿ (ರೆಕಾರ್ಡ್‌ ರೂಂ) ಉಡುಪಿಯಲ್ಲೇ ಉಳಿದು ಬಿಟ್ಟಿತ್ತು. ಹಾಗಾಗಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ವಿವಿಧ ಗ್ರಾಮಗಳಿಂದ ತಾಲೂಕು ಕೇಂದ್ರಕ್ಕೆ ಬರುವ ಜನರಿಗೆ ಅಲೆದಾಟ ತಪ್ಪಿರಲಿಲ್ಲ.

10 ಕೋಟಿ ರೂ. ವೆಚ್ಚದ ನೂತನ ಕಟ್ಟಡ
ಕಾಪು ಬಂಗ್ಲೆ ಮೈದಾನದ ಬಳಿ 3.42 ಎಕರೆ ಜಮೀನಿನಲ್ಲಿ ಸುಸಜ್ಜಿತ ಮಿನಿ ವಿಧಾನಸೌಧ – ತಾಲೂಕಾಡಳಿತ ಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮಂಜೂರುಗೊಂಡು ಕಟ್ಟಡ ನಿರ್ಮಾಣಗೊಂಡಿದೆ. ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಒಟ್ಟು 2.857 ಚ. ಮೀ. ವಿಸ್ತಿರ್ಣದ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಗೊಂಡಿದೆ.

ನೂತನ ಸೌಧದಲ್ಲಿ ತಹಶೀಲ್ದಾರರ ಕಚೇರಿ ಸೇರಿದಂತೆ ಕೆಲವೇ ಕೆಲವು ಕಚೇರಿಗೆ ಅವಕಾಶವಿದೆ. ತಾಲೂಕು ಮಟ್ಟದ ಎಲ್ಲ ಕಚೇರಿಗಳು ಕಾಪುವಿಗೆ ಬರುವಂತಾಗಲಿ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ತಾಲೂಕು ಆಡಳಿತ ಸೌಧಕ್ಕೆ ಬೇಕಾದ ಮೂಲಸೌಕರ್ಯಗಳ ಜೋಡಣೆ, ಫರ್ನಿಚರ್‌, ತಾಂತ್ರಿಕ ವಯರಿಂಗ್‌ ಇತ್ಯಾದಿ ಜೋಡಣೆ ಬಾಕಿಯಿರುವುದರಿಂದ ಕಚೇರಿಗಳನ್ನು ಸ್ಥಳಾಂತರಗೊಳಿಸಿಲ್ಲ. ಜೂನ್‌ ತಿಂಗಳಿನಲ್ಲಿ ತಾಲೂಕು ಆಡಳಿತಕ್ಕೆ ಸಂಬಂಧಪಟ್ಟ ಬಹುತೇಕ ಕಚೇರಿಗಳು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಸಾರ್ವಜನಿಕರಿಗೆ ಸೇವೆ ನೀಡಲಿವೆ.
– ಶ್ರೀನಿವಾಸ ಮೂರ್ತಿ ಕುಲಕರ್ಣಿ, ತಹಶೀಲ್ದಾರರು, ಕಾಪು ತಾಲೂಕು

ಈ ವಾರದಲ್ಲೇ ಶಾಸಕರ ಕಚೇರಿಗೆ ಪ್ರವೇಶೋತ್ಸವ ಮಾಡುವ ಇರಾದೆಯಿತ್ತು. ಅಧಿವೇಶನದ ಕಾರಣದಿಂದಾಗಿ ದಿನ ಮುಂದೂಡಲಾಗಿದ್ದು ಮುಂದಿನ ವಾರ ಶಾಸಕರ ಕಚೇರಿ ಉದ್ಘಾಟಿಸಲಾಗುವುದು. ತಾಲೂಕು ಆಡಳಿತ ಸೌಧದಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಎಲ್ಲ ಕಚೇರಿಗಳೂ ಶೀಘ್ರವಾಗಿ ಜನ ಸೇವೆಗೆ ತೆರೆದುಕೊಳ್ಳಲಿದ್ದು ತಾಲೂಕಿನ ಜನತೆಗೆ ಅಗತ್ಯವಾಗಿರುವ ಸಬ್‌ ರಿಜಿಸ್ಟ್ರಾರ್‌ ಕಚೇರಿ ಸಹಿತ ತಾಲೂಕು ಮಟ್ಟದ ಎಲ್ಲ ಇಲಾಖೆಗಳು, ಕಚೇರಿಗಳನ್ನೂ ಆದ್ಯತೆಯ ಮೇರೆಗೆ ತಾಲೂಕು ಕೇಂದ್ರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.
-ಗುರ್ಮೆ ಸುರೇಶ್‌ ಶೆಟ್ಟಿ, ಶಾಸಕರು, ಕಾಪು

-ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.