ಮಜೂರು : ಜೀವಂತ ನಾಗರ ಹಾವುಗಳಿಗೆ ತನುವೆರೆದು ನಾಗರ ಪಂಚಮಿ ಆಚರಣೆ
Team Udayavani, Jul 25, 2020, 2:28 PM IST
ಕಾಪು: ಕಾಪು ಸಮೀಪದ ಮಜೂರಿನ ಗೋವರ್ಧನ ಭಟ್ ಅವರು ಶನಿವಾರ ಜೀವಂತ ನಾಗರ ಹಾವಿಗೆ ತನುವೆರೆದು ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು.
ಪ್ರತೀ ವರ್ಷ ನಾಗರ ಪಂಚಮಿಯಂದು ತನ್ನ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆಯುವ ಗೋವರ್ಧನ ಭಟ್ ಅವರು ಈ ಬಾರಿ ಎಂಟು ನಾಗರ ಹಾವುಗಳಿಗೆ ತನು ಎರೆದು, ಪೂಜಿಸಿದರು.
ಹಿಂದಿನ ವರ್ಷಗಳಲ್ಲಿ ಸ್ಥಳೀಯರ ಜೊತೆಗೂಡಿ ಜೀವಂತ ನಾಗರ ಹಾವುಗಳಿಗೆ ತನುವೆರೆದು ನಾಗರ ಪಂಚಮಿಯನ್ನು ಆಚರಿಸುತ್ತಿದ್ದ ಅವರು ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲಿ ತಾವು ಮಾತ್ರಾ ಕುಟುಂಬ ವರ್ಗದವರ ಜೊತೆಗೂಡಿ ಆಚರಿಸಿದರು.
ಸಾವಿರಾರು ಹಾವುಗಳಿಗೆ ಮರುಜನ್ಮ : ವಿವಿಧೆಡೆ ಅಪಾಯಕ್ಕೆ ಸಿಲುಕಿ ಗಾಯಗೊಳ್ಳುವ ನಾಗರ ಹಾವುಗಳನ್ನು ಮನೆಗೆ ತಂದು ಶುಶ್ರೂಷೆ ನೀಡಿ, ಆರೈಕೆ ಮಾಡುವ ಕಾಯಕದಲ್ಲಿ ನಿರತರಾಗಿರುವ ಗೋವರ್ಧನ ಭಟ್ ಅವರು ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದು, ಕೇಟರಿಂಗ್ ಉದ್ಯಮ ನಡೆಸುತ್ತಿದ್ದಾರೆ.
ಇದರೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿರುವ ಇವರು ಉರಗ ಪ್ರೇಮಿಯಾಗಿ ಈವರೆಗೆ ಸಾವಿರಾರು ಹಾವುಗಳಿಗೆ ಮರು ಜನ್ಮ ನೀಡಿದ್ದಾರೆ. ಅವರ ಆರೈಕೆಯಲ್ಲಿ ಚೇತರಿಸಿಕೊಂಡ ಹಾವುಗಳನ್ನು ಮರಳಿ ನಾಗ ಬನ, ಕಾಡಿನಲ್ಲಿ ಬಿಟ್ಟು ಬರುವ ಅವರು ಸುತ್ತಲಿನ ಜನರಿಗೆ ಮಾದರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ