ಸಂಪ್ರದಾಯ ಬದ್ಧ ಆಚರಣೆಗಷ್ಟೇ ಸೀಮಿತಗೊಂಡ ಕಾಪುವಿನ ಕಾಲಾವಧಿ ಆಟಿ ಮಾರಿಪೂಜೆ
Team Udayavani, Jul 29, 2020, 7:32 AM IST
ಕಾಪು: ಕೋವಿಡ್ ವೈರಸ್ ಹರಡುವಿಕೆಯ ಭೀತಿಯ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧವಾಗಿರುವ ಕಾಪುವಿನ ಮೂರೂ ಮಾರಿಗುಡಿಗಳಲ್ಲೂ ಮಂಗಳವಾರ ರಾತ್ರಿ ಸರಳ ರೀತಿಯಲ್ಲಿ ಆಟಿ ಮಾರಿಪೂಜೆಗೆ ಚಾಲನೆ ನೀಡಲಾಯಿತು.
ಕಾಪು ಶ್ರೀ ಹಳೇ ಮಾರಿಗುಡಿ, ಶ್ರೀ ಹೊಸ ಮಾರಿಗುಡಿ ಮತ್ತು ಶ್ರೀ ಮೂರನೇ ಮಾರಿಗುಡಿಯಲ್ಲಿ ಜು. 28 ಮತ್ತು ಜು. 29ರಂದು ಕಾಲಾವಧಿ ಆಟಿ ಮಾರಿಪೂಜೆ ನಡೆಯಲಿದ್ದು, ಕೋವಿಡ್ ವೈರಸ್ ಹರಡುವಿಕೆಯ ಭೀತಿಯ ಹಿನ್ನಲೆ ಸಾರ್ವಜನಿಕರ ಪಾಲ್ಗೊಳ್ಳುವುದನ್ನು ನಿರ್ಬಂಧಿಸಿ ಸರಳ ರೀತಿಯಲ್ಲಿ ಆಚರಿಸಲಾಯಿತು.
ಮಂಗಳವಾರ ರಾತ್ರಿ ಎಂಟು ಗಂಟೆಯೊಳಗೆ ಮಾರಿಪೂಜೆಯ ಎಲ್ಲಾ ವಿಧಿ ವಿಧಾನಗಳನ್ನು ಪೂರ್ಣಗೊಳಿಸಲಾಗಿದ್ದು ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿತ್ತು.
ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಕಳೆದ ಸುಗ್ಗಿ ಮಾರಿಪೂಜೆಯಲ್ಲೂ ಸಾರ್ವಜನಿಕರ ಭೇಟಿಗೆ ಅವಕಾಶ ನಿರಾಕರಿಸಿ ಸಂಪ್ರಧಾಯಕ್ಕಷ್ಟೇ ಸೀಮಿತಗೊಳಿಸಲಾಗಿದ್ದು, ಆಟಿ ಮಾರಿಪೂಜೆಯನ್ನೂ ಅದೇ ಮಾದರಿಯಲ್ಲಿ ಆಚರಿಸಲಾಯಿತು.
ಸುಗ್ಗಿ ಮತ್ತು ಆಟಿಯ ಕಾಲಾವಧಿ ಮಾರಿಪೂಜೆಯಲ್ಲಿ ಭಕ್ತಾಧಿಗಳು ಸಲ್ಲಿಸದೇ ಬಾಕಿಯುಳಿದಿರುವ ವಿವಿಧ ಹರಕೆಗಳನ್ನು ಮುಂದಿನ ಜಾರ್ದೆ ಮಾರಿಪೂಜೆಯಲ್ಲಿ ಸಮರ್ಪಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತಾಧಿಕಾರಿ ರವಿಕುಮಾರ್, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಹಳೆ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ, ಮೂರನೇ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ಬಂಗೇರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ