ತಾಯ್ನಾಡಿಗೆ ಬರಲು ಕಾಯುತ್ತಿರುವ ಕೊಲ್ಲಿಯ 5 ರಾಷ್ಟ್ರಗಳ ಕರಾವಳಿಗರು


Team Udayavani, May 13, 2020, 6:28 AM IST

ತಾಯ್ನಾಡಿಗೆ ಬರಲು ಕಾಯುತ್ತಿರುವ ಕೊಲ್ಲಿಯ 5 ರಾಷ್ಟ್ರಗಳ ಕರಾವಳಿಗರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಉಡುಪಿ: ಮಂಗಳವಾರ ರಾತ್ರಿ ದುಬಾೖಯಿಂದ ಕರಾವಳಿ ಕನ್ನಡಿಗರ ಮೊದಲ ತಂಡ ತಾಯ್ನಾಡಿಗೆ ಬಂದಿಳಿದಿದ್ದರೆ ಅಲ್ಲೇ ಅಕ್ಕಪಕ್ಕದಲ್ಲಿರುವ ಕತಾರ್‌, ಬಹ್ರೈನ್‌, ಸೌದಿ ಅರೇಬಿಯ, ಒಮಾನ್‌, ಕುವೈಟ್‌ಗಳಲ್ಲಿರುವ ಕರಾವಳಿ ಕನ್ನಡಿಗರೂ ಕಾತರದಿಂದ ಕಾಯುತ್ತಿದ್ದಾರೆ.

ಕತಾರ್‌ನಿಂದ ಸುಮಾರು 1,300 ಜನರು ಊರಿಗೆ ಬರಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಅವರಲ್ಲಿ ಕರ್ನಾಟಕ ಕರಾವಳಿಯವರೇ ಹೆಚ್ಚು. ಬೆಂಗಳೂರು, ಮೈಸೂರು, ಮಂಡ್ಯ ಮೊದಲಾದೆಡೆ ಹೋಗುವವರು ಬೆಂಗಳೂರಿನ ಮೂಲಕ ಹೋಗುವವರಾದರೆ, ಅತ್ತ ಕಾಸರಗೋಡು, ಇತ್ತ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಭಟ್ಕಳ, ಬೈಂದೂರಿನವರೆಗೆ ಹೋಗುವವರು ಮಂಗಳೂರನ್ನು ಆಶ್ರಯಿಸಬೇಕಾಗಿದೆ.

ಈಗ ಬೆಂಗಳೂರಿಗೆ ವಿಮಾನ ಯಾನಕ್ಕೆ ತಾತ್ವಿಕ ಸಮ್ಮತಿಯಾಗಿದ್ದರೂ ಮಂಗಳೂರಿಗೆ ಆಗಿಲ್ಲ ಎನ್ನುವ ಕೊರಗು ಕತಾರ್‌ನಲ್ಲಿರುವ ಕರಾವಳಿ ಭಾಗದವರಿಗೆ ಇದೆ ಎನ್ನುತ್ತಾರೆ ಕತಾರ್‌ನಲ್ಲಿರುವ ಭಾರತೀಯ ಸಮುದಾಯ ಹಿತೈಷಿ ಸಮಿತಿಯ ಮುಂದಾಳು ಸುಬ್ರಹ್ಮಣ್ಯ ಹೆಬ್ಟಾಗಿಲು.

ಅಮೆರಿಕ, ಇಂಗ್ಲೆಂಡ್‌, ಜರ್ಮನಿ ಇತ್ಯಾದಿ ರಾಷ್ಟ್ರಗಳಲ್ಲಿರುವ ಕನ್ನಡಿಗರಿಗೂ ಕೊಲ್ಲಿ ರಾಷ್ಟ್ರಗಳಲ್ಲಿರುವವರಿಗೂ ಅಜಗಜಾಂತರವಿದೆ. ಆ ದೇಶಗಳಲ್ಲಿರುವವರು ಐಟಿ, ಬಿಟಿ ವೈಟ್‌ಕಾಲರ್‌ ವ್ಯಕ್ತಿಗಳಾದರೆ, ಕೊಲ್ಲಿ ರಾಷ್ಟ್ರದಲ್ಲಿರುವ ಹೆಚ್ಚಿನವರು ಕಾರ್ಮಿಕ ವರ್ಗದವರು.

ಲಾಕ್‌ಡೌನ್‌ ಕಾರಣ ಶಾಪಿಂಗ್‌ ಮಾಲ್‌ಗ‌ಳು, ಸೆಲೂನ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು ಬಂದ್‌ ಆಗಿವೆ. ಅಂತಹ ಕಡೆಗಳಲ್ಲಿ ಉದ್ಯೋಗ ನಿರತ ಕರಾವಳಿಯ ಮಂದಿ ಅತಂತ್ರರಾಗಿದ್ದು, ಊರಿನತ್ತ ಮುಖಮಾಡುವುದು ಅನಿವಾರ್ಯವಾಗಿದೆ ಎನ್ನುತ್ತಾರೆ ಮಂಗಳೂರು ಕಾಪಿಕಾಡಿನ ಪ್ರದೀಪ್‌.

ಕರ್ನಾಟಕ ಕರಾವಳಿಯವರ ಆರ್ಥಿಕ ಚಟುವಟಿಕೆ ನಿಂತಿರುವುದೇ ಕೊಲ್ಲಿ ರಾಷ್ಟ್ರಗಳಲ್ಲಿ ದುಡಿಯುವವರ ಮೇಲೆ. ಒಂದು ವೇಳೆ ಇವರ ಆದಾಯದ ಮೇಲೆ ಏಟು ಬಿದ್ದರೆ ಕರಾವಳಿಯ ಆರ್ಥಿಕತೆ ಚಿತ್ರಣವೇ ಬದಲಾಗುವ ಅಪಾಯವಿದೆ.

ನಾವು ಶೇ. 100 ಜನರು ತಾಯ್ನಾಡಿಗೆ ಬರುವುದಿಲ್ಲ. ಆದ್ಯತೆ ಮೇಲೆ ಬರುತ್ತಿದ್ದೇವೆ ಎಂದು ಕೊಲ್ಲಿ ರಾಷ್ಟ್ರದ ಕರಾವಳಿ ಕನ್ನಡಿಗರು ಕೇಂದ್ರ ಸರಕಾರವನ್ನು ಕೋರಿಕೊಂಡಿದ್ದಾರೆ. ಐದೂ ದೇಶಗಳಿಂದ ಬರಲು ವಿಮಾನ ಯಾನ ಕಲ್ಪಿಸಿದರೆ ನಾಲ್ಕೈದು ಸಾವಿರ ಜನರು ಹುಟ್ಟೂರಿಗೆ ಬರುವ ಸಾಧ್ಯತೆ ಇದೆ. ದುಬಾೖಯಿಂದ ಬರುವವರಿಗೆ ಇನ್ನೂ ಹೆಚ್ಚುವರಿ ವಿಮಾನ ಯಾನದ ಅಗತ್ಯವಿದೆ.

ಮಂಗಳೂರಿಗೆ ಆಗಮಿಸಲು ನಿರ್ಧರಿಸಿದ್ದೆವು. ಆದರೆ ತುರ್ತು ಆವಶ್ಯಕತೆಯವರಿಗೆ ಆದ್ಯತೆ ಎಂದ ಕಾರಣ ನಮಗೆ ಅವಕಾಶ ಲಭಿಸಿಲ್ಲ.
– ಪ್ರದೀಪ್‌, ದುಬಾೖ ನಿವಾಸಿ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.