ಕಾರ್ಕಳ ಬಸ್ ‌ನಿಲ್ದಾಣ ಬಂಡಿ ಮಠಕ್ಕೆ: ಚರ್ಚೆ ಮುನ್ನೆಲೆಗೆ

ಸೂಕ್ತ ಮೂಲಸೌಕರ್ಯ ಒದಗಿಸಬೇಕಾದ್ದು ಅಗತ್ಯ

Team Udayavani, Oct 11, 2020, 4:33 AM IST

ಕಾರ್ಕಳ ಬಸ್‌ನಿಲ್ದಾಣ ಬಂಡಿಮಠಕ್ಕೆ: ಚರ್ಚೆ ಮುನ್ನೆಲೆಗೆ

ಬಂಡಿಮಠದಲ್ಲಿರುವ ಹೊಸ ಬಸ್‌ ನಿಲ್ದಾಣ

ಕಾರ್ಕಳ: ಬಂಡಿಮಠದಲ್ಲಿ ಬಹುಕೋಟಿ ರೂ. ವೆಚ್ಚದಲ್ಲಿ ಬಸ್‌ನಿಲ್ದಾಣ ನಿರ್ಮಿಸಿದ್ದರೂ, ಸಾರ್ವಜನಿಕರಿಗೆ ಪೂರ್ಣ ಪ್ರಮಾಣ ದಲ್ಲಿ ಬಳಕೆಗೆ ಸಿಕ್ಕಿಲ್ಲ. ಹಳೆ ಬಸ್‌ ನಿಲ್ದಾಣವನ್ನು ಬಂಡಿಮಠಕ್ಕೆ ಸ್ಥಳಾಂತರಿಸುವ ಚರ್ಚೆ ಕೆಲವೊಮ್ಮೆ ಮುನ್ನೆಲೆಗೆ ಬಂದು ಸರಿಯುತ್ತದೆ. ಪುರಸಭೆಗೆ ನೂತನ ಸಾರಥಿಗಳ ನೇಮಕಕ್ಕೆ ಕ್ಷಣಗಣನೆ ಆಗುತ್ತಿರುವಾಗಲೇ ಸ್ಥಳಾಂತರ ವಿಚಾರ ಗರಿಗೆದರಿವೆ.

ಸ್ಥಳಾವಕಾಶದ ಕೊರತೆ
ಪುರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ಇಕ್ಕಟ್ಟಾಗಿವೆ. ವಿಸ್ತರಣೆಗೆ ತಾಂತ್ರಿಕ ಸಮಸ್ಯೆಗಳಿವೆ. ಮುಖ್ಯ ಪೇಟೆ ಯಲ್ಲಿ ಓಡಾಟಕ್ಕೆ ಸ್ಥಳಾವಕಾಶದ ಕೊರತೆಯಿದೆ. ಒಳಚರಂಡಿ ಹಾಗೂ ರಸ್ತೆ ದುರಸ್ತಿ ಕಾಮಗಾರಿಗಳು ಕೂಡ ಆರಂಭವಾಗುವ ನಿರೀಕ್ಷೆಯಿದ್ದು, ಹಳೆ ಬಸ್‌ ನಿಲ್ದಾಣವನ್ನು ಬಂಡಿಮಠಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಪೂರಕ ವಾಗಿ ಬಂಡಿಮಠ ಶೌಚಾಲಯ ದುರಸ್ತಿ, ಬಣ್ಣ ಬಳಿಯುವ ಕಾಮಗಾರಿ ಸಹಿತ ಕೆಲ ಕಾಮಗಾರಿಗಳು ಆರಂಭಗೊಂಡಿವೆ.

2.ಕೋ ರೂ. ವೆಚ್ಚದ ನಿಲ್ದಾಣ
ಪುರಸಭೆಯ 5ನೇ ವಾರ್ಡ್‌ನ ಬಂಡಿಮಠದಲ್ಲಿ 2011-12ರಲ್ಲಿ 2.18 ಎಕರೆ ಜಾಗವನ್ನು ಬಸ್‌ ನಿಲ್ದಾಣಕ್ಕಾಗಿ ಕಾದಿರಿಸಿ, 1.78 ಎಕರೆ ವಿಸ್ತೀರ್ಣದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ಕಾಮಗಾರಿ ನಡೆಸಿ, ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗಿತ್ತು.

ಸಾರ್ವಜನಿಕರ, ವರ್ತಕರ ಸಹಕಾರ ಅಗತ್ಯ
ಸ್ಥಳಾಂತರದ ಚರ್ಚೆ ಕೆಲವು ವರ್ಷಗಳಿಂದ ಚಾಲ್ತಿಯಲ್ಲಿದೆ. ಪುರಸಭೆಯಲ್ಲೂ ಹಲವು ಬಾರಿ ಉಲ್ಲೇಖವಾಗಿತ್ತು. ಇದು ನ್ಯಾಯಾಲಯದ ಮೆಟ್ಟಿಲೂ ಏರಿತ್ತು. ಜನ ಸಂಚಾರ, ಕಚೇರಿಗಳು ಇರುವಲ್ಲಿಂದ ಸ್ಥಳಾಂತರಿಸದಂತೆ, ಪರ- ವಿರೋಧ ಗಳಿದ್ದವು. ಲಾಬಿಗಳೂ ಇದ್ದವು. ಇದರಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಒತ್ತಡಕ್ಕೆ ಸಿಲುಕಿದ್ದಾರೆ. ಸದ್ಯ ಸಾರ್ವಜನಿಕರು, ವರ್ತಕರು ಸಹಕರಿಸಿದರೆ, ಬಸ್‌ ನಿಲ್ದಾಣ ಶಾಶ್ವತವಾಗಿ ಸ್ಥಳಾಂತರಗೊಳ್ಳಲಿದೆ ಎಂದು ಹೇಳಲಾಗಿದೆ.

ಸಮಾನ ಬಳಕೆಗೆ ಹೈಕೋರ್ಟ್‌ ಆದೇಶ
ಕಾರ್ಕಳದಲ್ಲಿ ಎರಡೂ ಬಸ್‌ ನಿಲ್ದಾಣಗಳನ್ನು ಸಮಾನವಾಗಿ ಬಳಕೆ ಮಾಡಬೇಕೆಂದು ಹೈಕೋರ್ಟ್‌ ಹಿಂದಿನ ತೀರ್ಪಿನಲ್ಲಿ ಸ್ಪಷ್ಟ ಪಡಿಸಿತ್ತು. ಈ ಆದೇಶ ಕೂಡ ಪಾಲಿಸಲಾಗುತಿಲ್ಲ. ಈ ಹಿಂದೆ 2 ಬಾರಿ ಬಂಡಿಮಠ ಬಸ್‌ ನಿಲ್ದಾಣದ ಪರವಾಗಿ ಹಿಂದಿನ ಜಿಲ್ಲಾಧಿಕಾರಿ ಗಳ ಅವಧಿಯಲ್ಲಿ ಆದೇಶವಾಗಿತ್ತು.

ಮೂಲಸೌಕರ್ಯ ಅಗತ್ಯ
ಬಂಡಿಮಠ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ, ಬಸ್‌ ಕುರಿತು ಮಾಹಿತಿ ಪಡೆಯಲು, ದೂರದೂರಿಗೆ ಪ್ರಯಾಣ ಬೆಳೆಸುವ ನಿಟ್ಟಿನಲ್ಲಿ ಮುಂಗಡವಾಗಿ ಟಿಕೆಟ್‌ ಪಡೆಯಲು ಕೌಂಟರ್‌ಗಳು, ಸ್ಥಿರ ದೂರವಾಣಿ, ಕಂಪ್ಯೂಟರ್‌, ಇಂಟರ್ನೆಟ್‌ ವ್ಯವಸ್ಥೆ ಕಲ್ಪಿಸುವುದು, ಬಸ್‌ ವೇಳಾಪಟ್ಟಿ, ಸಾರ್ವಜನಿಕ ಮಾಹಿತಿ ವ್ಯವಸ್ಥೆಗಳು ಆಗಬೇಕಿವೆ. ಬೆಳಕಿನ ವ್ಯವಸ್ಥೆಯೂ ಬೇಕಿದೆ. ಇಲ್ಲಿ ಕೆಎಸ್‌ಆರ್‌ಟಿಸಿ ಕಚೇರಿ ಇಲ್ಲದ್ದರಿಂದ ಹಿರಿಯರು, ವಿದ್ಯಾರ್ಥಿಗಳ ಪಾಸ್‌ಗೆ ದೂರದ ಉಡುಪಿಯನ್ನೇ ಅವಲಂಬಿಸಬೇಕಿದೆ.

2.18 ಎಕರೆ ಬಸ್‌ ನಿಲ್ದಾಣಕ್ಕೆ ಕಾದಿರಿಸಿದ ಜಾಗ
1.78 ಎಕರೆ ಅಭಿವೃದ್ಧಿ ಪಡಿಸಿದ ಜಾಗ
2011-12ರಲ್ಲಿ ನೂತನ ಬಸ್‌ ನಿಲ್ದಾಣ ನಿರ್ಮಾಣ 2 ಕೋಟಿ ರೂ. ವೆಚ್ಚ

ಬೇಡಿಕೆಯಿದೆ
ಬಸ್‌ನಿಲ್ದಾಣ ಸ್ಥಳಾಂತರ ಬೇಡಿಕೆ ಹಿಂದಿನಿಂದಲೂ ಇದೆ. ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ.
-ರೇಖಾ ಜೆ. ಶೆಟ್ಟಿ, ಮುಖ್ಯಾಧಿಕಾರಿ ಪುರಸಭೆ ಕಾರ್ಕಳ

ಇಲಾಖೆಗೆ ಪ್ರಸ್ತಾವ ಬಂದಿಲ್ಲ
ಸ್ಥಳಾಂತರಕ್ಕೆ ಸಂಬಂಧಿಸಿ ಇದುವರೆಗೆ ಯಾವುದೇ ಪ್ರಸ್ತಾವ ಇಲಾಖೆಗೆ ಬಂದಿಲ್ಲ. ಪುರಸಭೆ, ಜಿಲ್ಲಾಡಳಿತ ಈ ಬಗ್ಗೆ ನಿರ್ಧರಿಸಲಿದೆ.
-ಉದಯಕುಮಾರ್‌ ಶೆಟ್ಟಿ, ಡಿಪೋ ಮ್ಯಾನೇಜರ್‌ ಉಡುಪಿ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.