ಬೆಳ್ಮಣ್: ತಮ್ಮನ ಮನೆಗೆ ಬೆಂಕಿ ಇಟ್ಟು ಕಾರಿನೊಳಗೆ ಸಜೀವ ದಹನನಾದ ಅಣ್ಣ
Team Udayavani, Jan 26, 2023, 8:08 AM IST
ಬೆಳ್ಮಣ್ : ತಮ್ಮನ ಮನೆಗೆ ಕೊಳ್ಳಿಯಿಟ್ಟು ತಾನೂ ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಜ. 25 ರ ಬುಧವಾರ ತಡರಾತ್ರಿ ನಡೆದಿದೆ.
ಸಚ್ಚೇರಿಪೇಟೆಯ ಕೃಷ್ಣ ಕುಲಾಲ್ ಬರ್ಬರ ಕೃತ್ಯ ಎಸಗಿದ ವ್ಯಕ್ತಿ.
ಕೃಷ್ಣ ಕುಲಾಲ್ ಎಂಬಾತ ತನ್ನ ತಮ್ಮ ಶೇಖರ ಕುಲಾಲ್ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾಗಿದ್ದಾನೆ.
ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದು, ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದ್ದು, ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಅಗ್ನಿಶಾಮಕ ದಳದವರ ಸಹಿತ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ.