ಕಾರ್ಕಳ: ಎಂ. ಆರ್ ಎಂದೇ ಚಿರಪರಿಚಿತರಾಗಿದ್ದ ಸಾಹಿತಿ, ಪ್ರೊ. ಎಂ ರಾಮಚಂದ್ರ ವಿಧಿವಶ
Team Udayavani, Dec 20, 2019, 7:48 AM IST
ಕಾರ್ಕಳ : ಕಾರ್ಕಳ ಸಾಹಿತ್ಯ ಸಂಘದ ಸಂಸ್ಥಾಪಕ, ಕಲೆ, ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿರುವ ಪ್ರೊ. ಎಂ. ರಾಮಚಂದ್ರರವರು ವಿಧಿವಶರಾಗಿದ್ದಾರೆ.
ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರದ ಅಗ್ರಗಣ್ಯರನ್ನ, ತಜ್ಞರನ್ನು ಕಾರ್ಕಳಕ್ಕೆ ಕರೆಸಿ ವಿಚಾರಗೋಷ್ಠಿ ನಡೆಸಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕಾರ್ಕಳ ಸಾಹಿತ್ಯ ಸಂಘದ ಮೂಲಕ ಕಲೆ,ಸಾಹಿತ್ಯ, ಸಂಸ್ಕೃತಿ , ಧರ್ಮದ ವಿಚಾರಕ್ಕೆ ಸಂಬಂಧಿಸಿದ ಐನೂರಕ್ಕಿಂತಲೂ ಹೆಚ್ವು ಕಾರ್ಯಕ್ರಮ ಆಯೋಜಿಸಿದ ಹಿರಿಮೆಗೆ ಪಾತ್ರರಾಗಿರುವ ಇವರು ಎಂ.ಆರ್. ಎಂದೇ ಖ್ಯಾತರಾಗಿದ್ದಾರೆ.
ಪ್ರೊ. ಎಂ. ರಾಮಚಂದ್ರರವರು ಕನ್ನಡ ಪುಸ್ತಕ ಪ್ರಾಧಿಕಾರ ಕೊಡಮಾಡುವ ಜೆ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಭಾಜನರಾಗಿದ್ದರು.
ಪ್ರೊ. ರಾಮಚಂದ್ರರವರು ಮೂಲತಃ ಸುಳ್ಯ ತಾಲೂಕಿನವರು. 1962ರಲ್ಲಿ ಧಾರವಾಡದ ಕರ್ನಾಟಕ ವಿವಿಯಲ್ಲಿ ಕನ್ನಡ ಎಂ.ಎ ಪದವಿ ಪಡೆದರು. ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ 35 ವರ್ಷಗಳ ಕಾಲ ಕನ್ನಡ ಉಪನ್ಯಾಸಕರಾಗಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತರಾಗಿದ್ದಾರೆ. ಇವರ ಅನೇಕ ಲೇಖನಗಳು ಉದಯವಾಣಿ ದಿನಪತ್ರಿಕೆ, ತರಂಗ, ತುಷಾರದಲ್ಲಿ ಪ್ರಕಟಗೊಂಡಿದೆ. 20 ರಷ್ಟೂ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !