ಕಾರ್ಕಳ: ಗಂಟಲ ದ್ರವ ಸಂಗ್ರಹ
Team Udayavani, May 23, 2020, 10:48 AM IST
ಸಾಂದರ್ಭಿಕ ಚಿತ್ರ
ಕಾರ್ಕಳ: ಹೊರ ರಾಜ್ಯದಿಂದ ಕಾರ್ಕಳಕ್ಕೆ ಸುಮಾರು 2,500 ಮಂದಿ ಆಗಮಿಸಿದ್ದು, ಅವರೆಲ್ಲರೂ ಕಾರ್ಕಳ ಮತ್ತು ಹೆಬ್ರಿಯ 32 ಕ್ವಾರಂಟೈನ್ ಕೇಂದ್ರಗಳಲ್ಲಿದ್ದಾರೆ. ಶುಕ್ರವಾರ ಕಾರ್ಕಳದ ಕ್ವಾರಂಟೈನ್ನಲ್ಲಿ ಇರುವವರ ಗಂಟಲು ದ್ರವ ಸಂಗ್ರಹಿಸಲಾಗಿದೆ.
ದಾನಶಾಲೆ ಪ್ರವಚನ ಮಂದಿರದಲ್ಲಿ ಇರುವ 35 ಮಂದಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ. ಪೊಲೀಸರ ನಿಯೋಜನೆಯಿಲ್ಲದೆ ಶಿಕ್ಷಕರು ಮತ್ತು ವಿವಿಧ ಇಲಾಖಾ ಸಿಬಂದಿ ಕ್ವಾರಂಟೈನ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಹೀಗಾಗಿ ಕ್ವಾರಂಟೈನ್ನಲ್ಲಿರುವವರು ಯಾರ ಭಯವೂ ಇಲ್ಲದೆ ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಕೆಲವು ಕ್ವಾರಂಟೈನ್ ಕೇಂದ್ರಗಳಿಗೆ ಮನೆಯಿಂದ ಊಟ ತರಲಾಗುತ್ತಿದೆ. ಹೊಟೇಲ್ನಲ್ಲಿ ಕ್ವಾರಂಟೈನ್ನಲ್ಲಿರುವವರನ್ನು ಮನೆಮಂದಿ ಬಂದು ಮಾತನಾಡಿಸಿ ಹೋಗುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ಕ್ವಾರಂಟೈನ್ನಲ್ಲಿ ಪೊಲೀಸರು
ಮುಂಬಯಿಯಿಂದ ಉಡುಪಿಗೆ ಆಗಮಿಸುವವರ ದಾಖಲೆ ಪರಿಶೀಲನೆ ಹಿನ್ನೆಲೆಯಲ್ಲಿ ನಿಪ್ಪಾಣಿಗೆ ತೆರಳಿ ಕಾರ್ಯನಿರ್ವಹಿಸಿರುವ ಕಾರ್ಕಳ ನಗರ ಠಾಣಾ ಎಸ್ಐ ಮಧು ಬಿ.ಇ. ಸೇರಿದಂತೆ 13 ಮಂದಿ ಸಿಬಂದಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ