ಕರ್ನಾಟಕ ಬಂದ್: ಉಡುಪಿಯಲ್ಲಿ ಬಸ್ ಸಂಚಾರ ವಿರಳ, ಬಸ್ ಬಂದ್ ಮಾಡಲು ಸಂಘಟನೆಗಳ ಮನವಿ
Team Udayavani, Sep 28, 2020, 7:51 AM IST
ಸೋಮವಾರ ಬೆಳಿಗ್ಗೆ ಬ್ರಹ್ಮಾವರದಲ್ಲಿ ಕಂಡುಬಂದ ದೃಶ್ಯ
ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಕರಾವಳಿ ಜಿಲ್ಲೆ ಉಡುಪಿಯಲ್ಲಿ ಅಲ್ಪ ಪ್ರಮಾಣದ ಬೆಂಬಲ ವ್ಯಕ್ತವಾಗಿದೆ.
ಉಡುಪಿಯಲ್ಲಿ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಗಳ ಓಡಾಟ ಎಂದಿನಂತೆ ಮುಂದುವರಿಸಲು ನಿರ್ಧರಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ಸಂಚರಿಸುವ ಸರ್ವಿಸ್ ಬಸ್ ಗಳ ಓಡಾಟ ಎಂದಿನಂತೆ ಇದೆ. ಉಡುಪಿ ಸಿಟಿ ಬಸ್ ಗಳು ಕೂಡಾ ಸಂಚಾರ ಸ್ಥಿಗಿತಗೊಳಿಸದಿರಲು ನಿರ್ಧರಿಸಿವೆಯಾದರೂ, ಬಸ್ ಗಳು ವಿರಳವಾಗಿದೆ.
ಇದನ್ನೂ ಓದಿ:ಕರ್ನಾಟಕ ಬಂದ್: ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ
ಕೆಎಸ್ ಆರ್ ಟಿಸಿ, ನರ್ಮ್ ಬಸ್ ಗಳು ಎಂದಿನಂತೆ ರಸ್ತೆಗಿಳಿದಿದೆ. ಆಟೋ ಸಂಚಾರ ಕೂಡಾ ಸಹಜವಾಗಿದೆ. ಸರಿಯಾದ ಮಾಹಿತಿ ಕೊರತೆಯಿಂದ ಜನರ ಓಡಾಟ ವಿರಳವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ
ಸಂಘಟನೆಗಳ ಮನವಿ: ಬಂದ್ ಕರೆಕೊಟ್ಟಿದ್ದರೂ ಕೂಡಾ ಬಸ್ ಸಂಚಾರ ಎಂದಿನಂತಿರುವ ಕಾರಣ ಬಸ್ ಬಂದ್ ಮಾಡಬೇಕು, ಬಂದ್ ಗೆ ಬೆಂಬಲ ನೀಡಬೇಕು ಎಂದು ಸಂಘಟನೆಗಳು ಮನವಿ ಮಾಡುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ