Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್
Team Udayavani, May 7, 2024, 6:11 PM IST
ಕಾಪು: ತೀವ್ರ ಬಿಸಿಲಿನ ಝಳದಿಂದಾಗಿ ಮೇ.7ರ ಮಂಗಳವಾರ ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಾಪು ತಹಶೀಲ್ದಾರ್ ಸ್ವತಃ ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪಾಂಗಾಳ ವಿನೋದ ಶೆಟ್ಟಿ ಎಂಬವರಿಗೆ ಸೇರಿದ ಜಮೀನು ಮತ್ತು ಅದರ ಸುತ್ತಮುತ್ತಲಿನ ಸುಮಾರು ಹದಿನೈದು ಎಕರೆ ಗದ್ದೆ ಮತ್ತು ತೋಟದಲ್ಲಿ ಮಂಗಳವಾರ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು.
ಈ ಬಗ್ಗೆ ಮಾಹಿತಿ ಪಡೆದ ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಗ್ರಾಮ ಆಡಳಿತಾಧಿಕಾರಿ ಅವಿನಾಶ್ ಜತೆಗೂಡಿ ಘಟನಾ ಸ್ಥಳಕ್ಕೆ ನೀಡಿ ಪರಿಶೀಲನೆ ನಡೆಸಿದ್ದು ತತ್ಕ್ಷಣವೇ ಸ್ಥಳೀಯರ ಜತೆಗೂಡಿ ಬೆಂಕಿ ನಂದಿಸಲು ಕ್ರಮ ಕೈಗೊಂಡು ಜಮೀನನ್ನು ರಕ್ಷಿಸಿದ್ದಾರೆ.
ಈ ಜಮೀನಿನ ಪಕ್ಕದಲ್ಲಿ ಐದು ಮನೆಗಳಿದ್ದು ತುರ್ತಾಗಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಹಾನಿಯಾಗದಂತೆ ನೋಡಿಕೊಂಡರು. ಬಳಿಕ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳನ್ನು ತಕ್ಷಣ ಸ್ಥಳಕ್ಕೆ ಕರೆಸಿಕೊಂಡು ಮೆಸ್ಕಾಂ ಲೈನ್ಗಳನ್ನು ಆಫ್ ಮಾಡಿಸಿ ಹೆಚ್ಚಿನ ಹಾನಿಗಳಾಗದಂತೆ ನೋಡಿಕೊಂಡಿದ್ದಾರೆ. ಸ್ಥಳೀಯರು ಪಂಪ್ ಮೂಲಕ ನೀರು ಹಾಕಿ ಬೆಂಕಿಯನ್ನು ಸಂಪೂರ್ಣ ಹತೋಟಿಗೆ ತಂದಿದ್ದಾರೆ.
ಈ ಬೇಸಿಗೆಯಲ್ಲಿ ಬಿಸಿಲ ಝಳದಿಂದಾಗಿ ಹೆಚ್ಚಿನ ಅವಘಡಗಳು ಸಂಭವಿಸುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.
ಈ ರೀತಿಯ ಪ್ರಕರಣಗಳು ಕಂಡು ಬಂದರೆ ತತ್ಕ್ಷಣ ತಾಲೂಕು ಆಡಳಿತಕ್ಕೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಅಗ್ನಿಶಾಮಕ ಇಲಾಖೆಯವರು ಕೂಡಾ ಸದಾ ಸದಾ ಸನ್ನದ್ದರಾಗಿರುವಂತೆ ಸೂಚನೆ ನೀಡಲಾಗಿದೆ ಎಂದು ಕಾಪು ತಹಶೀಲ್ದಾರ್ ಪ್ರತಿಭಾ ಆರ್. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!
Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ