ಮೂಳೂರು: ಕಾರು ಢಿಕ್ಕಿ; ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ ಸಾವು
Team Udayavani, Jan 16, 2023, 11:27 AM IST
ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬಿಲ್ಲವರ ಸಂಘದ ಮುಂಭಾಗದಲ್ಲಿ ರವಿವಾರ (ಜ.15) ಸಂಜೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ (ಜ.16) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಪಘಾತದ ಗಾಯಾಳು ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷ, ಮುಂಬಯಿಯ ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ (60) ಮೃತ ವ್ಯಕ್ತಿ.
ಮುಂಬಯಿಯ ಹಿರಿಯ ಉದ್ಯಮಿ ಮತ್ತು ಧಾರ್ಮಿಕ / ಸಾಮಾಜಿಕ ಮುಖಂಡರಾಗಿದ್ದ ದಿ. ಗಿರಿಯ ಪೂಜಾರಿ ಅವರ ಪುತ್ರರಾಗಿದ್ದ ಅವರು ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದು, ಸ್ವಗೃಹ ಮೂಳೂರು ಶಶಿಭವನದಲ್ಲಿ ವಾಸವಿದ್ದರು.
ರವಿವಾರ ಸಂಜೆ ಅಂಗಡಿಗೆ ತೆರಳಿ, ಅಲ್ಲಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಮನೆ ಸಮೀಪದಲ್ಲೇ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತರು ಪತ್ನಿ, ಪುತ್ರಿ ಮತ್ತು ಸಹೋದರ – ಸಹೋದರಿಯರನ್ನು ಅಗಲಿದ್ದಾರೆ.
ಸಂತಾಪ: ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಜಿ. ಪೂಜಾರಿ ಅವರ ನಿಧನಕ್ಕೆ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ