ಪಣಿಯೂರು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Jan 23, 2023, 2:50 PM IST
ಕಾಪು: ಮನೆಯ ಹಿಂಬಾಗಿಲಿನ ಬಾಗಿಲು ಮುರಿದು ಒಳ ಪ್ರವೇಶಿಸಿ ಕಳ್ಳರು ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳನ್ನು ಕದ್ದೊಯ್ದ ಘಟನೆ ಪಣಿಯೂರಿನಲ್ಲಿ ವರದಿಯಾಗಿದೆ.
ರವಿವಾರ ಜ.22 ರಂದು ಮಧ್ಯರಾತ್ರಿಯ ಬಳಿಕ ಈ ಕಳ್ಳತನ ನಡೆದಿದ್ದು, ಸೋಮವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.
ಮೂಲ್ಕಿ ವಿಜಯಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ರಘುರಾಮ್ ರಾವ್ ಅವರ ಪಣಿಯೂರಿನ ಸ್ವಗೃಹ ಯಶ್ ಕಿರಣ್ ಇಲ್ಲಿ ಘಟನೆ ನಡೆದಿದೆ.
ಶುಭ ಕಾರ್ಯ ಮತ್ತು ಧಾರ್ಮಿಕ ಕಾರ್ಯ ಕ್ರಮಗಳ ನಿಮಿತ್ತ ಅಮೇರಿಕಾ ಬೆಂಗಳೂರು ಮತ್ತಿತರ ಕಡೆಗಳಿಂದ ಸಂಬಂಧಿಕರು ಆಗಮಿಸಿದ್ದ ಸಂದರ್ಭದಲ್ಲೇ ಈ ಕಳ್ಳತನ ಪ್ರಕರಣ ನಡೆದಿರುವುದು ಮನೆಯವರನ್ನು ಆತಂಕಗೊಳಗಾಗಿಸಿದೆ.
ಕಾಪು ಪೋಲಿಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ಹಾಗೂ ಶಿರ್ವ ಪೋಲಿಸ್ ಠಾಣೆಯ ಎಸೈ ಮತ್ತು ಕ್ರೈಂ ಎಸೈ ಹಾಗೂ ಬೆರಳಚ್ಚು ತಜ್ಞರು, ಶ್ವಾನದಳ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ