ಕೊಡಂಕೂರು, ನಿಟ್ಟೂರು ಬಸ್‌ನಿಲ್ದಾಣದ ದುಃಸ್ಥಿತಿ

ಮಳೆ, ಬಿಸಿಲಲ್ಲಿ ರಸ್ತೆ ಬದಿ ನಿಲ್ಲುವ ಪ್ರಯಾಣಿಕರು

Team Udayavani, Sep 13, 2022, 3:30 PM IST

13

ಉಡುಪಿ: ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರ ಬದಿ ಇರುವ ಕೊಡಂಕೂರು, ನಿಟ್ಟೂರಿನ ಎರಡು ಬಸ್‌ ನಿಲ್ದಾಣಗಳು ಪಾಳು ಬಿದ್ದಿದ್ದು, ಸಾರ್ವಜನಿಕ ಬಳಕೆಗೆ ನಿರುಪಯುಕ್ತವಾಗಿದೆ. ರಾ.ಹೆ. ಎರಡೂ ಬದಿಯ ಬಸ್‌ ನಿಲ್ದಾಣ ಕೆಲಸಕ್ಕೆ ಬಾರದ್ದಾಗಿದೆ. ಹೆದ್ದಾರಿ ಇಲಾಖೆ ನಿರ್ಲಕ್ಷ್ಯದಿಂದಾಗಿ ಬಸ್‌ ಪ್ರಯಾಣಿಕರಿಗೆ ವ್ಯವಸ್ಥಿತ ತಂಗುದಾಣ ಇಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಜಿಲ್ಲಾಡಳಿತ, ನಗರಸಭೆಯೂ ಈ ಬಗ್ಗೆ ಗಂಭೀರವಾಗಿ ಪರಿಗಣಿಸದ ಕಾರಣ ಪ್ರಯಾಣಿಕರಿಗೆ ಆಶ್ರಯ ನೀಡಬೇಕಿದ್ದ ಬಸ್‌ ನಿಲ್ದಾಣ ಅಸ್ತಿತ್ವವೇ ಕಳೆದುಕೊಂಡಿದೆ. ಪ್ರಸ್ತುತ ಬಸ್‌ ನಿಲ್ದಾಣದಿಂದ ಜನರು ದೂರವಾಗಿದ್ದಾರೆ.

ಕೊಡಂಕೂರು, ನಿಟ್ಟೂರು, ಕೊಡವೂರು, ಮಧ್ವನಗರ ಮೊದಲಾದ ಭಾಗಗಳಿಂದ ಸಾವಿರಾರು ಜನರು ಎರಡು ಬದಿಯಲ್ಲಿ ನಿಂತು ಬಸ್‌ನಲ್ಲಿ ಕಾಯುತ್ತಾರೆ. ಮುಖ್ಯವಾಗಿ ಉದ್ಯೋಗಕ್ಕೆ ತೆರಳುವ ಮಹಿಳೆಯರು, ಯುವತಿಯರು, ಕಾಲೇಜು ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚು. ಪ್ರತಿನಿತ್ಯ ಸಂಜೆ, ಬೆಳಗ್ಗೆ ಮಧ್ಯಾಹ್ನ ಅವಧಿಯಲ್ಲಿ ಆಗಮಿಸಿ ಸ್ಥಳೀಯ ಬಸ್‌ಗಳಿಗೆ ಕಾದು ಪ್ರಯಾಣಿಸುತ್ತಾರೆ. ಮಳೆಗಾಲದಲ್ಲಿ ಮಳೆಯಲ್ಲಿ ಜೋರು ಮಳೆ ಬರುವಾಗಲೂ ಸೂರಿಲ್ಲದೆ ಛತ್ರಿ ಹಿಡಿದುಕೊಂಡೆ ಎಲ್ಲರೂ ಬಸ್‌ಗಳಿಗೆ ಕಾಯಬೇಕು. ಬೇಸಗೆಯಲ್ಲಿ ಸುಡು ಬಿಸಿಲಿನಲ್ಲಿ ರಸ್ತೆಯ ಅಂಚಿನಲ್ಲಿ ಬಸ್‌ ಗೆ ಕಾಯುವುದು ಸ್ಥಳೀಯರಿಗೆ ಸಮಸ್ಯೆಯಾಗಿದೆ.

ಗಿಡಮರಗಳಿಂದ ಆವೃತವಾದ ಬಸ್‌ ನಿಲ್ದಾಣ

ಕೊಡಂಕೂರು ಬಸ್‌ ನಿಲ್ದಾಣ ಸುತ್ತಮುತ್ತ ಗಿಡಗಂಟಿಗಳಿಂದ ಆವೃತವಾಗಿದ್ದು, ಪ್ರಯಾಣಿಕರು ಅಲ್ಲಿಗೆ ತೆರಳಲಾರದಷ್ಟು ಹದಗೆಟ್ಟಿದೆ. ಇದರ ಎದುರಿಗೆ ರಿಕ್ಷಾ ನಿಲ್ದಾಣ ಸಮೀಪವೆ ಇರುವ ನಿಟ್ಟೂರು ಬಸ್‌ನಿಲ್ದಾಣವು ಗಿಡಮರಗಳ ನಡುವೆ ದುಃಸ್ಥಿತಿಯಲ್ಲಿದೆ. ಇವೆರಡೂ ಬಸ್‌ ನಿಲ್ದಾಣ ಅಪರಿಚಿತರ ಅಡ್ಡೆಯಾಗಿದ್ದು, ಹೆಂಚಿನ ಮಾಡಿನಿಂದ ನಿರ್ಮಿಸಿದ ಅತ್ಯಂತ ಹಳೆ ಕಾಲದ ಬಸ್‌ ನಿಲ್ದಾಣವಾಗಿದೆ. ಹೆಂಚುಗಳೆಲ್ಲ ಉದುರಿ ಕೆಳಗೆ ಬೀಳುತ್ತಿವೆ. ಮಳೆಗಾಲದಲ್ಲಿ ನಿರಂತರ ಸೋರುತ್ತದೆ. ಪ್ರಸ್ತುತ ಬಸ್‌ ನಿಲ್ದಾಣ ಅಪರಿಚಿತರ ಅಡ್ಡೆಯಾಗಿ ಪರಿವರ್ತನೆಗೊಂಡಿದೆ. ರಾತ್ರಿವೇಳೆ ಕೆಲವರು ಮದ್ಯಪಾನವನ್ನು ಸೇವಿಸುವುದು ನಡೆಯುತ್ತದೆ. ಸುತ್ತಮುತ್ತ ಮದ್ಯದ ಟೆಟ್ರಾಪ್ಯಾಕ್‌ಗಳು ಬಿದ್ದಿವೆ.

ಮಹಿಳಾ, ಮಕ್ಕಳ ನಿಲಯಗಳಿಗೆ ಸಮಸ್ಯೆ

ಸಂಜೆ ಬಳಿಕ ಮಹಿಳೆಯರು, ಹೆಣ್ಣು ಮಕ್ಕಳು ಈ ಪರಿಸರದಲ್ಲಿ ಓಡಾಡಲು ಆತಂಕ ಪಡುವ ಪರಿಸ್ಥಿತಿ ಇದೆ. ಇಲ್ಲಿನ ಸಮೀಪವೇ ಸಖೀ ಒನ್‌ ಸ್ಟಾಪ್‌ ಸೆಂಟರ್‌, ಸ್ಟೇಟ್‌ ಹೋಂ-ಮಹಿಳಾ ನಿಲಯ, ವಿಚಕ್ಷಣಾಲಯ ಕೇಂದ್ರಗಳಿವೆ. ಈ ಕೇಂದ್ರದಲ್ಲಿ ಮಕ್ಕಳು, ಮಹಿಳೆಯರು ನೆಲೆಸಿದ್ದಾರೆ. ಅಪರಿಚಿತರಿಂದ ಈ ಕೇಂದ್ರಗಳ ಪರಿಸರಕ್ಕೆ ತೊಂದರೆ ಯಾಗುವ ಸಾಧ್ಯತೆ ಇದೆ. ಪಾಳು ಬಿದ್ದ ಬಸ್‌ ನಿಲ್ದಾಣವನ್ನು ವ್ಯವಸ್ಥಿತಗೊಳಿಸಿ ಅಭಿವೃದ್ಧಿಪಡಿಸಬೇಕು. ಅಪರಿಚಿತರ ತಾಣವಾಗುವುದನ್ನು ತಪ್ಪಿಸಲು ಕ್ರಮಕೈಗೊಳ್ಳುವಂತೆ ನಗರಸಭೆ ಆಡಳಿತ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇಲಾಖೆಯೊಂದಿಗೆ ಚರ್ಚೆ: ಕೊಡಂಕೂರು, ನಿಟ್ಟೂರು ಎರಡು ಬಸ್‌ನಿಲ್ದಾಣಗಳ ದುಃಸ್ಥಿತಿ ಬಗ್ಗೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣದ ಅಭಿವೃದ್ಧಿಗೆ ಈಗಾಗಲೇ ಹೆದ್ದಾರಿ ಇಲಾಖೆ ಅವರೊಂದಿಗೆ ಚರ್ಚಿಸಲಾಗಿದೆ. ಅಲ್ಲದೆ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಯಾರಾದರೂ ಜಾಹೀರಾತು ಸಂಸ್ಥೆಯವರು ಮುಂದೆ ಬಂದಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು. – ಸುಮಿತ್ರಾ ಎಸ್‌. ನಾಯಕ್‌, ಅಧ್ಯಕ್ಷರು, ಉಡುಪಿ ನಗರಸಭೆ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.