ಕೋಡಿಬೆಂಗ್ರೆ-ಹಂಗಾರಕಟ್ಟೆ ಬಾರ್ಜ್‌ ಚಾಲಕರಿಗೆ ಒಂದು ವರ್ಷದಿಂದ ವೇತನ ಇಲ್ಲ

ಕೆಲಸ ಬಿಟ್ಟರೆ ಎರಡೂ ಪ್ರದೇಶದ ಜನರಿಗೆ ಬಾರ್ಜ್‌ ಸೇವೆ ಇಲ್ಲ

Team Udayavani, Sep 20, 2022, 1:35 PM IST

10

ಮಲ್ಪೆ: ಕೋಡಿಬೆಂಗ್ರೆ ಹಂಗಾರಕಟ್ಟೆ ಸಂಪರ್ಕ ಕಲ್ಪಿಸುವ ಮಿನಿ ಬಾರ್ಜ್‌ನಲ್ಲಿ ಸೇವೆಯನ್ನು ನೀಡುತ್ತಿರುವ ಇಬ್ಬರು ದಿನಗೂಲಿ ನೌಕರಿಗೆ ಕಳೆದ ಒಂದು ವರ್ಷದಿಂದ ವೇತನ ಇಲ್ಲದೆ ಅವರ ಬದುಕು ದುಸ್ತರವಾಗಿದೆ.

ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಗೆ ಸೇರಿದ ಬಾರ್ಜ್‌ನಲ್ಲಿ ಕಳೆದ 7 ವರ್ಷದಿಂದ ಕೋಡಿಬೆಂಗ್ರೆಯ ದಿನೇಶ್‌ ಮತ್ತು ಅಶೋಕ್‌ ಚಾಲಕ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಇವರಿಗೆ ವೇತನ ಬಂದಿಲ್ಲ. ಸಂಬಂಧಪಟ್ಟ ಇಲಾಖೆ ಸಂಬಳಕ್ಕಾಗಿ ಇಂದು ನಾಳೆಯೆಂದು ಸತಾಯಿಸುತ್ತಾ ಇದ್ದಾರೆ. ಇದೀಗ ಇವರಿಗೆ ಕನಿಷ್ಠ ಆದಾಯ ಇಲ್ಲದೆ ಕುಟುಂಬ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಬೇರೆ ಕೆಲಸ ನೋಡಿದರೆ ಬಾರ್ಜ್‌ ಅನ್ನು ಸ್ಥಗಿತಗೊಳಿಸುವ ಪ್ರಸಂಗ ಎದುರಾಗುತ್ತದೆ. ಎರಡು ಪ್ರದೇಶಗಳ ನೂರಾರು ಮಂದಿ ಕಾರ್ಮಿಕರಿಗೆ, ಸ್ಥಳೀಯ ಜನರಿಗೆ ತೊಂದರೆಯಾಗಬಾರದೆಂಬ ಇರಾದೆಯಿಂದ ಇಷ್ಟು ದಿನ ವೇತನ ಇಲ್ಲದೆ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಬಾರ್ಜ್‌ ಮೂಲಕ ಸಾಗಿದರೆ ತುಂಬಾ ಹತ್ತಿರ

ಅರಬ್ಬಿ ಸಮುದ್ರವನ್ನು ಸೇರುವ ಸೀತಾನದಿಯ ಅಳಿವೆ ಸುತ್ತಲೂ ಸಮುದ್ರ ದಿಂದ ಆವೃತವಾದ ದ್ವೀಪ ಪ್ರದೇಶ ಕೋಡಿಬೆಂಗ್ರೆ. ಇಲ್ಲಿನ ನೂರಾರು ಮನೆಗಳಿದ್ದು, ಸರಕಾರ ಕಚೇರಿ ಹಾಗೂ ಇತರ ಕೆಲಸಗಳಿಗೆ ಮಿನಿ ಬಾರ್ಜ್‌ ಮೂಲಕವೇ ಹಂಗಾರಕಟ್ಟೆ, ಮಾಬುಕಳ, ಸಾಸ್ತಾನಕ್ಕೆ ಭೇಟಿ ನೀಡುತ್ತಾರೆ. ಬಾರ್ಜ್‌ ಹೊರತು ಪಡಿಸಿ ಹಂಗಾರಕಟ್ಟೆ ಕೋಡಿಕನ್ಯಾಣವನ್ನು ಸಂಪರ್ಕಿಸಬೇಕಾದರೆ ಕೆಮ್ಮಣ್ಣು, ಸಂತೆಕಟ್ಟೆ, ಬ್ರಹ್ಮಾವರ ಮೂಲಕ ಕನಿಷ್ಠ 25 ಕಿ.ಮೀ ಸುತ್ತುಬಳಸಿ ಹೋಗಬೇಕು. ಬಾರ್ಜ್‌ ಮೂಲಕ 3-4 ಕಿ. ಮೀ. ಕ್ರಮಿಸಬೇಕಾಗುತ್ತದೆ.

ನಮ್ಮ ಬಾಕಿ ಇರುವ ವೇತನವನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ ನಿಮಗೆ ಸಂಬಳದ ಮೊತ್ತ ತತ್‌ಕ್ಷಣ ಕೊಡಲು ಆಗುವುದಿಲ್ಲ. ಅಗತ್ಯ ಇದ್ದರೆ ನೀವು ಬಾರ್ಜ್‌ ಅನ್ನು ಕಟ್ಟಿ ಹೋಗಬಹುದು ಎಂದಿದ್ದಾರೆ. ಇದರಿಂದ ಆವರಿಗೆ ಜನರ ಬಗ್ಗೆ, ನಮ್ಮ ಬಗ್ಗೆ ಇರುವ ಕಾಳಜಿ ಎಷ್ಟೆಂದು ಅರ್ಥವಾಗುತ್ತದೆ ಎನ್ನುತ್ತಾರೆ ಬಾರ್ಚ್‌ ಚಾಲಕ ದಿನೇಶ್‌ ಅವರು.

ತುಕ್ಕು ಹಿಡಿದ ಬಾರ್ಜ್‌

ಈಗಿರುವ ಬಾರ್ಜ್‌ನ ಅಡಿ ಭಾಗದ ಕಬ್ಬಿಣದ ಹಲಗೆ ತುಕ್ಕು ಹಿಡಿದು ಹಾನಿಗೊಂಡಿದೆ. ಮೇಲ್ಭಾಗದಲ್ಲಿ ರಕ್ಷಣ ಗೋಡೆಯೂ ಹಾನಿಯಾಗಿದ್ದು ಸುರಕ್ಷಿತವಾಗಿಲ್ಲ ಎನ್ನಲಾಗಿದೆ. ದುರಸ್ತಿಗಾಗಿ ಹಲವು ಬಾರಿ ದೂರು ನೀಡಲಾಗಿದೆ. ಪ್ರಸ್ತುತ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ದುಡಿಯುತ್ತಿದ್ದು, ತಿಂಗಳಿಗೆ 12 ಸಾವಿರ ರೂ.ಯಂತೆ ವೇತನ ಸಿಗುತ್ತಿದ್ದು ಹೆಚ್ಚುವರಿ ಮಾಡಬೇಕೆಂದು ನೌಕರರು ಆಗ್ರಹಿಸಿದ್ದಾರೆ.

ನಿರೀಕ್ಷಿತ ಉತ್ತರ ಸಿಕ್ಕಿಲ್ಲ: ಒಂದು ವರ್ಷದಿಂದ ಮಾಡಿದ ಕೆಲಸಕ್ಕೆ ವೇತನವೇ ಬಂದಿಲ್ಲ. ಮಾಡಿದ ಸಾಲ ಜಾಸ್ತಿಯಾಗಿದೆ. ಇಲ್ಲಿನ ಜನರಿಗೆ ತೊಂದರೆಯಾಗಬಾರದೆಂದು ಬಾರ್ಜ್‌ ಓಡಿಸುತ್ತಿದ್ದೇವೆ. ಮೀನುಗಾರಿಕಾ ಸಚಿವ ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಶಾಸಕರಲ್ಲೂ ಮನವಿ ಮಾಡಿದ್ದೇವೆ ನಿರೀಕ್ಷಿತ ಉತ್ತರ ಮಾತ್ರ ಯಾರಿಂದಲೂ ಸಿಕ್ಕಿಲ್ಲ. – ಅಶೋಕ್‌, ಬಾರ್ಜ್‌ ನಿರ್ವಾಹಕ

ವಾರದೊಳಗೆ ಪಾವತಿ: ಕೆಲವೊಂದು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ. ವೇತನ ನೀಡುವ ಬಗ್ಗೆ ಈಗಾಗಲೇ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವಾರದೊಳಗೆ ವೇತನ ಪಾವತಿ ಮಾಡಲಿದ್ದೇವೆ. –ಕ್ಯಾ| ಸಿ. ಸ್ವಾಮಿ, ನಿರ್ದೇಶಕರು, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.