ಕುಸಿಯುವ ಸ್ಥಿತಿಯಲ್ಲಿ ವರ್ವಾಡಿ ಪೊದ್ದಲಕಟ್ಟ ಕಾಲುಸಂಕ; ಆತಂಕದಲ್ಲೇ ಜನರ ಓಡಾಟ


Team Udayavani, Nov 22, 2022, 3:20 PM IST

3

ಮಣಿಪಾಲ: ಕೋಡಿಬೆಟ್ಟು ಗ್ರಾ.ಪಂ. ವ್ಯಾಪ್ತಿ ಪೆರ್ಣಂಕಿಲ 1ನೇ ವಾರ್ಡ್‌ನ ವರ್ವಾಡಿ ಪೊದ್ದಲಕಟ್ಟ ಕಾಲುಸಂಕ ಕಿರು ಸೇತುವೆ ದುಃಸ್ಥಿತಿಯಲ್ಲಿದ್ದು, ತೀರಾ ಹದಗೆಟ್ಟು ಹೋಗಿದೆ. ಸುತ್ತಮುತ್ತ 100ಕ್ಕೂ ಅಧಿಕ ಮನೆಗಳಿಗೆ ಓಡಾಡಲು ಸಂಪರ್ಕ ಕೊಂಡಿಯಾಗಿರುವ ಈ ಕಿರು ಸೇತುವೆ ಇದೀಗ ಶಿಥಿಲಾವಸ್ಥೆಗೆ ತಲುಪಿದ್ದು, ಇನ್ನೇನು ಬೀಳುವ ಪರಿಸ್ಥಿತಿಯಲ್ಲಿ ಜನರು ಆತಂಕದಿಂದ ಸಂಚರಿಸುವಂತಾಗಿದೆ.

ಸೇತುವೆ ಮೇಲೆ ಸುತ್ತಮುತ್ತಲಿನ ಶಾಲೆಯ ನೂರಾರು ಮಂದಿ ಮಕ್ಕಳು ಇದರಲ್ಲಿ ನಡೆದುಕೊಂಡು ಹೋಗಬೇಕಿದೆ. ವಾರ್ಷಿಕವಾಗಿ ನಡೆಯುವ ಕೊಡಿಮಣಿತ್ತಾಯ ದೈವದ ಕಂಬಳ ಕೋಲದ ಬಾಲುಭಂಡಾರ ಮೆರವಣಿಗೆ ಇದೇ ಸೇತುವೆಯಿಂದ ಹೋಗುತ್ತದೆ. ಇದರ ಸಮೀಪದಲ್ಲಿ ಜನ ಓಡಾಟದ ಕೇಂದ್ರಗಳಾದ ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಲಿನ ಡೇರಿ, ಕೊಡಿಮಣಿತ್ತಾಯ ದೈವಸ್ಥಾನವು ಇದೆ.

ಸೇತುವೆ ಎರಡು ಬದಿ ತಡೆಯಾಗಿ ಬಳಸಿರುವ ಕಬ್ಬಿಣದ ಪೈಪುಗಳು ತುಕ್ಕು ಹಿಡಿದು ಅಲ್ಲಲ್ಲಿ ತುಂಡಾಗಿ ಬಿದ್ದಿದೆ. ಮೇಲಾºಗದ ಕಾಂಕ್ರೀಟ್‌ ಪಿಲ್ಲರ್‌ಗಳು ಅಲುಗಾಡುತ್ತಿದ್ದು, ಇನ್ನೇನು ತುಂಡಾಗಿ ಬೀಳುವ ಸ್ಥಿತಿಯಲ್ಲಿದೆ. ಸೇತುವೆ ತಳಭಾಗದಲ್ಲಿ ಕಾಂಕ್ರಿಟ್‌ಗೆ ಬಳಸಿದ ಕಬ್ಬಿಣದ ರಾಡುಗಳು ಗೋಚರವಾಗುತ್ತಿದ್ದು, ಇದು ಸಂಪೂರ್ಣ ತುಕ್ಕು ಹಿಡಿದು ಮುಟ್ಟಿದರೆ ತುಂಡುತುಂಡಾಗಿ ಕೆಳಗೆ ಬೀಳುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು, ಮಕ್ಕಳು ನಡೆದಾಡುವಾಗ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಅಲ್ಲದೆ ಪ್ರತೀ ಮಳೆಗಾಲದಲ್ಲಿ ಇಲ್ಲಿ ನೀರು ತುಂಬಿ ಹರಿಯುತ್ತದೆ. ಈ ಮಳೆಗಾಲವು ಜೀವ ಭಯದಲ್ಲೆ ಕಳೆದಿದ್ದೇವೆ ಎನ್ನುತ್ತಾರೆ ನಾಗರಿಕರು. ಈ ಸೇತುವೆ ಯಾವುದೇ ಕ್ಷಣದಲ್ಲಿಯಾದರೂ ಕುಸಿದು ಬೀಳಬಹುದು. ಪ್ರಾಣಹಾನಿಯಂತಹ ಅನಾಹುತ ಆಗುವ ಮುಂಚೆ ಗ್ರಾ.ಪಂ., ಜಿಲ್ಲಾಡಳಿತ ಹಾಗೂ ಜನ ಪ್ರತಿನಿಧಿಗಳು ಗಮನಹರಿಸಿ ಶೀಘ್ರವಾಗಿ ಸೇತುವೆಯನ್ನು ನಿರ್ಮಿಸಿ ಕೊಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ವೆಂಟೆಡ್‌ ಡ್ಯಾಂಗೆ ಪ್ರಸ್ತಾವನೆ

ಈ ಕಿರು ಸೇತುವೆ 50ಕ್ಕೂ ಅಧಿಕ ವರ್ಷವಾಗಿದೆ. ಇಲ್ಲಿನ ಜನರಿಗೆ ಚಿತ್ರಬೈಲು, ಮೂಡುಬೆಳ್ಳೆ, ಕಣಂಜಾರು, ಹಿರಿಯಡಕ ಸಾಗಲು ಇದುವೇ ಸಂಪರ್ಕ ಸೇತುವೆಯಾಗಿದೆ. ಇದರ ಅಭಿವೃದ್ಧಿಗೆ ಕೋಡಿಬೆಟ್ಟು ಗ್ರಾ. ಪಂ. ಎರಡು ವರ್ಷಗಳ ಹಿಂದೆ ಪ್ರಸ್ತಾವನೆ ಸಿದ್ಧªಪಡಿಸಿ ಶಾಸಕರಿಗೆ, ಸಂಬಂಧಪಟ್ಟ ಇಲಾಖೆಗೆ ನೀಡಿದೆ. 50ರಿಂದ 60 ಲಕ್ಷ ರೂ., ಅಂದಾಜು ವೆಚ್ಚದಲ್ಲಿ ವೆಂಟೆಡ್‌ ಡ್ಯಾಂ ನಿರ್ಮಿಸುವುದು ಯೋಜನೆ. ಇದರಲ್ಲಿ 9 ಅಡಿ ಅಗಲದ ವ್ಯವಸ್ಥಿತ ರಸ್ತೆ ನಿರ್ಮಾಣ ಜತೆಗೆ ಹರಿಯುವ ನೀರನ್ನು ಸಂರಕ್ಷಿಸುವುದು. ಇದರಿಂದ ಸುತ್ತಮುತ್ತಲಿನ 300 ಎಕ್ರೆಗೆ ಕೃಷಿಗಾಗಿ ನೀರಾವರಿ ಸೌಲಭ್ಯ, ಗ್ರಾಮದ ಅಂತರ್ಜಲ ವೃದ್ಧಿ, ಸ್ಥಳೀಯ ಜನವಸತಿ ಕಾಲನಿಗಳಿಗೆ ನೀರು ಪೂರೈಕೆಗೆ ದೂರದೃಷ್ಟಿ ಯೋಜನೆಯಾಗಿತ್ತು. ಆದರೆ ಇದು ಪ್ರಸ್ತಾವನೆ ಹಂತದಲ್ಲಿಯೇ ಯೋಜನೆ ಬಾಕಿಯಾಗಿದ್ದು, ಶಾಸಕರು, ಜಿ.ಪಂ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ.

ಪ್ರಸ್ತಾವನೆ ಸಲ್ಲಿಕೆ: ದುಃಸ್ಥಿತಿಯಲ್ಲಿರುವ ವರ್ವಾಡಿ ಪೊದ್ದಲಕಟ್ಟ ಕಿರು ಸೇತುವೆ ಅಭಿವೃದ್ಧಿಗೆ ಗ್ರಾ. ಪಂ. ವತಿಯಿಂದ ವೆಂಟೆಡ್‌ ಡ್ಯಾಂ ಯೋಜನೆಗೆ ಪ್ರಸ್ತಾವನೆ ರೂಪಿಸಿ ಶಾಸಕ ಲಾಲಾಜಿ ಮೆಂಡನ್‌ ಅವರಿಗೆ ಸಲ್ಲಿಸಿದ್ದೇವೆ. ಶೀಘ್ರದಲ್ಲೆ ಅನುದಾನ ಒದಗಿಸಿ, ಕಿರು ಸೇತುವೆ ಅಭಿವೃದ್ಧಿಗೊಳಿಸುವ ಬಗ್ಗೆ ಶಾಸಕರು ಭರವಸೆ ನೀಡಿದ್ದಾರೆ. – ಸದಾನಂದ ಪ್ರಭು ವರ್ವಾಡಿ, ಉಪಾಧ್ಯಕ್ಷರು, ಕೋಡಿಬೆಟ್ಟು ಗ್ರಾ. ಪಂ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.