ಪರ್ಯಾಯ ಮೆರವಣಿಗೆಗೆ ಸಾಂಪ್ರದಾಯಿಕ ಸ್ಪರ್ಶ
Team Udayavani, Jan 19, 2022, 3:56 AM IST
ಉಡುಪಿ: ಕೋವಿಡ್ ಹಿನ್ನೆಲೆಯಲ್ಲಿ ರಾತ್ರಿಕರ್ಫ್ಯೂ ವಿಧಿಸಿದ್ದರಿಂದ ವಿಜೃಂಭಣೆಯಿಂದ ನೆರವೇರಬೇಕಿದ್ದ ಪರ್ಯಾಯೋತ್ಸವದ ಮೆರವಣಿಗೆ ಮಂಗಳವಾರ ಮುಂಜಾನೆ ಸರಳವಾಗಿ ನಡೆಯಿತು.
ಜೋಡುಕಟ್ಟೆ ಬಳಿಯಿಂದ ಮಂಗಳವಾರ ಬೆಳಗಿನ ಜಾವ ಮೆರವಣಿಗೆ ಆರಂಭವಾಯಿತು. ಸಂಪ್ರದಾಯದಂತೆ ಉಡುಪಿ ಯಿಂದ 20 ಕಿ.ಮೀ ದೂರದ ದಂಡತೀರ್ಥದಲ್ಲಿ ಕೃಷ್ಣಾಪುರ ಶ್ರೀಗಳು ಪವಿತ್ರ ತೀರ್ಥಸ್ನಾನ ಪೂರೈಸಿ ಜೋಡುಕಟ್ಟೆಗೆ ಆಗಮಿಸಿದರು. ಶ್ರೀಪಾದರನ್ನು ಮಠದ ಇತರೆ ಮಠಾಧೀಶರು ಬರಮಾಡಿಕೊಂಡರು. ಜೋಡುಕಟ್ಟೆ ಮಂಟಪದಲ್ಲಿ ಪಟ್ಟದ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪರ್ಯಾಯ ಮೆರವಣಿಗೆ ಆರಂಭಗೊಂಡಿತು. ಕೆ.ಎಂ. ಮಾರ್ಗ, ತಾ. ಕಚೇರಿ ರಸ್ತೆಯ ಮೂಲಕ ರಥಬೀದಿಗೆ ಸಾಗಿತು. ವಿವಿಧ ಸ್ತಬ್ಧಚಿತ್ರಗಳು, ಕಲಾ ತಂಡಗಳು ಮೆರವಣಿಗೆಯಲ್ಲಿ ಒಳಗೊಂಡಿದ್ದು ಸಾಂಪ್ರ ದಾಯಿಕತೆಗೆ ಆದ್ಯತೆ ನೀಡಲಾಗಿತ್ತು.
ಮೆರವಣಿಗೆ ಕಣ್ತುಂಬಿಕೊಂಡ ಭಕ್ತರು
ಸಾರ್ವಜನಿಕರಿಗೆ ಮೆರವಣಿಗೆಯಲ್ಲಿ ಭಾಗವಹಿಸಲು ನಿರಾಕರಿಸಿದ ಹೊರ ತಾಗಿಯೂ ಜೋಡುಕಟ್ಟೆಯಿಂದ ಕೃಷ್ಣಮಠದವರೆಗೆ ರಸ್ತೆ ಬದಿಯಲ್ಲಿ ನೆರೆದಿದ್ದ ಭಕ್ತರು ಮೆರವಣಿಗೆ ನೋಡಿ ಸಂಭ್ರಮಿಸಿದರು. ಮೆರವಣಿಗೆ ಸಾಗಿ ಬಂದ ರಸ್ತೆ, ಇಕ್ಕೆಲಗಳಲ್ಲಿ ಜನರು ಮೆರವಣಿಗೆ ವೀಕ್ಷಿಸಿದರು. ಬೃಹತ್ ಕಟ್ಟಡಗಳ ಮಳಿಗೆಗಳಲ್ಲಿ, ಕಾಂಪೌಂಡ್ ಗೋಡೆಗಳ ಮೇಲೆ ನಿಂತು ಜನರು ಮೆರವಣಿಗೆ ವೀಕ್ಷಿಸಿದರು.
ಕಂಗೊಳಿಸಿದ ಸ್ತಬ್ಧಚಿತ್ರಗಳು
ಪರ್ಯಾಯೋತ್ಸವದ ಮೆರವಣಿಗೆಯ ವಿಶೇಷತೆಯೇ ಜಾನ ಪದ ತಂಡಗಳು.ಆದರೆ ಈ ಬಾರಿಯ ಮೆರವಣಿಗೆಯಲ್ಲಿ ನಿರ್ಬಂಧ ಹೇರಲಾದ ಕಾರಣ ಸುಮಾರು 40ರಷ್ಟು ಜಾನ ಪದ ತಂಡಗಳು ಭಾಗವಹಿಸಲಿಲ್ಲ. ಉಳಿದಂತೆ ಶ್ರೀಕೃಷ್ಣ ದೇವರ ಬೃಹತ್ ವಿಗ್ರಹ, ಯಕ್ಷಗಾನ, ಕಾಳಿಂಗ ಮಾರ್ಧನ, ಶೇಷಶಯನ, ಗಜೇಂದ್ರ ಮೋಕ್ಷ, ಜಾಂಬವಂತ ಕೃಷ್ಣ, ಗೀತೋಪದೇಶ ಶ್ರೀಕೃಷ್ಣಾರ್ಜುನ, ವಾಸುದೇವ ಕೃಷ್ಣ, ಹರೇಕೃಷ್ಣ ಕುಣಿತ ಭಜನೆ, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು, ಅಯೋಧ್ಯೆ ರಾಮಮಂದಿರ, ಅರಣ್ಯ ಇಲಾಖೆಯ ಹಸುರು ಉಳಿಸಿ ಜಾಗೃತಿ ಟ್ಯಾಬ್ಲೋಗಳು, ಭಜನೆ ತಂಡಗಳು, ಪೂರ್ಣಕುಂಭ, ಬಿರುದಾವಳಿ, ಚೆಂಡೆ ಬಳಗ, ಪಂಚವಾದ್ಯ, ಕೊಂಬುವಾದ್ಯ, ನಾಗಸ್ವರ ತಂಡ, ಸ್ಯಾಕೊÕàಫೋನ್ ತಂಡ, ನಾಸಿಕ್ ಬ್ಯಾಂಡ್, ಮರಕಾಲು ಕುಣಿತ, ದೊಂದಿಬೆಳಕಿನ ದೀಪಗಳೂ ಪರ್ಯಾಯೋತ್ಸವದಲ್ಲಿ ಕಂಗೊಳಿಸಿದವು.
ಪರದೆ ಮೂಲಕ ವೀಕ್ಷಣೆ
ಪರ್ಯಾಯ ಮಹೋತ್ಸವದ ಎಲ್ಲ ಕಾರ್ಯಕ್ರಮಗಳೂ ಜೋಡುಕಟ್ಟೆ ಯಿಂದ ರಥಬೀದಿ, ಪಾರ್ಕಿಂಗ್ ಪ್ರದೇಶದವರೆಗೆ ಬೃಹತ್ ಎಲ್ಇಡಿ ಪರದೆ ಮೇಲೆ ಪ್ರಸಾರವಾಯಿತು. ಅಲ್ಲದೆ ಟಿವಿಗಳಲ್ಲಿಯೂ ನೇರಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ
‘ವೀಲ್ ಚೇರ್ ರೋಮಿಯೋ’ ಚಿತ್ರ ವಿಮರ್ಶೆ; ವೀಲ್ಚೇರ್ನಿಂದ ಮೇಲೇಳುವ ಸಿನಿಮಾವಿದು…
ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್ ಸಿಬ್ಬಂದಿ