ಗ್ರಂಥಾಲಯಗಳಲ್ಲಿ ಸೌಲಭ್ಯಗಳ ಕೊರತೆ; ಓದುಗರಿಗೆ ನಿರಾಸೆ

ಜಿಲ್ಲೆಯಲ್ಲಿ 147 ಗ್ರಾಮೀಣ ಲೈಬ್ರೆರಿ

Team Udayavani, Jun 25, 2020, 1:57 PM IST

ಗ್ರಂಥಾಲಯಗಳಲ್ಲಿ ಸೌಲಭ್ಯಗಳ ಕೊರತೆ; ಓದುಗರಿಗೆ ನಿರಾಸೆ

ಉಡುಪಿ: ಪುಸ್ತಕ ಅಭಿರುಚಿ ಮೂಡಿಸಲು ಅಸ್ತಿತ್ವಕ್ಕೆ ಬಂದ ಗ್ರಾಮೀಣ ಗ್ರಂಥಾಲಯಗಳು ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಜಿಲ್ಲೆಯಲ್ಲಿ ಗ್ರಾ.ಪಂ.ಗೆ ಒಂದರಂತೆ ಸುಮಾರು 147 ಗ್ರಾಮೀಣ ಗ್ರಂಥಾಲಯ ಗಳಿದ್ದು, ಅವುಗಳಿಗೆ ಸ್ವಂತ ಕಟ್ಟಡಗಳಿಲ್ಲ. ಗ್ರಾ. ಪಂ. ಕಚೇರಿಗಳ ಪಕ್ಕದ ಕೊಠಡಿಗಳಲ್ಲಿ, ಖಾಲಿ ಇರುವ ಕಟ್ಟಡಗಳು, ಶಾಲೆಗಳ ಕೊಠಡಿ ಮುಂತಾದೆಡೆ ಕಿರಿದಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

8 ಸ್ವಂತ ಕಟ್ಟಡಗಳಿಗೆ ಪ್ರಸ್ತಾವನೆ ಸಲ್ಲಿಕೆ
ಗ್ರಂಥಾಲಯ ಇಲಾಖೆಗೆ ಸೇರಿದ ನಲ್ಲೂರು ಮತ್ತು ಹೆಬ್ರಿ ಗ್ರಂಥಾಲಯಗಳು ಮಾತ್ರ ಸ್ವಂತ ಭೂಮಿ ಮತ್ತು ಕಟ್ಟಡ ಹೊಂದಿವೆ. ಉಳಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ 8 ಕಡೆಗಳಲ್ಲಿ ಸ್ವಂತ ಕಟ್ಟಡಕ್ಕೆ ನಿವೇಶನ ನೀಡುವಂತೆ ಈ ಹಿಂದೆಯೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇನ್ನೂ ಅನುಮೋದನೆ ಮಾತ್ರ ಸಿಕ್ಕಿಲ್ಲ.

ಪೀಠೊಪಕರಣಗಳೂ ಇಲ್ಲ
ಜಿಲ್ಲೆಯ ಗ್ರಂಥಾಲಯಗಳಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿಯಾಗಿದ್ದಂತೆ ಭಾಸವಾಗುತ್ತಿದೆ. ಆದರೆ ಬಹುತೇಕ ಗ್ರಂಥಾಲಯಗಳಲ್ಲಿ ಆವಶ್ಯಕ ಪುಸ್ತಕಗಳಿಲ್ಲ, ಇದ್ದವೂ ಸುರಕ್ಷಿತವಾಗಿಲ್ಲ. ಜತೆಗೆ ಇತರ ಹಲವು ಕೊರತೆಗಳೂ ಕಾಡುತ್ತಿವೆ. ಸರಿಯಾದ ಗಾಳಿ-ಬೆಳಕು, ಕಟ್ಟಡಗಳಲ್ಲಿ ಓದುಗರಿಗೆ ಅಗತ್ಯ ಕುರ್ಚಿ, ಟೇಬಲ್‌ಗ‌ಳೂ ಇಲ್ಲ. ಬಳಕೆಯಾಗದ ಕಂಪ್ಯೂಟರ್‌ ಕೆಲವು ಗ್ರಂಥಾಲಯಗಳಲ್ಲಿ ಕಂಪ್ಯೂಟರ್‌ಗಳಿದ್ದರೂ ಅದನ್ನು ಬಳಸುವ ತರಬೇತಿ ಪಡೆದ ಸಿಬಂದಿ ಕೊರತೆಯಿಂದ ನಿಷ್ಪ್ರಯೋಜಕವಾಗಿವೆ.

ಅನ್ಯಇಲಾಖೆಗೆ ವರ್ಗಾವಣೆ
ಗ್ರಾ.ಪಂ. ಗ್ರಂಥಾಲಯಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಗೆ ವರ್ಗಾಯಿಸಿ 2019ರ ಮಾರ್ಚ್‌ನಲ್ಲಿ ಸರಕಾರ ಆದೇಶ ನೀಡಿದೆ. ರಾಜ್ಯದಲ್ಲಿ ಒಟ್ಟು 5,766 ಗ್ರಾ.ಪಂ. ಗ್ರಂಥಾಲಯಗಳು ಕಾರ್ಯ ರ್ವಹಿಸುತ್ತಿವೆ. ಈ ಗ್ರಂಥಾಲಯಗಳಲ್ಲಿ ಗೌರವಧನ ಆಧಾರದ ಮೇಲೆ ಒಟ್ಟು
5,639 ಮೇಲ್ವಿಚಾರಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 5,766 ಗ್ರಾ.ಪಂ. ಗ್ರಂಥಾಲಯಗಳಲ್ಲಿ ಪಟ್ಟಣ ಪಂಚಾಯತ್‌,
ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿನ ಒಟ್ಟು 133 ಗ್ರಂಥಾಲಯ ಹಾಗೂ ಮೇಲ್ವಿಚಾರಕರನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿಯೇ ಉಳಿಸಿಕೊಳ್ಳಲಾಗಿತ್ತು. 5,633 ಗ್ರಾ.ಪಂ. ಗ್ರಂಥಾಲಯಗಳನ್ನು ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಮೂಲಕ ಗ್ರಾ.ಪಂ.ಗಳಿಗೆ ವರ್ಗಾಯಿಸಿದೆ.

ಲಾಕ್‌ಡೌನ್‌ ಬಳಿಕ ತೆರೆದಿಲ್ಲ
ಲಾಕ್‌ಡೌನ್‌ ತೆರವಿನ ಬಳಿಕ ರಾಜ್ಯದಲ್ಲಿ ಬಹುತೇಕ ಎಲ್ಲ ಸಾರ್ವಜನಿಕರ ಸೇವೆಗಳು ಆರಂಭವಾಗಿದ್ದರೂ ಗ್ರಂಥಾಲಯಗಳು ಇನ್ನೂ ಮುಚ್ಚಿವೆ. ಎಲ್ಲ
ಸೇವೆಗಳಿಗೆ ಅವಕಾಶ ನೀಡಿರುವಾಗ ಲೈಬ್ರೆರಿಗಳಿಗೆ ಮಾತ್ರ ಯಾಕಿಲ್ಲ ಎನ್ನುವುದು ಓದುಗರ ಪ್ರಶ್ನೆ.

ಅನುಮೋದನೆಗೆ ಬಾಕಿ
ಜಿಲ್ಲೆಯಲ್ಲಿ ಗ್ರಂಥಾಲಯ ಇಲಾಖೆ ವ್ಯಾಪ್ತಿಗೊಳಪಟ್ಟ 8 ಕಡೆಗಳಲ್ಲಿ ಸ್ವಂತ ಕಟ್ಟಡಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ಸಿಗಬೇಕಿದೆ.
– ನಳಿನಿ ಜಿ.ಐ., ಮುಖ್ಯ ಗ್ರಂಥಾಲಯಾಧಿಕಾರಿ,
ಜಿಲ್ಲಾ ಕೇಂದ್ರ ಗ್ರಂಥಾಲಯ , ಉಡುಪಿ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.