ಹಳ್ಳಿಗಳ ಪಶು ಚಿಕಿತ್ಸಾಲಯಗಳಲ್ಲಿ ಸಿಬಂದಿ ಕೊರತೆ; ಲಸಿಕೆ ಅಭಿಯಾನಕ್ಕೆ ಕರ್ತವ್ಯ ನಿಯೋಜನೆ
Team Udayavani, Dec 2, 2022, 9:06 AM IST
ಪಡುಬಿದ್ರಿ: ಪಶು ಸಂಗೋಪನ ಇಲಾಖಾ ಆದೇಶದನ್ವಯ ರಾಜ್ಯದೆಲ್ಲೆಡೆ ನ. 7ರಿಂದ ಪ್ರಾರಂಭಗೊಂಡಿದ್ದು ಡಿ. 7ರವರೆಗೆ ನಡೆಯುತ್ತಿರುವ ರಾಸುಗಳ ಕಾಲು ಬಾಯಿ ಜ್ವರದ ಲಸಿಕಾ ಅಭಿಯಾನದ ಕರ್ತವ್ಯನಿರ್ವಹಣೆಗೆ ಇಬ್ಬರು ಪಶು ಸಂಗೋಪನ ನಿರೀಕ್ಷಕರು, ಗ್ರಾಮೀಣ ಪಶು ಚಿಕಿತ್ಸಾ ಕೇಂದ್ರಗಳ ವೈದ್ಯರು, ಇಬ್ಬರು ಪಶು ವೈದ್ಯಾಧಿಕಾರಿಗಳನ್ನು ನೇಮಕ ಮಾಡಿರುವುದರಿಂದ ಪಲಿಮಾರಿನ ಪ್ರಾಥಮಿಕ ಪಶು ಚಿಕಿತ್ಸಾಲಯ, ಕಾಪು ತಾ| ಪಶು ವೈದ್ಯಕೀಯ ಆಸ್ಪತ್ರೆ, ಹಳ್ಳಿಗಳ ಪಶು ಚಿಕಿತ್ಸಾಲಯದಲ್ಲಿ ಸಿಬಂದಿ ಕೊರತೆಯಾಗಿ ಕಾರ್ಯಾಚರಿಸದಂತಾಗಿದೆ.
ಶಿರ್ವದಲ್ಲಿನ ಪಶು ವೈದ್ಯಾಧಿಕಾರಿ ಡಾ| ಅರುಣ್ ಕುಮಾರ್ ಹೆಗ್ಡೆ ಅವರು ಕಾಪು ತಾ| ಪಶು ವೈದ್ಯಾಧಿಕಾರಿ ಸೇವೆಯನ್ನೂ ನಿಭಾಯಿಸುತ್ತಿದ್ದಾರೆ. ಅವರೇ ಪಡುಬಿದ್ರಿಯ ಪಶು ವೈದ್ಯಕೀಯ ಆಸ್ಪತ್ರೆಯಲ್ಲೂ ನಿಯೋಜನೆಯಲ್ಲಿದ್ದಾರೆ.
ಇನ್ನೋರ್ವ ಪಶು ವೈದ್ಯಾಧಿಕಾರಿ ಕಟಪಾಡಿ ಹಾಗೂ ಪಡುಬೆಳ್ಳೆ ಆಸ್ಪತ್ರೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇಡಿಯ ಕಾಪು ತಾ| ನಲ್ಲಿ 29 ಹುದ್ದೆಗಳಿದ್ದು ಕೇವಲ ನಾಲ್ಕು ಹುದ್ದೆಗಳಷ್ಟೇ ಭರ್ತಿಯಾಗಿವೆ. ಇನ್ನುಳಿದ 25 ಹುದ್ದೆಗಳ ಗತಿಯೇ ಅಯೋಮಯವಾಗಿದೆ.
ಸದ್ಯ ಇರುವ 2 ವೈದ್ಯರು ಹಾಗೂ 2 ನಿರೀಕ್ಷಕರು ತಾಲೂಕಿನ 5ಪಶು ಚಿಕಿತ್ರಾಲಯ ಹಾಗೂ 3 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳ ನಡುವೆ ಅತ್ತಿತ್ತ ಓಡಾಡಿಕೊಳ್ಳುತ್ತಲೇ, ಮೇಲಾಗಿ ಕೆಎಂಎಫ್ ಪಶು ವೈದ್ಯರ ಸಹಕಾರದೊಂದಿಗೆ ಇಲಾಖಾ ಕರ್ತವ್ಯಗಳನ್ನು ನಿರ್ವಹಿಸುತ್ತಿರುವರು.
ತಾ| ಪಶು ವೈದ್ಯಧಿಕಾರಿ ಅರುಣ್ ಕುಮಾರ್ ಹೆಗ್ಡೆ ಅವರು “ಉದಯವಾಣಿ’ಯೊಂದಿಗೆ ಮಾತನಾಡಿ, ಸಿಬಂದಿ ಕೊರತೆ ಇಲಾಖೆಯನ್ನು ಕಾಡುತ್ತಿದೆ. ಪಶು ವೈದ್ಯಾಧಿಕಾರಿಯಾಗಿ ಇಲಾಖಾ ಕರ್ತವ್ಯಗಳ ನಡುವೆ ವಿವಿಧ ಗ್ರಾಮಗಳ ಗ್ರಾಮಸಭೆಗೂ ಹಾಜರಾಗಬೇಕಿದೆ.
ಸರಕಾರದಿಂದ 400 ಪಶು ವೈದ್ಯಾಧಿಕಾರಿಗಳ ನೇಮಕಾತಿಯು 2 ವರ್ಷಗಳೇ ಹಿಂದೆಯೇ ಆಗಿದ್ದರೂ ವಿಚಾರವು ನ್ಯಾಯಾಲಯದ ಮೆಟ್ಟಿಲೇರಿ ಕುಳಿತಿದೆ. ಪ್ಯಾರಾ ಸ್ಟಾಫ್ ನೇಮಕಾತಿಗಳು ನಡೆಯುತ್ತಿಲ್ಲ. ಸರಕಾರದ ಮಟ್ಟದಲ್ಲಿ ಈ ಪ್ರಕ್ರಿಯೆಗಳು ನಡೆಯಬೇಕಾಗಿದೆ.
ಇವೆಲ್ಲವುಗಳ ನಡುವೆ ರಾಸುಗಳ ಲಸಿಕೆ ಅಭಿಯಾನ ನಡೆಯಬೇಕಾಗಿರುವುದರಿಂದ ಕಾಪು ತಾಲೂಕಿನ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳಲ್ಲಿ ಗ್ರಾಹಕ ಸೇವೆಯಲ್ಲಿ ವ್ಯತ್ಯಾಸವಾಗುತ್ತಿವೆ ಎಂದು ತಿಳಿಸಿದ್ದಾರೆ.
ನಾನಾ ಕಾರಣಗಳಿಂದಾಗಿಯೂ ರಾಸುಗಳ ಸಂಖ್ಯೆಯೂ ತಾ| ಮಟ್ಟದಲ್ಲಿ 2015ರ ಸೆನ್ಸಸ್ ಬಳಿಕ 2020ಕ್ಕೆ 40 ಶೇಕಡಾದಷ್ಟು ಇಳಿದಿವೆ. 2022ರ ಮಾಹಿತಿಯಂತೆ 2020ರ ಅನಂತರದಲ್ಲಿ 20 ಶೇಕಡಾದಷ್ಟು ರಾಸುಗಳು ಕಡಿಮೆ ಆಗಿರುವುದಾಗಿ ಡಾ| ಅರುಣ್ ಕುಮಾರ್ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ