ಕೆರೆ, ಪಾರ್ಕ್‌, ಶ್ಮಶಾನ, ಕ್ರೀಡಾಂಗಣಕ್ಕೆ ಆದ್ಯತೆ: ದಿವಾಕರ ಶೆಟ್ಟಿ


Team Udayavani, Feb 16, 2017, 3:35 AM IST

15-LOC-3.jpg

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಉಳಿಯಾರಗೋಳಿ, ಕಾಪು, ಮೂಳೂರು, ಮಲ್ಲಾರು ಗ್ರಾಮಗಳು ಸೇರಿದಂತೆ ಕೋಟೆ- ಮಟ್ಟು, ಪಾಂಗಾಳ, ಮಜೂರು ಹಾಗೂ ಉಚ್ಚಿಲ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಪು ನಗರ ಯೋಜನಾ ಪ್ರಾಧಿಕಾರದ ಕಚೇರಿ ಉದ್ಘಾಟನೆ ಮತ್ತು ಪ್ರಾಧಿಕಾರದ ಪ್ರಥಮ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಅಧಿಕಾರ ಸ್ವೀಕಾರ ಸಮಾರಂಭವು ಕಾಪು ಪುರಸಭೆ ಕಟ್ಟಡದಲ್ಲಿ ಬುಧವಾರ ನಡೆಯಿತು.

ನೂತನ ಕಚೇರಿಯನ್ನು ಉದ್ಘಾಟಿಸಿ, ನೂತನ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರನ್ನು ಅಭಿನಂದಿಸಿದ ಶಾಸಕ ವಿನಯ
ಕುಮಾರ್‌ ಸೊರಕೆ ಮಾತನಾಡಿ, ಕಾಪು ಯೋಜನಾ ಪ್ರಾಧಿಕಾರಕ್ಕೆ ಹಿರಿಯ ಮುತ್ಸದ್ಧಿಯೇ ಅಧ್ಯಕ್ಷರಾಗಿ ಬಂದಿರು ವುದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ. ಕಾಪು ಅಭಿವೃದ್ಧಿಗೆ ದೂರದರ್ಶಿತ್ವದ ಯೋಜನೆಗಳನ್ನು ಹೊಂದಿರುವ ಕಾಪು ದಿವಾಕರ ಶೆಟ್ಟಿ ಅವರು ತಮಗೆ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುವುದು ಮಾತ್ರವಲ್ಲದೇ, ಕಾಪು ಪುರಸಭೆಯನ್ನು ಮಾದರಿ ಪುರಸಭೆ
ಯನ್ನಾಗಿ ರಚಿಸುವಲ್ಲಿ ಯಶಸ್ವಿಯಾಗು ತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಅಭಿವೃದ್ಧಿಗೆ ಆದ್ಯತೆ
ಕಾಪು ನಗರ ಯೋಜನಾ ಪ್ರಾಧಿ ಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಾಪು ದಿವಾಕರ ಶೆಟ್ಟಿ ಮಾತನಾಡಿ, ನನ್ನ ಅಧಿಕಾರಾವಧಿಯ ಮೂರು ವರ್ಷಗಳಲ್ಲಿ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಪ್ರದೇಶಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗು ವುದು. ಯೋಜನಾ ಪ್ರದೇಶದಲ್ಲಿ ಕೈಗಾರಿಕೆ, ಕ್ರೀಡಾಂಗಣ, ಕೆರೆ, ಪಾರ್ಕ್‌, ಶ್ಮಶಾನ, ವಾಕಿಂಗ್‌ ಟ್ರಾಕ್‌ನಂತಹ ಮಹತ್ವದ ಯೋಜನೆಗಳನ್ನು ಶೀಘ್ರ ಅನುಷ್ಠಾನಿಸಲಾಗುವುದು ಎಂದರು.

ಪ್ರಥಮ ಹಂತದಲ್ಲಿ 3 ಕೋ.ರೂ.
ಕಾಪು ನಗರ ಯೋಜನಾ ಪ್ರಾಧಿಕಾ ರಕ್ಕೆ ಪ್ರಥಮ ಹಂತದಲ್ಲಿ ರಾಜ್ಯ ಸರಕಾರ 3 ಕೋ. ರೂ. ಅನುದಾನವನ್ನು ಒದಗಿಸ ಲಿದ್ದು, ಪ್ರಾರಂಭಿಕ ಅನುದಾನದ ಸದ್ಬಳ ಕೆಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿ ಗಳೊಂದಿಗೆ ಚರ್ಚಿಸಿ, ಯೋಜನೆ ರೂಪಿಸಲಾಗುವುದು. ಪುರಸಭೆಯ ವಿವಿಧ ಕಾಮಗಾರಿಗಳಿಗೆ ಅತೀ ಹೆಚ್ಚಿನ ಅನುದಾನ ಕ್ರೋಡೀಕರಿಸಲು ಮಹತ್ವದ ನಿರ್ಧಾರ ಮತ್ತು ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ ಕಚೇರಿ ಉದ್ಘಾಟಿಸಿ ಶುಭ ಹಾರೈಸಿದರು.

ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ, ಗ್ರಾ.ಪಂ. ಒಕ್ಕೂಟದ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ, ಕಾಪು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಉದ್ಯಮಿ ಮನೋಹರ್‌ ಶೆಟ್ಟಿ ಕಾಪು, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ರಾಜೇಶ್‌ ರಾವ್‌ ಪಾಂಗಾಳ, ಜಿಲ್ಲಾ ಕಾಂಗ್ರೆಸ್‌ ಮುಖಂಡ ಅಶೋಕ್‌ ಕುಮಾರ್‌ ಕೊಡವೂರು, ತಾ.ಪಂ. ಸದಸ್ಯ ರಾಜೇಶ್‌ ಹೆಗ್ಡೆ, ಕಾಪು ಪುರಸಭೆಯ ಅಧ್ಯಕ್ಷೆ ಸೌಮ್ಯಾ ಎಸ್‌., ಉಪಾಧ್ಯಕ್ಷ ಎಚ್‌. ಉಸ್ಮಾನ್‌, ವಿಪಕ್ಷ ನಾಯಕ ಅರುಣ್‌ ಶೆಟ್ಟಿ ಪಾದೂರು, ಮುಖ್ಯಾಧಿಕಾರಿ ರಾಯಪ್ಪ, ಗಣ್ಯರಾದ ನಡಿಕೆರೆ ರತ್ನಾಕ‌ರ ಶೆಟ್ಟಿ, ಮಾಧವ ಆರ್‌.ಪಾಲನ್‌, ಶಿವಾಜಿ ಸುವರ್ಣ, ದೀಪಕ್‌ ಕುಮಾರ್‌ ಎರ್ಮಾಳ್‌, ವಿನಯ ಬಲ್ಲಾಳ್‌, ಅಬ್ದುಲ್‌ ಹಮೀದ್‌, ರಮೇಶ್‌ ಹೆಗ್ಡೆ, ಮೋಹನ್‌ ಬಂಗೇರ, ಗುಲಾಂ ಮಹಮ್ಮದ್‌, ಅರ್ಚನಾ ಶೆಟ್ಟಿ, ವಿವಿಧ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರು, ಪುರಸಭೆ ಸದಸ್ಯರು, ಕಾಪು ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿ ಪರಶಿವ ಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.