ಕಾರ್ಕಳ: ಬಾವಿಗೆ ಬಿದ್ದ ಚಿರತೆ, ಅರಣ್ಯಾಧಿಕಾರಿಗಳಿಂದ ರಕ್ಷಣೆ
Team Udayavani, Apr 11, 2022, 11:59 AM IST
ಕಾರ್ಕಳ: ಕಾರ್ಕಳ ತಾ| ಕಸಬ ಗ್ರಾಮದ ಅತ್ತೂರು ಬಳಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರವಿವಾರ ರಕ್ಷಿಸಿದ್ದಾರೆ. ಸ್ಥಳಿಯ ನಿವಾಸಿ ವಿನ್ಸೆಂಟ್ ನವೀನ್ ಕ್ಯಾಸ್ತಲಿನೋ ಎಂಬವರ ಬಾವಿಗೆ ರವಿವಾರ ಬೆಳಗ್ಗಿನ ಜಾವ ಚಿರತೆ ಯೊಂದು ಬಿದ್ದಿದ್ದು ಬಳಿಕ ಅವರು ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು.
ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರ್ಕಳ ವಲಯ ಅರಣ್ಯಾಧಿಕಾರಿ ಜಿ.ಡಿ. ದಿನೇಶ್ ಅವರ ನೇತೃತ್ವದಲ್ಲಿ ಚಿರತೆಯನ್ನು ಬಾವಿಯಿಂದ ಮೇಲಕೆತ್ತಿ ಬೋನಿನ ಮೂಲಕ ರಕ್ಷಿಸುವ ಕಾರ್ಯ ನಡೆಯಿತು.
ಇದು ಗಂಡು ಚಿರತೆಯಾಗಿದ್ದು ಸುಮಾರು 6 ವರ್ಷ ಪ್ರಾಯ ಆಗಿರಬಹುದೆಂದು ಅರಣ್ಯಾಧಿಕಾರಿ ಗಳು ಅಂದಾಜಿಸಿದ್ದಾರೆ. ಚಿರತೆ ದಷ್ಟಪುಷ್ಟವಾಗಿದ್ದು ರಕ್ಷಿಸಿದ ಬಳಿಕ ಆರೋಗ್ಯ ತಪಾಸಣೆ ನಡೆಸಿ, ಸುರಕ್ಷಿತ ಪ್ರದೇಶಕ್ಕೆ ಬಿಡಲಾಯಿತು.
ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್ ನರೇಗಲ್, ಪ್ರಕಾಶ್, ಮಹಾಂತೇಶ್ ಎಚ್ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಹಾಗೂ ಇನ್ನಿತರರ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ