ರಾಮರಾಜ್ಯ ನಿರ್ಮಾಣವಾಗಲು ಸಮಾಜೋತ್ಸವ ಸ್ಪೂರ್ತಿನೀಡಲಿ: ಪೇಜಾವರ ಶ್ರೀ

ಶಿರ್ವ ಮಟ್ಟಾರು ಹಿಂದೂ ಸಮಾಜೋತ್ಸವ

Team Udayavani, Nov 28, 2022, 3:39 PM IST

15

ಶಿರ್ವ: ಸಮಾಜವನ್ನು ಜಾಗೃತಗೊಳಿಸಿ ಸಂಘಟನೆ ಬಲಪಡಿಸಲು ಮನೆಯ ಮಕ್ಕಳು ಪರಕೀಯರಾಗದಂತೆ ಪ್ರೇರಣೆ ನೀಡಿ ನಮ್ಮ ಸಂಸ್ಕೃತಿ, ಸಂಸ್ಕಾರ ಆಚಾರ ವಿಚಾರಗಳನ್ನು ಕಲಿಸಿ ಹಿಂದೂ ಧರ್ಮದಲ್ಲಿಯೇ ಶಾಶ್ವತವಾಗಿ ಉಳಿಯುವಂತೆ ಮಾಡಬೇಕು. ಆ ಮೂಲಕ ಧರ್ಮ ಜಾಗೃತವಾಗಲು ಸಮಾಜೋತ್ಸವ ಸ್ಪೂರ್ತಿ ನೀಡಿ ರಾಮರಾಜ್ಯ ನಿರ್ಮಾಣವಾಗಲಿ ಎಂದು ಅಯೋಧ್ಯಾ ಶ್ರೀರಾಮ ಜನ್ಮಭೂಮಿ, ಶ್ರೀರಾಮಮಂದಿರ ನಿರ್ಮಾಣ ಸಮಿತಿಯ ವಿಶ್ವಸ್ಥ, ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಅವರು ನ. 27 ರಂದು ಮಟ್ಟಾರು ಕೂಡಲ್ಕೆ ಮೈದಾನದಲ್ಲಿ ವಿಶ್ವಹಿಂದು ಪರಿಷದ್‌, ಬಜರಂಗದಳ ಮತ್ತು ಮಟ್ಟಾರು ಮಾತೃಶಕ್ತಿ ದುರ್ಗಾವಾಹಿನಿಯ ನೇತೃತ್ವದಲ್ಲಿ ನಡೆದ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಿ ಆಶೀರ್ವವಚನ ನೀಡಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮೂಡಬಿದ್ರಿ ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ತ್ಯಾಗ ಮತ್ತು ಶೌರ್ಯದ ಪ್ರತೀಕವಾದ ಕೇಸರಿ ಶಾಲು ಧರಿಸಿದ ಮಟ್ಟಾರಿನ ಹಿಂದೂ ಬಾಂಧವರು ಸಮಾಜಕ್ಕೆ ಮಾದರಿಯಾಗಿ ಧರ್ಮ ಸದೃಢವಾಗಲಿ ಎಂದು ಹೇಳಿದರು.

ಕುತ್ಯಾರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀಪೀಠದ ಶ್ರೀಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಮತ್ತು ಸುರತ್ಕಲ್‌ ಕುಳಾಯಿ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಚಿಂತಕ, ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಿ ಮನೆಮನೆಯಲ್ಲಿ ಹಿಂದೂ ಧರ್ಮದ ಚಿಂತನೆ ನಡೆದು ಹಿಂದೂ ಸಮಾಜ ಒಗ್ಗಟ್ಟಾಗುವ ಶಕ್ತಿ ಜಗತ್ತಿನಲ್ಲಿ ಅನಾವರಣಗೊಂಡಾಗ ಜಗತ್ತು ಶಾಂತಿಯಿಂದ ನೆಲೆಸುತ್ತದೆ ಎಂದು ಹೇಳಿದರು.

ಮಟ್ಟಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಮರಾಜ್ಯ ನಿರ್ಮಾಣವಾಗಲು ಸಮಾಜೋತ್ಸವ ಸ್ಪೂರ್ತಿನೀಡಲಿ: ಪೇಜಾವರ ಶ್ರೀ

ವಿಹಿಂಪ ಉಡುಪಿ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಕರ್ನಾಟಕ ದಕ್ಷಿಣ ಪ್ರಾಂತ ಬಜರಂಗದಳ ಸಂಚಾಲಕ ಸಂಚಾಲಕ ಸುನೀಲ್‌ ಕೆ.ಆರ್‌, ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್‌ ಮೆಂಡನ್‌, ಬಜರಂಗದಳ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ, ಉಡುಪಿ ಜಿಲ್ಲಾ ಮಾತೃಪ್ರಮುಖ್‌ ಪೂರ್ಣಿಮಾ ಸುರೇಶ್‌, ಶಿರ್ವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ‌ದ ಆಡಳಿತ ಮಂಡಳಿ ಅಧ್ಯಕ್ಷ ಶಿರ್ವನಡಿಬೆಟ್ಟು ನಿತ್ಯಾನಂದ ಹೆಗ್ಡೆ, ವಿಹಿಂಪ ಗೌರ‌ವಾಧ್ಯಕ್ಷ ವಿಜಯ ಪೂಜಾರಿ, ಅಧ್ಯಕ್ಷ ಪ್ರಕಾಶ್‌ ಶೆಟ್ಟಿ, ಬಜರಂಗದಳ ಸಂಚಾಲಕ ವಿಶ್ವನಾಥ ಆಚಾರ್ಯ, ಮಾತೃಶಕ್ತಿ ಪ್ರಮುಖ್‌ ಸುಲೋಚನಾ ಆಚಾರ್ಯ ಮತ್ತು ದುರ್ಗಾವಾಹಿನಿ ಸಂಚಾಲಕಿ ದೀಕ್ಷಾ ಪ್ರಭು ವೇದಿಕೆಯಲ್ಲಿದ್ದರು.

ವಿಹಿಂಪ ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್‌ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ರಾಜೇಂದ್ರ ಶೆಣೈ ಸ್ವಾಗತಿಸಿದರು. ಎನ್‌.ಆರ್‌.ದಾಮೋದರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಿಖ್ಯಾತ್‌ ಭಟ್‌ ವಂದಿಸಿದರು.

ಬೃಹತ್‌ ಬೈಕ್‌ ರ್ಯಾಲಿ ಸಮಾಜೋತ್ಸವದ ಪೂರ್ವಭಾವಿಯಾಗಿ ಮಧ್ಯಾಹ್ನ ಶಿರ್ವ ಪೇಟೆಯಿಂದ ನಡೆದ ಬೃಹತ್‌ ಬೈಕ್‌ ರ್ಯಾಲಿಗೆ ಶಿರ್ವ ಗಾ.ಪಂ. ಅಧ್ಯಕ್ಷ ರತನ್‌ ಶೆಟ್ಟಿ ಚಾಲನೆ ನೀಡಿದರು.

ಬೆಳ್ಳೆ ನಾಲ್ಕು ಬೀದಿ ಜಂಕ್ಷನ್‌ ನಿಂದ ಮಟ್ಟಾರು ಕೇಂದ್ರ ಸ್ಥಾನಕ್ಕೆ ನಡೆದ ಬೃಹತ್‌ ಶೋಭಾಯಾತ್ರೆಗೆ ವಿಹಿಂಪ ಉಡುಪಿ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ ಮತ್ತು ಉದ್ಯಮಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಚಾಲನೆ ನೀಡಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.