ಲೋಡ್‌ ಶೆಡ್ಡಿಂಗ್‌ ಇಲ್ಲ ; ವಿದ್ಯುತ್‌ ವ್ಯತ್ಯಯದ ಕಿರಿಕಿರಿ ತಪ್ಪಿಲ್ಲ


Team Udayavani, Apr 11, 2023, 7:32 AM IST

ಲೋಡ್‌ ಶೆಡ್ಡಿಂಗ್‌ ಇಲ್ಲ ; ವಿದ್ಯುತ್‌ ವ್ಯತ್ಯಯದ ಕಿರಿಕಿರಿ ತಪ್ಪಿಲ್ಲ

ಉಡುಪಿ: ಕರಾವಳಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿತ್ಯವೂ ಒಂದೆರೆಡು ಗಂಟೆ ವಿದ್ಯುತ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಕೆಲವು ದಿನ ಬೆಳಗ್ಗೆ ವಿದ್ಯುತ್‌ ವ್ಯತ್ಯಯವಾದರೆ, ಇನ್ನು ಕೆಲವು ದಿನ ಮಧ್ಯಾಹ್ನ, ರಾತ್ರಿ ವೇಳೆಯಲ್ಲಿ ನಾಪತ್ತೆಯಾಗುವುದು ಸಾಮಾನ್ಯವಾಗಿ ಬಿಟ್ಟಿದೆ.

ಬೇಸಗೆ ಆರಂಭಕ್ಕೂ ಮೊದಲೇ ವಿದ್ಯುತ್‌ ವ್ಯತ್ಯಯ ಆರಂಭವಾಗಿತ್ತು. ಅದರ ಜತೆಗೆ ಸಂಪ್ರದಾಯದಂತೆ ಪ್ರತೀ ಮಂಗಳವಾರ ಬೆಳಗ್ಗಿನಿಂದ ಸಂಜೆಯವರೆಗೂ ವಿದ್ಯುತ್‌ ಇರುವುದಿಲ್ಲ. ಯಾವುದೇ ಒಂದು ಲೈನ್‌ನಲ್ಲಿ ತಾಂತ್ರಿಕ ಕಾರ್ಯ ಅಥವಾ ನಿರ್ವಹಣೆ ಕೆಲಸಗಳಿದ್ದರೂ ಇಡೀ ಎಲ್ಲ ಕಡೆಗಳಲ್ಲೂ ವಿದ್ಯುತ್‌ ವ್ಯತ್ಯಯ ಮಾಡಲಾಗುತ್ತಿದೆ.

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದೆ. ಬೇಸಗೆಯ ಬೇಗೆಯೂ ಹೆಚ್ಚಿರುವುದರಿಂದ ದಿನ ಪೂರ್ತಿ ವಿದ್ಯುತ್‌ನ ಅಗತ್ಯ ಹೆಚ್ಚಿದೆ. ಮನೆಯೊಳಗೆ ಫ್ಯಾನ್‌, ಎಸಿ, ಕೂಲರ್‌ಗಳನ್ನು ಆನ್‌ ಮಾಡಿಕೊಂಡೇ ಇರಬೇಕಾದ ಪರಿಸ್ಥಿತಿಯಿದೆ.

ಕೊರತೆ ಇಲ್ಲ
ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತೀ ದಿನ 26 ಮಿಲಿಯ ಯುನಿಟ್‌ ವಿದ್ಯುತ್‌ ಅಗತ್ಯವಿದೆ. ಈ ಪೈಕಿ ಸುಮಾರು 4.50 ಮಿ. ಯುನಿಟ್‌ ಉಡುಪಿ ಜಿಲ್ಲೆಗೆ ಹಾಗೂ ಸುಮಾರು 7 ಮಿ. ಯುನಿಟ್‌ಗೂ ಅಧಿಕ ವಿದ್ಯುತ್‌ ದಕ್ಷಿಣ ಕನ್ನಡಕ್ಕೆ ಅಗತ್ಯವಿದೆ. ಬೇಡಿಕೆ ಹೆಚ್ಚಿದ್ದ ಸಂದರ್ಭದಲ್ಲಿ ಇದರಲ್ಲಿ ಸ್ವಲ್ಪ ವ್ಯತ್ಯಾಸವೂ ಆಗುವ ಸಾಧ್ಯತೆಯಿದೆ. ಬಳಕೆಯ ಆಧಾರದಲ್ಲಿ ನಿತ್ಯವೂ ಬೇಡಿಕೆ ಪ್ರಮಾಣ ಬದಲಾಗುತ್ತದೆ. ವಿದ್ಯುತ್‌ ಪೂರೈಕೆ ಕಡಿಮೆಯಾಗಿಲ್ಲ ಮತ್ತು ಲೋಡ್‌ಶೆಡ್ಡಿಂಗ್‌ ಕೂಡ ಇಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಲೋಡ್‌ ಶೆಡ್ಡಿಂಗ್‌ ಭೀತಿ
ಬೇಸಗೆ ಆರಂಭ ವಾಗಿರು ವುದರಿಂದ ಎಲ್ಲೆಡೆ ನೀರಿನ ಸಮಸ್ಯೆ ಹೆಚ್ಚಾಗಿದೆ. ಹಾಗೆಯೇ ವಿದ್ಯುತ್‌ ಪೂರೈಕೆ ಪ್ರಮಾಣವೂ ಸಹಜವಾಗಿ ಹೆಚ್ಚಾಗಿದೆ. ಅಧಿಕಾರಿಗಳು ಲೋಡ್‌ ಶೆಡ್ಡಿಂಗ್‌ ಇಲ್ಲ ಎನ್ನುತ್ತಿದ್ದಾರೆ. ಆದರೆ ಬೆಳಗ್ಗೆ, ಸಂಜೆ ವಿದ್ಯುತ್‌ ವ್ಯತ್ಯಯ ಆಗುತ್ತಿರುತ್ತದೆ. ಕೆಲವೊಂದು ಎರಡು ಮೂರು ಗಂಟೆಗಳು ವಿದ್ಯುತ್‌ ಇರುವುದಿಲ್ಲ. ಮೇ ಅಂತ್ಯದ ವರೆಗೂ ಇದೇ ಪರಿಸ್ಥಿತಿ ಇರುವುದರಿಂದ ಲೋಡ್‌ಶೆಡ್ಡಿಂಗ್‌ ಭೀತಿ ಮಾತ್ರ ಎಲ್ಲರಲ್ಲೂ ಇದೆ.

ಶಾಲಾ ಮಕ್ಕಳಿಗೆ ರಜೆ ಆರಂಭ ವಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿದಿದ್ದು ಕೆಲವರು ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯಲ್ಲಿದಾರೆ. ಐಪಿಎಲ್‌ ಹಾಗೂ ಚುನಾವಣೆ ಹವಾ ಕೂಡ ಆರಂಭವಾಗಿ ರುವುದರಿಂದ ಮನೆಗಳಲ್ಲಿ ಟಿವಿ, ಫ್ಯಾನ್‌ ಸದಾ ಕಾಲ ಆನ್‌ ಇರುತ್ತದೆ. ಮಕ್ಕಳು ಮನೆಯಲ್ಲೇ ಇರುವುದರಿಂದ ಟಿವಿ ನೋಡುವುದು ಹೆಚ್ಚಿದೆ. ಅಲ್ಲದೆ ವಿವಿಧ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತಿವೆ. ಇದೆಲ್ಲವೂ ವಿದ್ಯುತ್‌ ಬೇಡಿಕೆ ಹೆಚ್ಚಲು ಕಾರಣ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.