ಬ್ರಹ್ಮಾವರ ತಾಲೂಕು ಪಂಚಾಯತ್ ಕಚೇರಿ ಆರಂಭಕ್ಕೆ ಸ್ಥಳ ಪರಿಶೀಲನೆ
Team Udayavani, May 29, 2020, 5:01 AM IST
ಬ್ರಹ್ಮಾವರ: ತಾಲೂಕು ಆಗಿ ಘೋಷಣೆಯಾದ ಬ್ರಹ್ಮಾವರದಲ್ಲಿ ತತ್ಕ್ಷಣದಲ್ಲಿ ತಾತ್ಕಾಲಿಕವಾಗಿ ಕಚೇರಿ ಆರಂಭಿಸುವ ಬಗ್ಗೆ ಶಾಸಕ ಕೆ. ರಘುಪತಿ ಭಟ್ ಅವರು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಹೊಸ ಕಟ್ಟಡ ನಿರ್ಮಾಣ ಆಗುವವರೆಗೆ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಹಳೆ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಬ್ರಹ್ಮಾವರ ತಾಲೂಕು ಕಚೇರಿ ಆರಂಭಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ತತ್ಕ್ಷಣದಲ್ಲಿ ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಸಭೆ ಕರೆದು ಸರಕಾರದ ನಿಯಮಾವಳಿಯಂತೆ ಅನುಮತಿ ಪಡೆದು ಮೂಲಸೌಕರ್ಯಗಳನ್ನು ಕಲ್ಪಿಸಲು ತಿಳಿಸಿದರು.
ತಾಲೂಕು ಪಂಚಾಯತ್ ನೂತನ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಯೋಜನೆ ರೂಪಿಸಲು ಅಧಿಕಾರಿಗಳಿಗೆ ತಿಳಿಸಿದರು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಭುಜಂಗ ಶೆಟ್ಟಿ, ಸದಸ್ಯರಾದ ಸುಧೀರ್ ಶೆಟ್ಟಿ, ದಿನಕರ ಹೇರೂರು, ವಸಂತಿ, ನಳಿನಿ ಪ್ರದೀಪ್ ರಾವ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೋಹನ್ರಾಜ್, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ, ಆರೋಗ್ಯ ಅಧಿಕಾರಿ, ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?