ಉಡುಪಿಯ ಸರಕಾರಿ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಸರಕಾರಿ ಕಚೇರಿಗಳಲ್ಲೇ ಪಾಲನೆಯಾಗದ ಅದೇಶ; ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಅಧಿಕಾರಿಗಳು ಕಂಗಾಲು.

Team Udayavani, Jun 23, 2020, 12:19 PM IST

ಉಡುಪಿಯ ಸರಕಾರಿ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಉಡುಪಿ: ಲೋಕಾಯುಕ್ತ ಅಧಿಕಾರಿಗಳ ತಂಡ ಉಡುಪಿಯಲ್ಲಿ ಕಾರ್ಯಚರಣೆಗಿಳಿದಿದ್ದು, ಉಡುಪಿಯ ಸರಕಾರಿ ಕಚೇರಿಗಳಿಗೆ ಡಿವೈ ಎಸ್ ಪಿ ಭಾಸ್ಕರ್ ವಿ ಬಿ ಮತ್ತವರ ತಂಡ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಕೋವಿಡ್ 19 ಸೋಂಕು ತೀವ್ರವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ, ಅದನ್ನು ನಿಯಂತ್ರಿಸಲು ಸರಕಾರಿ‌ ಇಲಾಖೆಗಳು ಯಾವ ರೀತಿ ಕಾರ್ಯ ನಿರ್ವಹಿಸುತ್ತಿದೆ ಎನ್ನುವುದನ್ನು ಪರಿಶೀಲನೆ ನಡೆಸಲು ಸೋಮವಾರ ಲೋಕಾಯುಕ್ತ ತಂಡ ಫೀಲ್ಡ್ ಗಿಳಿದಿತ್ತು. ಈ ಕುರಿತು ಮಾಹಿತಿ ಇಂದು ಹೊರಬಿದ್ದಿದೆ.

ಸರಕಾರಿ‌ ಅಧಿಕಾರಿಗಳ ಬೇಜವಾಬ್ದಾರಿ‌ ಕಂಡು ಲೋಕಾಯುಕ್ತ ಅಧಿಕಾರಿಗಳು ಶಾಕ್ ಆಗಿದ್ದಾರೆ. ಕೋವಿಡ್ ವೈರಸ್ ನಿಯಂತ್ರಿಸಲು ಪ್ರಮುಖ ಪಾತ್ರ ವಹಿಸಬೇಕಾದ ನಗರ ಸಭೆಯಲ್ಲಿ ಸರಕಾರದ ನಿಯಮಾವಳಿಗಳು ಉಲ್ಲಂಘನೆಯಾಗಿದ್ದು‌ ಕಂಡು ಬಂದಿದೆ. ನಗರ ಸಭೆಯಲ್ಲಿ ಸಾಮಾಜಿಕ ಅಂತರ ಮರೆಯಾಗಿದ್ದು, ನಗರ ಸಭೆಗೆ‌ ಒಳ ಪ್ರವೇಶಿಸುವ  ಬಳಿ ಸಾನಿಟೈಸರ್ ಒಂದನ್ನು ಇರಿಸಿರುವುದು ಬಿಟ್ಟರೆ, ಬೇರೆ‌ ಸರಕಾರಿ ನಿಯಾಮಗಳು ಪಾಲನೆಯಾಗದಿರುವುದು ಕಂಡ ಲೋಕಾಯುಕ್ತರು ಅಧಿಕಾರಿಗಳನ್ನ ತಾರಟೆಗೆ ತೆಗೆದುಕೊಂಡರು.

ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ಮಾಸ್ಕ್ ಹಾಕದೇ ಕಾರ್ಯ ನಿರ್ವಹಿಸುತ್ತಿರುವುದು ದಾಳಿಯ ವೇಳೆಗೆ ಕಂಡು ಬಂದಿದೆ. ಕಚೇರಿಯೊಳಗಡೆ ಹೊರಗಡೆ ಹೋಗುವವರ ವಿವರಗಳನ್ನು ನಮೋದಿಸಬೇಕೆಂಬ ನಿಯಮವಿದ್ದರೂ, ಇಲ್ಲಿ ಪಾಲನೆಯಾಗುತ್ತಿಲ್ಲ. ತಾಲೂಕು‌ ಕಚೇರಿ ಅವರಣದಲ್ಲಿರುವ ಕ್ಯಾಂಟೀನ್ ನಲ್ಲಿ ಯಾವುದೇ ಸುರಕ್ಷತಾ ಕ್ರಮ ಇಲ್ಲದಿರುವುದನ್ನು ಕಂಡ ಡಿವೈಎಸ್ ಪಿ ಗರಂ ಅದರು. ಸಬ್ ರಿಜಿಸ್ಟ್ ರ್ ಕಚೇರಿಯಲ್ಲೂ ನಿಯಮವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿತ್ತು. ಗುಂಪು ಗುಂಪಾಗಿ‌ ಸಾಮಾಜಿಕ ಅಂತರ ಮರೆತು ಸಾರ್ವಜನಿಕರು ಸೇರಿದ್ದರು. ಇಲ್ಲಿ ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಿರದೇ ಇರುವುದು ಲೋಕಾಯುಕ್ತ ದಾಳಿ ವೇಳೆಗೆ ಕಂಡು ಬಂದಿದೆ.

ನಗರದ ಎಪಿಎಂಸಿ ಮಾರುಕಟ್ಟೆ ಸೇರಿದಂತೆ ಹಲವೆಡೆ ಲೋಕಾಯುಕ್ತ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಸರಕಾರಿ ಕಚೇರಿ‌ ಮಾತ್ರವಲ್ಲದೇ ನಗರದ ಕೆಲವೊಂದು ಹೋಟೆಲುಗಳು, ಎಲೆಕ್ಟ್ರಾನಿಕ್ ಮಳಿಗೆ, ಬಾರ್ ಅ್ಯಂಡ್ ರೆಸ್ಟೋರೆಂಟ್ ಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಾಮಾಜಿಕ‌ ಅಂತರ ಹಾಗೂ ಸರಕಾರಿ ಅದೇಶ ಉಲ್ಲಂಘನೆ ಮಾಡುವ ಅಂಗಿಡಿ ಮಾಲೀಕರ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.