ದತ್ತು ತೆಗೆದುಕೊಳ್ಳುವವರಿಗೆ ದೀರ್ಘಾವಧಿ ಪ್ರಕ್ರಿಯೆ ತೊಡಕು

ಮಕ್ಕಳ ದತ್ತು ಸ್ವೀಕಾರಕ್ಕೆ ಕರೆಗಳ ಸುರಿಮಳೆ

Team Udayavani, Dec 30, 2020, 6:16 AM IST

ದತ್ತು ತೆಗೆದುಕೊಳ್ಳುವವರಿಗೆ ದೀರ್ಘಾವಧಿ ಪ್ರಕ್ರಿಯೆ ತೊಡಕು

ಉಡುಪಿ: ವಿವಿಧ ಕಾರಣಗಳಿಗಾಗಿ ಮಕ್ಕಳನ್ನು ಪಡೆಯಲು ಇಚ್ಛಿಸುವವರ ಸಂಖ್ಯೆ ಅಧಿಕವಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿಯೂ ಯಾವುದಾದರೊಂದು ಮಗು ಪತ್ತೆಯಾದರೆ ದತ್ತು ಸ್ವೀಕರಿಸಲು ಕರೆಗಳ ಸುರಿಮಳೆಯೇ ಬರುತ್ತದೆ. ಆದರೆ ಇದರ ಪ್ರಕ್ರಿಯೆ ದೀರ್ಫಾವಧಿಯಾಗಿದ್ದು ಅನಂತರವಷ್ಟೇ ಮಕ್ಕಳನ್ನು ದತ್ತು ಪಡೆಯಬಹುದಾಗಿದೆ.

4 ವರ್ಷದೊಳಗಿನ ಮಕ್ಕಳನ್ನು ದತ್ತು ಪಡೆಯಲು ಬಯಸುವ ದಂಪತಿಯ ಒಟ್ಟು ವಯಸ್ಸು 90 ಮೀರಿರಬಾರದು. ಹಾಗೆಯೇ ಏಕ ಪೋಷಕರ ವಯಸ್ಸು 45ಕ್ಕಿಂತ ಅಧಿಕ ಮೀರಿರಬಾರದು. 4ರಿಂದ8 ವರ್ಷದ ಮಕ್ಕಳನ್ನು ದತ್ತು ತೆಗೆದುಕೊಳ್ಳಬಯಸುವ ದಂಪತಿಗಳ ಒಟ್ಟು ವಯಸ್ಸು 100ಕ್ಕಿಂತ ಅಧಿಕ ಮೀರಿರಬಾರದು. ಹಾಗೆಯೇ ಏಕಪೋಷಕರ ವಯಸ್ಸು 50ಕ್ಕಿಂತ ಅಧಿಕ ಇರಬಾರದು. 8ರಿಂದ18 ವರ್ಷದೊಳಗಿನ ಮಕ್ಕಳನ್ನು ದತ್ತು ಪಡೆಯಲು ಬಯಸುವ ದಂಪತಿಯ ಒಟ್ಟು ವಯಸ್ಸು 110 ಮೀರಿರಬಾರದು. ಏಕಪೋಷಕರ ವಯಸ್ಸು 55ಕ್ಕಿಂತ ಅಧಿಕ ಇರಕೂಡದು ಎಂಬ ನಿಯಮಾವಳಿಗಳಿವೆ. ಹಾಗೆಯೇ ಏಕಪೋಷಕ ಪುರುಷರು ಹೆಣ್ಣುಮಕ್ಕಳನ್ನು ದತ್ತು ಸ್ವೀಕರಿಸುವಂತಿಲ್ಲ. ಏಕಪೋಷಕ ಮಹಿಳೆಯರು ಗಂಡು ಮಕ್ಕಳನ್ನು ದತ್ತು ಸ್ವೀಕಾರ ಮಾಡುವಂತಿಲ್ಲ ಎಂಬಂತಹ ನಿಯಮಗಳಿವೆ.

ದತ್ತು ಸ್ವೀಕಾರಕ್ಕೆ ಲಭ್ಯ
ಪರಿಸ್ಥಿತಿಯ ಒತ್ತಡದಿಂದ ನೈಜ ತಂದೆ-ತಾಯಿಗಳು ಅಥವಾ ಪೋಷಕರು ತಮ್ಮ ಸ್ವಇಚ್ಛೆಯಿಂದ ಮಕ್ಕಳನ್ನು ಪರಿತ್ಯಜಿಸಿ ಯಾವುದಾದರೂ ಒಂದು ಸೇವಾ ಸಂಸ್ಥೆಗೆ ಒಪ್ಪಿಸುತ್ತಾರೆ. ಇದರಲ್ಲಿ ಅವಿವಾಹಿತ ತಾಯಂದಿರ ಮಕ್ಕಳೂ ಸೇರಿರುತ್ತಾರೆ. ಮಗುವನ್ನು ಪರಿತ್ಯಜಿಸಿದ ಪಾಲಕರು ಅಥವಾ ಪೋಷಕರು ಪರಿತ್ಯಜಿಸಿದ ಬಗ್ಗೆ ಲಿಖೀತ ದಾಖಲೆಯನ್ನು ನೀಡಬೇಕು. ಅನಂತರ ಸಂಬಂಧಪಟ್ಟ ಸಂಸ್ಥೆಯು ಅಂತಹ ಮಗುವು ದತ್ತು ನೀಡಲು ಅರ್ಹವಿದೆ ಎಂದು ನ್ಯಾಯಾಲಯದ ಮುಂದೆ ಹೇಳಬೇಕಾಗುತ್ತದೆ.

ಅನುಮತಿ ಅಗತ್ಯ
ಸಾರ್ವಜನಿಕ ಸ್ಥಳಗಳಲ್ಲಿ ಕಳೆದು ಹೋದ ಅಥವಾ ಆಸ್ಪತ್ರೆಯಲ್ಲಿ ಅನಾಥವಾಗಿ ದೊರಕುವ ಮಕ್ಕಳನ್ನು ಆರಕ್ಷಕರು ತಮ್ಮ ವಶಕ್ಕೆ ತೆಗೆದುಕೊಂಡು ಬಾಲ ನ್ಯಾಯಾಲಯ ಮಂಡಳಿಯ ಮುಂದೆ ಹಾಜರುಪಡಿಸುತ್ತಾರೆ. ನ್ಯಾಯಾಲಯವು ಮಕ್ಕಳ ನೈಜ ಪಾಲಕರನ್ನು ಹುಡುಕಲು ನಿರ್ದೇಶಿಸಿದ ಅನಂತರ ವಿಚಾರಣೆಯಿಂದ ನೈಜ ಪಾಲಕರು/ಪೋಷಕರು ದೊರಕದಿದ್ದಾಗ ಅಂತಹ ಮಗುವನ್ನು ಅನಾಥ ಎಂದು ನಿರ್ಧರಿಸಲಾಗುತ್ತವೆ. ಅಂತಹ ಮಕ್ಕಳು ದತ್ತು ಸ್ವೀಕಾರಕ್ಕೆ ದೊರಕುತ್ತಾರೆ. ಸಂಸ್ಥೆಗಳಿಗೆ ಕಮಿಟ್‌ ಆಗಿರುವ ಮಕ್ಕಳನ್ನು ಇಂತಹ ಮಕ್ಕಳ ಸಂರಕ್ಷಕರಾದ ರಾಜ್ಯ ಸರಕಾರದ ಅನುಮತಿಯನ್ನು ಪಡೆದು ದತ್ತು ನೀಡಬಹುದು.

ವಿಶೇಷ ರಕ್ಷಣೆಯ ಅಗತ್ಯವಿರುವ ಮಕ್ಕಳು ಅಂದರೆ ಅಂಗವಿಕಲರು, ಮಂದ ಮತಿಯರು ಆಗಿದ್ದಲ್ಲಿ ಅಂತಹ ಮಕ್ಕಳನ್ನು ದತ್ತು ನೀಡಲು ಅವಕಾಶವಿರುತ್ತದೆ.

ಅರ್ಹತೆ ಅಗತ್ಯ
ಮಕ್ಕಳನ್ನು ದತ್ತು ಸ್ವೀಕರಿಸಲು ಹಲವಾರು ನಿಯಮಾವಳಿಗಳಿದೆ. ಕಾನೂನು ಪ್ರಕ್ರಿಯೆ ಸಹಿತ ಎಲ್ಲ ರೀತಿಯಿಂದ ಅರ್ಹತೆ ಇದ್ದರೆ ಮಾತ್ರ ದತ್ತು ಸ್ವೀಕಾರ ಮಾಡಬಹುದಾಗಿದೆ. ಮುಖ್ಯವಾಗಿ ದತ್ತು ತೆಗೆದುಕೊಳ್ಳಲು ಬಯಸುವವರ ಹಿನ್ನೆಲೆಯನ್ನೂ ಪರಿಶೀಲನೆಗೊಳಪಡಿಸಲಾಗುತ್ತದೆ.
-ಸದಾನಂದ ನಾಯಕ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.