Karkala ನಗರದಲ್ಲಿ ಕರ್ಕಶ ಹಾರ್ನ್ ಕಿರಿಕಿರಿ!

ಪ್ರತಿನಿತ್ಯ ಶಬ್ದ ಮಾಲಿನ್ಯವಾಗುತ್ತಿದ್ದರೂ ಕ್ರಮ ವಹಿಸದ ಸಾರಿಗೆ ಇಲಾಖೆ

Team Udayavani, May 17, 2023, 3:52 PM IST

Karkala ನಗರದಲ್ಲಿ ಕರ್ಕಶ ಹಾರ್ನ್ ಕಿರಿಕಿರಿ!

ಕಾರ್ಕಳ: ಶಬ್ದ ಮಾಲಿನ್ಯಕ್ಕೆ ವಾಹನಗಳ ಹಾರ್ನ್ ಕೂಡ ಒಂದು ಕಾರಣ. ಕಾರ್ಕಳ ನಗರ ವ್ಯಾಪ್ತಿಯಲ್ಲಿ ಕರ್ಕಶ ಹಾರ್ನ್ ಹಾವಳಿ ಹೆಚ್ಚಿದ್ದು ಸಾರ್ವಜನಿಕರು ಇದರಿಂದ ನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ, ಕಾರ್ಕಳ ನಗರ ಬೆಳೆಯುತ್ತಿದೆ. ವಾಹನಗಳ ಸಂಚಾರವೂ ಅಧಿಕವಾಗುತ್ತಿದೆ.

ಬಂಡಿಮಠದಿಂದ ಕಾರ್ಕಳ ಬಸ್‌ ನಿಲ್ದಾಣದ ವರೆಗೆ ವಾಹನಗಳ ಓಡಾಟ ಹೆಚ್ಚಿದೆ. ವಾಹನಗಳು ನಗರ ಪ್ರವೇಶಿಸುತ್ತಲೇ ಕರ್ಕಶ ಹಾರ್ನ್ ಮೊಳಗುವುದಕ್ಕೆ ಆರಂಭವಾಗುತ್ತದೆ. ಇದರಿಂದ ರಸ್ತೆ ಬದಿ ವ್ಯಾಪಾರಿಗಳು, ಪಾದಚಾರಿಗಳಿಗೆ ಕಿರಿಕಿರಿ ಅನುಭವವಾಗುತ್ತದೆ. ಇದನ್ನು ತಡೆಗಟ್ಟುವಲ್ಲಿ ಸಾರಿಗೆ ಇಲಾಖೆ ವಿಫ‌ಲವಾಗಿದೆ. ಇದರಿಂದಾಗಿ ನಿತ್ಯವೂ ಶಬ್ಧ ಮಾಲಿನ್ಯದಿಂದ ನಾಗರಿಕರೂ ಹಿಡಿಶಾಪ ಹಾಕುತ್ತಿರುತ್ತಾರೆ.

ಜಿಲ್ಲಾ ಕೇಂದ್ರ ಉಡುಪಿ ಕಡೆಯಿಂದ ಹಾಗೂ ಮಂಗಳೂರು ರಸ್ತೆಯ ಮೂರು ಮಾರ್ಗವಾಗಿ ಅತೀ ಹೆಚ್ಚು ವಾಹನಗಳು ನಗರದ ಬಸ್‌ ನಿಲ್ದಾಣ ತಲುಪುತ್ತವೆ. ಉಡುಪಿ, ಮಂಗಳೂರು ನಗರಗಳಿಗೆ ತೆರಳುವ ಸರ್ವಿಸ್‌ ಬಸ್‌, ಹೆಬ್ರಿ, ಬಜಗೋಳಿ, ನಿಟ್ಟೆ, ಹೀಗೆ ಗ್ರಾಮಿಣ ಭಾಗಕ್ಕೆ ಸಂಚಾರ ಕೈಗೊಳ್ಳುವ ಬಸ್‌ಗಳು ಸೇರಿ ಸುತ್ತಲಿನಿಂದ ವಾಹನಗಳು ಪೇಟೆ ತಲುಪುತ್ತಿದ್ದಂತೆ ವಾಹನಗಳಿಂದ ತುಂಬಿ ಟ್ರಾಫಿಕ್‌ ಜಾಮ್‌ ಉಂಟಾಗುತ್ತದೆ.

ನಗರ ಬೆಳೆದಂತೆ ಕಿರಿದಾದ ರಸ್ತೆಗಳು ವಾಹನ ಒತ್ತಡಕ್ಕೆ ಒಳಗಾಗುತ್ತವೆ. ಅದರಲ್ಲೂ ವಿವಿಧ ಊರುಗಳಿಂದ ನಗರ ಬಸ್‌ಸ್ಟಾಂಡ್‌ಗೆ ಬಂದು ಹೋಗುವ ಬಸ್‌ಗಳಲ್ಲಿ ಸರ್ವೀಸ್‌ ಬಸ್‌ಗಳೇ ಅಧಿಕ. ಮೂರು ರಸ್ತೆಗಳಲ್ಲಿ ಲಘು ವಾಹನ, ದ್ವಿಚಕ್ರ ವಾಹನ ಅಡ್ಡ ಬಂದಾಗೆಲ್ಲ ಕರ್ಕಶವಾಗಿ ಹಾರ್ನ್ ಮೊಳಗಿಸಿಕೊಂಡು ಹೋಗುವುದು ಇಲ್ಲಿ ಸರ್ವೇ ಸಾಮಾನ್ಯವಾಗಿದೆ.

ಪೊಲೀಸರ ಕಣ್ಣೆದುರೇ ಹಾರ್ನ್ ಕಿರಿಕಿರಿ
ಮೂರು ಮಾರ್ಗದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್‌ ಸಿಬಂದಿ ರಸ್ತೆ ಮೇಲೆ ಓಡಾಡುವ ವಾಹನಗಳ ಮೇಲೆ ನಿಗಾ ವಹಿಸುತ್ತಾರೆ. ಟ್ರಾಫಿಕ್‌ ಜಾಮ್‌ ಆದಾಗಲೆಲ್ಲ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಸಿಸಿ ಕೆಮರಾ ಕೂಡ ಇದ್ದು ಹೆಲ್ಮೆಟ್‌ ಧರಿಸದೇ ಓಡಾಡುವವರನ್ನು ಪತ್ತೆ ಹಚ್ಚಿ ದಂಡ ವಿಧಿಸುವ ಕಾರ್ಯಗಳು ಇಲ್ಲಿ ಪೊಲೀಸ್‌ ಇಲಾಖೆಯಿಂದ ನಡೆಯುತ್ತಿದೆ. ಆದರೆ ಪೊಲೀಸರ ಕಣ್ಣೆದುರೇ ಕರ್ಕಶ ಹಾರ್ನ್ ಹಾಕಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡುವ ಬಸ್‌ನವರ ವಿರುದ್ಧ ಕ್ರಮ ವಹಿಸಲು ಇವರಿಗೂ ಅಧಿಕಾರವಿಲ್ಲ.

ವಾಹನಗಳ
ಅಡ್ಡಾದಿಡ್ಡಿ ಓಡಾಟ
ಕಾರ್ಕಳ ನಗರ ತೀರಾ ಕಿರಿದಾಗಿದೆ. ನಗರದೊಳಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆಗಳಿಲ್ಲ. ನಗರಕ್ಕೆ ಬರುವ ಸಾರ್ವಜನಿಕರು ರಸ್ತೆ ಬದಿ, ಅಂಗಡಿಗಳ ಮುಂದೆ ರಸ್ತೆಯಲೇ ವಾಹನ ನಿಲ್ಲಿಸಿ ತೆರಳುತ್ತಾರೆ. ರಸ್ತೆ ಕಿರಿದಾದ್ದರಿಂದ ಲಘು ವಾಹನಗಳು, ದ್ವಿಚಕ್ರ ಸವಾರರು, ಪಾದಚಾರಿಗಳು ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುತ್ತಾರೆ. ಆಗ ಬಸ್‌ನವರು ಹಲವು ನಿಮಿಷಗಳ ಕಾಲ ಹಾರ್ನ್ ಮೊಳಗಿಸುತ್ತಾರೆ. ಇದು ಇಲ್ಲಿ ದೊಡ್ಡ ಸಮಸ್ಯೆಯಾಗಿದೆ.

ಕಾನೂನು ಕ್ರಮ ಅಗತ್ಯ
ಕಾರ್ಕಳದಲ್ಲಿ ಟ್ರಾಫಿಕ್‌ ಪೊಲೀಸ್‌ ಠಾಣೆಯಿಲ್ಲ. ನಗರ ಠಾಣೆ ಪೊಲೀಸ್‌ ಸಿಬಂದಿ ಇಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ನಿವಾರಣೆ ನಡೆಸುತ್ತಾರೆ. ವಾಹನ ಸಂಚಾರ ಕಾನೂನು ಸುವ್ಯವಸ್ಥೆ ಬಗ್ಗೆಯೂ ಅವರೇ ಇಲ್ಲಿ ನೋಡಿಕೊಳ್ಳುತ್ತಿದ್ದಾರೆ. ಸಾರಿಗೆ ಇಲಾಖೆ ಕರ್ಕಶ ಹಾರ್ನ್ಗಳಿಗೆ ಕಡಿವಾಣ ಹಾಕುವಲ್ಲಿ ವಿಫ‌ಲವಾಗಿದೆ. ಜಾಗೃತಿಯೂ ಇಲ್ಲದಾಗಿದೆ. ಹಾರ್ನ್ ಕಿರಿಕಿರಿಯಿಂದ ಅಪಘಾತಗಳು ಸಂಭವಿಸುತ್ತವೆ. ನಗರದಲ್ಲಿ ವ್ಯಾಪಕವಾಗಿರುವ ವಾಹನ ಮಾಲಿನ್ಯ ತಡೆಗೆ ಶಿಸ್ತು ಕಾನೂನು ಕ್ರಮದ ಅಗತ್ಯವಿದ್ದು ಸಾರಿಗೆ ಇಲಾಖೆ ಕಾರ್ಯಾಚರಣೆ ನಡೆಸಿ ನಿಯಂತ್ರಿಸಬೇಕಿದೆ.

ಆರ್‌ಟಿಒ ಅಧಿಕಾರಿಗಳೇ ಕ್ರಮ ವಹಿಸಲಿ
ನಗರದಲ್ಲಿ ವಾಹನ ಶಬ್ದ ಮಾಲಿನ್ಯವಿರುವ ಬಗ್ಗೆ ದೂರುಗಳಿವೆ. ಟ್ರಾಫಿಕ್‌ ಸಮಸ್ಯೆ ಉಂಟಾದಾಗ ನಮ್ಮ ಸಿಬಂದಿ ಕ್ರಮ ವಹಿಸುತ್ತಾರೆ. ವಾಹನಗಳ ಶಬ್ದ ಮಾಲಿನ್ಯಕ್ಕೆ ಸಂಬಂದಿಸಿ ಆರ್‌ಟಿಒ ಇಲಾಖೆ ಅಧಿಕಾರಿಗಳೇ ಕ್ರಮವಹಿಸಬೇಕು
-ಪ್ರಸನ್ನಕುಮಾರ್‌ , ಸಬ್‌ಇನ್‌ಸ್ಪೆಕ್ಟರ್‌ ನಗರ ಠಾಣೆ , ಕಾರ್ಕಳ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.