ಇಂದಿನಿಂದ ಮತ್ತೆ ಕಡಲಿಗೆ
Team Udayavani, Jan 7, 2019, 4:51 AM IST
ಮಲ್ಪೆ: ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಲಂಗರು ಹಾಕಿರುವ ಆಳಸಮುದ್ರ ಬೋಟ್ಗಳು ಸೋಮವಾರದಿಂದ ಕಡಲಿಗಿಳಿಯುವಂತೆ ರವಿವಾರ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಜತೆ ನಡೆಸಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.
ಹಂತ ಹಂತವಾಗಿ ಬೋಟ್ಗಳು ಕಡಲಿಗಿಳಿಯಲಿದ್ದು, ಮೊದಲ ಎರಡು ದಿನ ಎಲ್ಲ ಬೋಟ್ಗಳು ಮೀನುಗಾರಿಕೆ ನಡೆಸದೆ ಕಡ್ಡಾಯವಾಗಿ ತಮ್ಮ ಬೋಟ್ಗಳೊಂದಿಗೆ ನಾಪತ್ತೆಯಾದ ಮೀನುಗಾರರ ಪತ್ತೆ ಕಾರ್ಯ ನಡೆಸಬೇಕು, ಯಾವುದೇ ಸೂಚನೆಗಳು ದೊರೆತಲ್ಲಿ ತತ್ಕ್ಷಣ ಸಂಬಂಧಪಟ್ಟವರಿಗೆ ಮಾಹಿತಿಯನ್ನು ನೀಡಬೇಕೆಂದು ಕೋರಲಾಗಿದೆ.
ಸುಮಾರು 50 ಸಾವಿರ ಮಂದಿ ರವಿವಾರದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಉಪ್ಪಳದಿಂದ ಕಾರವಾರದ ವರೆಗಿನ ಮೀನುಗಾರರಲ್ಲದೆ, ಎಲ್ಲ ಧರ್ಮಗಳ ಬಂಧುಗಳು, ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದು, ಸಹಕರಿಸಿದ ಎಲ್ಲರಿಗೆ ಸಮಸ್ತ ಮೀನುಗಾರರ ಪರವಾಗಿ ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ